<figcaption>""</figcaption>.<p><strong>ಮೈಸೂರು: </strong>ಮೈಸೂರು ದಸರಾದ ಪ್ರಮುಖ ಆಕರ್ಷಣೆ ಜಂಬೂಸವಾರಿ ವಿಜಯದಶಮಿಯಂದು (ಸೋಮವಾರ) ನಡೆಯಲಿದೆ.</p>.<p>ಈ ಬಾರಿ ಸರಳ ದಸರಾ ಆಚರಣೆ ಹಿನ್ನೆಲೆಯಲ್ಲಿ ಅರಮನೆ ಆವರಣದೊಳಗೆ ಕೇವಲ 300 ಮಂದಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ.</p>.<p>ಸೋಮವಾರ ನಡೆಯಲಿರುವ ಜಂಬೂ ಸವಾರಿ ವೀಕ್ಷಣೆಗೆ ಅಂಬಾ ವಿಲಾಸ ಅರಮನೆ ಮುಂಭಾಗದಲ್ಲಿ ಸಿದ್ಧತೆ ಮಾಡಲಾಗಿದೆ.</p>.<p>ಮೆರವಣಿಗೆ ವೀಕ್ಷಣೆಗೆ ಕುರ್ಚಿ, ಶಾಮಿಯಾನದ ವ್ಯವಸ್ಥೆ. ಜಂಬುಸವಾರಿ ತೆರಳುವ ಎಡ ಮತ್ತು ಬಲ ಭಾಗಗಳಲ್ಲಿ ಆಸನಗಳ ವ್ಯವಸ್ಥೆ. ಗಣ್ಯರಿಗೆ, ಜನಪ್ರತಿನಿಧಿಗಳಿಗೆ ಕೂರಲು ಪ್ರತ್ಯೇಕ ಆಸನ ವ್ಯವಸ್ಥೆಯನ್ನು ಮಾಡಲಾಗಿದೆ.</p>.<p>ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜಂಬೂಸವಾರಿಯಲ್ಲಿ ಭಾಗವಹಿಸಲಿದ್ದಾರೆ. ಇದೇ ಮೊದಲ ಬಾರಿಗೆ 750 ಕೆ.ಜಿ. ತೂಕದ ಚಿನ್ನದ ಅಂಬಾರಿ ಹೊರಲಿರುವ ಅಭಿಮನ್ಯು. ಅಭಿಮನ್ಯು ನೇತೃತ್ವದ ಗಜಪಡೆ ಚಿನ್ನದ ಅಂಬಾರಿ ಹೊರಲಿದೆ.</p>.<p><strong>ಅರಮನೆ ಆವರಣಕ್ಕಷ್ಟೇ ಸೀಮಿತ: </strong>ಕೊರೊನಾ ವೈರಸ್ ಸೋಂಕಿನ ಭೀತಿಯಿಂದ ಅರಮನೆ ಆವರಣಕ್ಕೆ ಸೀಮಿತವಾಗಲಿರುವ ಜಂಬೂಸವಾರಿ. ಪ್ರತಿ ವರ್ಷ 5.5 ಕಿ. ಮೀ ಸಾಗುತ್ತಿದ್ದ ಜಂಬೂಸವಾರಿ ಮೆರವಣಿಗೆ ಈ ಬಾರಿ ಕೇವಲ 300 ಮೀಟರ್ ಅಂತರದಲ್ಲೇ ಅಂತ್ಯ. ಈ ಬಾರಿ 30 ರಿಂದ 40 ನಿಮಿಷಗಳಲ್ಲೇ ಪೂರ್ಣಗೊಳ್ಳಲಿರುವ ಜಂಬೂಸವಾರಿ ಮೆರವಣಿಗೆ.</p>.<p>ಸೋಮವಾರ ಮಧ್ಯಾಹ್ನ 2:59 ರಿಂದ 3:20 ರೊಳಗಿನ ಶುಭ ಮಕರ ಲಗ್ನದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಂದಿಧ್ವಜಕ್ಕೆ ಸಂಪ್ರದಾಯಬದ್ದವಾಗಿ ಪೂಜೆ ಸಲ್ಲಿಸಲಿದ್ದಾರೆ.</p>.<p>ಬಳಿಕ 3:40 ರಿಂದ 4:15 ರೊಳಗಿನ ಶುಭ ಕುಂಭ ಲಗ್ನದಲ್ಲಿ ಅಭಿಮನ್ಯುವಿನ ಮೇಲೆ ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಲಿರುವ ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಮುಖ್ಯಮಂತ್ರಿ ಸೇರಿದಂತೆ ಗಣ್ಯರಿಂದ ಪುಷ್ಪಾರ್ಚನೆ ನಡೆಸಲಾಗುತ್ತದೆ.</p>.<p>ಜಂಬೂಸವಾರಿಯಲ್ಲಿ 4 ಕಲಾತಂಡ, ಅಶ್ವಾರೋಹಿ ದಳದ 2 ತುಕಡಿ, 1 ಸ್ತಬ್ದ ಚಿತ್ರ, ಕರ್ನಾಟಕ ಪೊಲೀಸ್ ವಾದನದ ಆನೆಗಾಡಿ ಸಾಗಲಿವೆ. ಇದಕ್ಕಾಗಿ ಮೈಸೂರು ಅರಮನೆ ಆವರಣದಲ್ಲಿ ಸಕಲ ಸಿದ್ದತೆಗಳನ್ನು ಮಾಡಲಾಗಿದೆ.</p>.<p><strong>ಗಜಪಡೆ ತಾಲೀಮು ಇಲ್ಲ; ವಿಶೇಷ ಪೂಜೆ</strong><br />ಆಯುಧಪೂಜೆ ಅಂಗವಾಗಿ ಭಾನುವಾರ ಗಜಪಡೆಗೆ ವಿಶೇಷ ಪೂಜೆ ಸಲ್ಲಿಕೆಯಾಯ್ತು. ಜಂಬೂ ಸವಾರಿಯ ತಾಲೀಮು ನಡೆಯಲಿಲ್ಲ.</p>.<p>ಮೈಸೂರಿನ ಅರಮನೆ ಅಂಗಳದಲ್ಲಿ ಭಾನುವಾರ ಆಯುಧ ಪೂಜೆ ಸಂಭ್ರಮದಿಂದ ನೆರವೇರಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಮೈಸೂರು: </strong>ಮೈಸೂರು ದಸರಾದ ಪ್ರಮುಖ ಆಕರ್ಷಣೆ ಜಂಬೂಸವಾರಿ ವಿಜಯದಶಮಿಯಂದು (ಸೋಮವಾರ) ನಡೆಯಲಿದೆ.</p>.<p>ಈ ಬಾರಿ ಸರಳ ದಸರಾ ಆಚರಣೆ ಹಿನ್ನೆಲೆಯಲ್ಲಿ ಅರಮನೆ ಆವರಣದೊಳಗೆ ಕೇವಲ 300 ಮಂದಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ.</p>.<p>ಸೋಮವಾರ ನಡೆಯಲಿರುವ ಜಂಬೂ ಸವಾರಿ ವೀಕ್ಷಣೆಗೆ ಅಂಬಾ ವಿಲಾಸ ಅರಮನೆ ಮುಂಭಾಗದಲ್ಲಿ ಸಿದ್ಧತೆ ಮಾಡಲಾಗಿದೆ.</p>.<p>ಮೆರವಣಿಗೆ ವೀಕ್ಷಣೆಗೆ ಕುರ್ಚಿ, ಶಾಮಿಯಾನದ ವ್ಯವಸ್ಥೆ. ಜಂಬುಸವಾರಿ ತೆರಳುವ ಎಡ ಮತ್ತು ಬಲ ಭಾಗಗಳಲ್ಲಿ ಆಸನಗಳ ವ್ಯವಸ್ಥೆ. ಗಣ್ಯರಿಗೆ, ಜನಪ್ರತಿನಿಧಿಗಳಿಗೆ ಕೂರಲು ಪ್ರತ್ಯೇಕ ಆಸನ ವ್ಯವಸ್ಥೆಯನ್ನು ಮಾಡಲಾಗಿದೆ.</p>.<p>ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜಂಬೂಸವಾರಿಯಲ್ಲಿ ಭಾಗವಹಿಸಲಿದ್ದಾರೆ. ಇದೇ ಮೊದಲ ಬಾರಿಗೆ 750 ಕೆ.ಜಿ. ತೂಕದ ಚಿನ್ನದ ಅಂಬಾರಿ ಹೊರಲಿರುವ ಅಭಿಮನ್ಯು. ಅಭಿಮನ್ಯು ನೇತೃತ್ವದ ಗಜಪಡೆ ಚಿನ್ನದ ಅಂಬಾರಿ ಹೊರಲಿದೆ.</p>.<p><strong>ಅರಮನೆ ಆವರಣಕ್ಕಷ್ಟೇ ಸೀಮಿತ: </strong>ಕೊರೊನಾ ವೈರಸ್ ಸೋಂಕಿನ ಭೀತಿಯಿಂದ ಅರಮನೆ ಆವರಣಕ್ಕೆ ಸೀಮಿತವಾಗಲಿರುವ ಜಂಬೂಸವಾರಿ. ಪ್ರತಿ ವರ್ಷ 5.5 ಕಿ. ಮೀ ಸಾಗುತ್ತಿದ್ದ ಜಂಬೂಸವಾರಿ ಮೆರವಣಿಗೆ ಈ ಬಾರಿ ಕೇವಲ 300 ಮೀಟರ್ ಅಂತರದಲ್ಲೇ ಅಂತ್ಯ. ಈ ಬಾರಿ 30 ರಿಂದ 40 ನಿಮಿಷಗಳಲ್ಲೇ ಪೂರ್ಣಗೊಳ್ಳಲಿರುವ ಜಂಬೂಸವಾರಿ ಮೆರವಣಿಗೆ.</p>.<p>ಸೋಮವಾರ ಮಧ್ಯಾಹ್ನ 2:59 ರಿಂದ 3:20 ರೊಳಗಿನ ಶುಭ ಮಕರ ಲಗ್ನದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಂದಿಧ್ವಜಕ್ಕೆ ಸಂಪ್ರದಾಯಬದ್ದವಾಗಿ ಪೂಜೆ ಸಲ್ಲಿಸಲಿದ್ದಾರೆ.</p>.<p>ಬಳಿಕ 3:40 ರಿಂದ 4:15 ರೊಳಗಿನ ಶುಭ ಕುಂಭ ಲಗ್ನದಲ್ಲಿ ಅಭಿಮನ್ಯುವಿನ ಮೇಲೆ ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಲಿರುವ ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಮುಖ್ಯಮಂತ್ರಿ ಸೇರಿದಂತೆ ಗಣ್ಯರಿಂದ ಪುಷ್ಪಾರ್ಚನೆ ನಡೆಸಲಾಗುತ್ತದೆ.</p>.<p>ಜಂಬೂಸವಾರಿಯಲ್ಲಿ 4 ಕಲಾತಂಡ, ಅಶ್ವಾರೋಹಿ ದಳದ 2 ತುಕಡಿ, 1 ಸ್ತಬ್ದ ಚಿತ್ರ, ಕರ್ನಾಟಕ ಪೊಲೀಸ್ ವಾದನದ ಆನೆಗಾಡಿ ಸಾಗಲಿವೆ. ಇದಕ್ಕಾಗಿ ಮೈಸೂರು ಅರಮನೆ ಆವರಣದಲ್ಲಿ ಸಕಲ ಸಿದ್ದತೆಗಳನ್ನು ಮಾಡಲಾಗಿದೆ.</p>.<p><strong>ಗಜಪಡೆ ತಾಲೀಮು ಇಲ್ಲ; ವಿಶೇಷ ಪೂಜೆ</strong><br />ಆಯುಧಪೂಜೆ ಅಂಗವಾಗಿ ಭಾನುವಾರ ಗಜಪಡೆಗೆ ವಿಶೇಷ ಪೂಜೆ ಸಲ್ಲಿಕೆಯಾಯ್ತು. ಜಂಬೂ ಸವಾರಿಯ ತಾಲೀಮು ನಡೆಯಲಿಲ್ಲ.</p>.<p>ಮೈಸೂರಿನ ಅರಮನೆ ಅಂಗಳದಲ್ಲಿ ಭಾನುವಾರ ಆಯುಧ ಪೂಜೆ ಸಂಭ್ರಮದಿಂದ ನೆರವೇರಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>