ಇವರಿಬ್ದರೂ ಬೆಲವತ್ತ ಬಳಿ ಮೇಕೆಗಳನ್ನು ಕಳವು ಮಾಡಿ ಆಟೊದಲ್ಲಿ ಸಾಗಿಸುತ್ತಿದ್ದರು ಎಂದು ಆರೋಪಿಸಿದ ಗುಂಪು, ಮೊದಲಿಗೆ ಕಾರ್ತೀಕ್ ಮೇಲೆ ಹಲ್ಲೆಗೆ ಮುಂದಾಗಿದೆ. ಈ ವೇಳೆ, ಜಹೀರುದ್ದೀನ್ ಚಾಲನೆ ಮಾಡಿಕೊಂಡು ಹೋಗುತ್ತಿದ್ದ ಆಟೊ ಗ್ರಾಮದ ಮುಖ್ಯರಸ್ತೆಯಲ್ಲಿ ಅವರ ಮೇಲೆಯೇ ಮಗುಚಿ ಬಿದ್ದಿದೆ. ಗಾಯಗೊಂಡಿದ್ದ ಅವರನ್ನು ಹಿಡಿದ ಗುಂಪು, ತೀವ್ರ ಹಲ್ಲೆ ನಡೆಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾಗಿ ಮೇಟಗಳ್ಳಿ ಠಾಣೆ ಪೊಲೀಸರು ತಿಳಿಸಿದ್ದಾರೆ.