‘ನನ್ನ ಬೆಂಬಲಿಗರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಭಾಷಣಕ್ಕೆ ಅಡ್ಡಿಪಡಿಸಿಲ್ಲ. ಸಿದ್ದರಾಮಯ್ಯ ತಮ್ಮ ಭಾಷಣ ಮೊಟಕುಗೊಳಿಸಿಲ್ಲ. ಪುನೀತ್ರಾಜ್ಕುಮಾರ್ ಅವರ ಕಾರ್ಯಕ್ರಮ ಇದ್ದುದ್ದರಿಂದ ಅವರು ಕೇವಲ 5 ನಿಮಿಷ ಮಾತನಾಡಿ ತೆರಳಿದ್ದಾರೆ. ನನಗೆ ಜಯಕಾರ ಹಾಕಿದ್ದನ್ನು ನೋಡಿ ಅವರಿಗೂ ಖುಷಿಯಾಗಿದೆ. ಈ ಕುರಿತು ನನ್ನೊಂದಿಗೆ ಅವರು ದೂರವಾಣಿ ಮೂಲಕ ಮಾತನಾಡಿದ್ದಾರೆ. ನನ್ನ ಮತ್ತು ಅವರ ಸಂಬಂಧ ಸಾಯುವವರೆಗೂ ಕೆಡುವುದಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.