ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನ ಪರಿಷತ್ ಚುನಾವಣೆ | ನಾಮಪತ್ರ ವಾಪಸು ಪಡೆದವರಿಗೆ ಅಭಿನಂದನೆ!

Last Updated 26 ನವೆಂಬರ್ 2021, 19:30 IST
ಅಕ್ಷರ ಗಾತ್ರ

ಮೈಸೂರು: ಮೈಸೂರು–ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿದ್ದ ಪಿ.ಎಸ್‌.ಯಡೂರಪ್ಪ ಎಂಬುವವರು ಕೊನೆ ಕ್ಷಣದಲ್ಲಿ ನಾಮಪತ್ರ ವಾಪಸ್‌ ಪಡೆದರು.

ವಿಶೇಷವೆಂದರೆ ಅವರನ್ನು ಬಿಜೆಪಿ ಅಭ್ಯರ್ಥಿ ಆರ್‌.ರಘು (ಕೌಟಿಲ್ಯ) ಭೇಟಿಯಾಗಿ ಅಭಿನಂದಿಸಿದರು. ಅವರು ತಮಗೆ ಬೆಂಬಲ ಸೂಚಿಸಿದ್ದಾರೆ ಎಂದು ರಘು ಹೇಳಿದ್ದಾರೆ.

ಪಿರಿಯಾಪಟ್ಟಣ ತಾಲ್ಲೂಕಿನ 67 ವರ್ಷದ ಯಡೂರಪ್ಪ, ಹಿಂದಿನ ಹಲವು ಚುನಾವಣೆಗಳಲ್ಲಿ ಸ್ಪರ್ಧಿಸಿದ್ದರು. ಯಡೂರಪ್ಪ ಎಂಬ ಹೆಸರಿರುವ ಕಾರಣ ಮತದಾರರು ಗೊಂದಲಕ್ಕೆ ಸಿಲುಕಿದ್ದೂ ಇದೆ. ಉಮೇದುವಾರಿಕೆ ವಾಪಸ್‌ ಪಡೆಯಲು ಶುಕ್ರವಾರ ಅಂತಿಮ ದಿನವಾಗಿತ್ತು. ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌, ವಾಟಾಳ್‌ ನಾಗರಾಜ್‌ ಹಾಗೂ ಮೂವರು ‍ಪಕ್ಷೇತರರು ಸೇರಿ ಏಳು ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT