ಪಿರಿಯಾಪಟ್ಟಣ ತಾಲ್ಲೂಕಿನ 67 ವರ್ಷದ ಯಡೂರಪ್ಪ, ಹಿಂದಿನ ಹಲವು ಚುನಾವಣೆಗಳಲ್ಲಿ ಸ್ಪರ್ಧಿಸಿದ್ದರು. ಯಡೂರಪ್ಪ ಎಂಬ ಹೆಸರಿರುವ ಕಾರಣ ಮತದಾರರು ಗೊಂದಲಕ್ಕೆ ಸಿಲುಕಿದ್ದೂ ಇದೆ. ಉಮೇದುವಾರಿಕೆ ವಾಪಸ್ ಪಡೆಯಲು ಶುಕ್ರವಾರ ಅಂತಿಮ ದಿನವಾಗಿತ್ತು. ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ವಾಟಾಳ್ ನಾಗರಾಜ್ ಹಾಗೂ ಮೂವರು ಪಕ್ಷೇತರರು ಸೇರಿ ಏಳು ಅಭ್ಯರ್ಥಿಗಳು ಕಣದಲ್ಲಿದ್ದಾರೆ.