<p><strong>ಮೈಸೂರು: </strong>ಮೇಕೆಗಳನ್ನು ಕದ್ದು ಸಾಗಿಸುತ್ತಿದ್ದಾರೆ ಎಂದು ಆರೋಪಿಸಿ ಬೆಲವತ್ತ ಗ್ರಾಮದಲ್ಲಿ ಇಬ್ಬರು ಯುವಕರ ಮೇಲೆ ಗುಂಪೊಂದು ಭಾನುವಾರ ಹಲ್ಲೆ ನಡೆಸಿದ್ದು, ಒಬ್ಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.</p>.<p>ಕೆಸರೆ ನಿವಾಸಿ ಜಹೀರುದ್ದೀನ್ (35) ಮೃತಪಟ್ಟವರು. ರಾಜೇಂದ್ರನಗರದ ನಿವಾಸಿ ಕಾರ್ತಿಕ್ ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<p>ಇವರಿಬ್ದರೂ ಬೆಲವತ್ತ ಬಳಿ ಮೇಕೆಗಳನ್ನು ಕಳವು ಮಾಡಿ ಆಟೊದಲ್ಲಿ ಸಾಗಿಸುತ್ತಿದ್ದರು ಎಂದು ಆರೋಪಿಸಿದ ಗುಂಪು, ಮೊದಲಿಗೆ ಕಾರ್ತೀಕ್ ಮೇಲೆ ಹಲ್ಲೆಗೆ ಮುಂದಾಗಿದೆ. ಈ ವೇಳೆ, ಜಹೀರುದ್ದೀನ್ ಚಾಲನೆ ಮಾಡಿಕೊಂಡು ಹೋಗುತ್ತಿದ್ದ ಆಟೊ ಗ್ರಾಮದ ಮುಖ್ಯರಸ್ತೆಯಲ್ಲಿ ಅವರ ಮೇಲೆಯೇ ಮಗುಚಿ ಬಿದ್ದಿದೆ. ಗಾಯಗೊಂಡಿದ್ದ ಅವರನ್ನು ಹಿಡಿದ ಗುಂಪು, ತೀವ್ರ ಹಲ್ಲೆ ನಡೆಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾಗಿ ಮೇಟಗಳ್ಳಿ ಠಾಣೆ ಪೊಲೀಸರು ತಿಳಿಸಿದ್ದಾರೆ.</p>.<p>‘ಜಹೀರುದ್ದೀನ್ ಮೇಲೆ ಆಟೊ ಮಗುಚಿ ಬಿದ್ದು, ಮೃತಪಟ್ಟಿದ್ದಾರೆಯೇ ಹೊರತು ಹಲ್ಲೆಯಿಂದ ಅಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಆದರೆ, ಜಹೀರುದ್ದೀನ್ ಸೋದರ ರೆಹಮತ್ ಉಲ್ಲಾ ನೀಡಿದ ದೂರಿನ ಅನ್ವಯ, ಅಪರಿಚಿತ ವ್ಯಕ್ತಿಗಳ ವಿರುದ್ಧ ಕೊಲೆ ಪ್ರಕರಣ<br />ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಮೇಕೆಗಳನ್ನು ಕದ್ದು ಸಾಗಿಸುತ್ತಿದ್ದಾರೆ ಎಂದು ಆರೋಪಿಸಿ ಬೆಲವತ್ತ ಗ್ರಾಮದಲ್ಲಿ ಇಬ್ಬರು ಯುವಕರ ಮೇಲೆ ಗುಂಪೊಂದು ಭಾನುವಾರ ಹಲ್ಲೆ ನಡೆಸಿದ್ದು, ಒಬ್ಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.</p>.<p>ಕೆಸರೆ ನಿವಾಸಿ ಜಹೀರುದ್ದೀನ್ (35) ಮೃತಪಟ್ಟವರು. ರಾಜೇಂದ್ರನಗರದ ನಿವಾಸಿ ಕಾರ್ತಿಕ್ ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<p>ಇವರಿಬ್ದರೂ ಬೆಲವತ್ತ ಬಳಿ ಮೇಕೆಗಳನ್ನು ಕಳವು ಮಾಡಿ ಆಟೊದಲ್ಲಿ ಸಾಗಿಸುತ್ತಿದ್ದರು ಎಂದು ಆರೋಪಿಸಿದ ಗುಂಪು, ಮೊದಲಿಗೆ ಕಾರ್ತೀಕ್ ಮೇಲೆ ಹಲ್ಲೆಗೆ ಮುಂದಾಗಿದೆ. ಈ ವೇಳೆ, ಜಹೀರುದ್ದೀನ್ ಚಾಲನೆ ಮಾಡಿಕೊಂಡು ಹೋಗುತ್ತಿದ್ದ ಆಟೊ ಗ್ರಾಮದ ಮುಖ್ಯರಸ್ತೆಯಲ್ಲಿ ಅವರ ಮೇಲೆಯೇ ಮಗುಚಿ ಬಿದ್ದಿದೆ. ಗಾಯಗೊಂಡಿದ್ದ ಅವರನ್ನು ಹಿಡಿದ ಗುಂಪು, ತೀವ್ರ ಹಲ್ಲೆ ನಡೆಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾಗಿ ಮೇಟಗಳ್ಳಿ ಠಾಣೆ ಪೊಲೀಸರು ತಿಳಿಸಿದ್ದಾರೆ.</p>.<p>‘ಜಹೀರುದ್ದೀನ್ ಮೇಲೆ ಆಟೊ ಮಗುಚಿ ಬಿದ್ದು, ಮೃತಪಟ್ಟಿದ್ದಾರೆಯೇ ಹೊರತು ಹಲ್ಲೆಯಿಂದ ಅಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಆದರೆ, ಜಹೀರುದ್ದೀನ್ ಸೋದರ ರೆಹಮತ್ ಉಲ್ಲಾ ನೀಡಿದ ದೂರಿನ ಅನ್ವಯ, ಅಪರಿಚಿತ ವ್ಯಕ್ತಿಗಳ ವಿರುದ್ಧ ಕೊಲೆ ಪ್ರಕರಣ<br />ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>