<p><strong>ಮೈಸೂರು:</strong> ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ತಲಕಾಡು ಕ್ಷೇತ್ರದಲ್ಲಿ ಡಿಸೆಂಬರ್ನಲ್ಲಿ ನಡೆಯಲಿರುವ ಪಂಚಲಿಂಗ ದರ್ಶನ ಮಹೋತ್ಸವವನ್ನು ಮೈಸೂರು ದಸರಾ ರೀತಿಯಲ್ಲಿ ಸರಳವಾಗಿ ಹಾಗೂ ವರ್ಚುವಲ್ ವೇದಿಕೆಯಲ್ಲಿ ನಡೆಸಲು ಚಿಂತಿಸಲಾಗಿದೆ.</p>.<p>ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅಧ್ಯಕ್ಷತೆಯಲ್ಲಿ ಪಂಚಲಿಂಗ ದರ್ಶನ ಮಹೋತ್ಸವ ಕುರಿತು ಬುಧವಾರ ಪೂರ್ವಭಾವಿ ಸಭೆ ನಡೆಯಿತು.</p>.<p>‘ಕೋವಿಡ್ ಕಾರಣ ದಸರೆಯನ್ನು ಸರಳವಾಗಿ ನಡೆಸಲಾಗಿದೆ. ಏಳು ಲಕ್ಷಕ್ಕೂ ಅಧಿಕ ಮಂದಿ ದಸರಾ ಕಾರ್ಯಕ್ರಮಗಳನ್ನು ಅನ್ಲೈನ್ ಮೂಲಕ ವೀಕ್ಷಿಸಿದ್ದಾರೆ. ಪಂಚಲಿಂಗದರ್ಶನ ಮಹೋತ್ಸವವನ್ನು ಕೂಡ ಅದೇ ಮಾದರಿಯಲ್ಲಿ ನಡೆಸುವುದು ನಮ್ಮ ಉದ್ದೇಶ’ ಎಂದು ಸಚಿವರು ತಿಳಿಸಿದರು.</p>.<p>‘ತಜ್ಞರ ಸಮಿತಿಯೊಂದನ್ನು ರಚಿಸಲಿದ್ದು, ಸಮಿತಿಯು ತಲಕಾಡಿಗೆ ಭೇಟಿ ನೀಡಲಿದೆ. ತಜ್ಞರು ನೀಡುವ ವರದಿ ಆಧಾರದಲ್ಲಿ ಎಷ್ಟು ಜನರನ್ನು ಸೇರಿಸಬೇಕು ಎಂಬುದನ್ನು ನಿರ್ಧರಿಸಲಾಗುತ್ತದೆ. ಮುಖ್ಯಮಂತ್ರಿ ಜತೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ’ ಎಂದು ಹೇಳಿದರು.</p>.<p>‘2013 ರಲ್ಲಿ ಕೊನೆಯದಾಗಿ ಪಂಚಲಿಂಗದರ್ಶನ ಮಹೋತ್ಸವ ನಡೆದಿತ್ತು. ಅಂದು ಸುಮಾರು 20 ಲಕ್ಷ ಜನರು ಪಾಲ್ಗೊಂಡಿದ್ದರು. ಕೋವಿಡ್ ಇರುವುದರಿಂದ ಈ ಬಾರಿ ಎಚ್ಚರವಹಿಸಬೇಕಿದೆ’ ಎಂದರು.</p>.<p>ಪಂಚಲಿಂಗ ದರ್ಶನ ಕಾರ್ಯಕ್ರಮಗಳು ಡಿ.10 ರಿಂದ 19ರ ವರೆಗೆ ನಡೆಯಲಿವೆ. ಡಿ.14 ರಂದು ಪಂಚಲಿಂಗ ದರ್ಶನ ಮಹೋತ್ಸವಇರಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ತಲಕಾಡು ಕ್ಷೇತ್ರದಲ್ಲಿ ಡಿಸೆಂಬರ್ನಲ್ಲಿ ನಡೆಯಲಿರುವ ಪಂಚಲಿಂಗ ದರ್ಶನ ಮಹೋತ್ಸವವನ್ನು ಮೈಸೂರು ದಸರಾ ರೀತಿಯಲ್ಲಿ ಸರಳವಾಗಿ ಹಾಗೂ ವರ್ಚುವಲ್ ವೇದಿಕೆಯಲ್ಲಿ ನಡೆಸಲು ಚಿಂತಿಸಲಾಗಿದೆ.</p>.<p>ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅಧ್ಯಕ್ಷತೆಯಲ್ಲಿ ಪಂಚಲಿಂಗ ದರ್ಶನ ಮಹೋತ್ಸವ ಕುರಿತು ಬುಧವಾರ ಪೂರ್ವಭಾವಿ ಸಭೆ ನಡೆಯಿತು.</p>.<p>‘ಕೋವಿಡ್ ಕಾರಣ ದಸರೆಯನ್ನು ಸರಳವಾಗಿ ನಡೆಸಲಾಗಿದೆ. ಏಳು ಲಕ್ಷಕ್ಕೂ ಅಧಿಕ ಮಂದಿ ದಸರಾ ಕಾರ್ಯಕ್ರಮಗಳನ್ನು ಅನ್ಲೈನ್ ಮೂಲಕ ವೀಕ್ಷಿಸಿದ್ದಾರೆ. ಪಂಚಲಿಂಗದರ್ಶನ ಮಹೋತ್ಸವವನ್ನು ಕೂಡ ಅದೇ ಮಾದರಿಯಲ್ಲಿ ನಡೆಸುವುದು ನಮ್ಮ ಉದ್ದೇಶ’ ಎಂದು ಸಚಿವರು ತಿಳಿಸಿದರು.</p>.<p>‘ತಜ್ಞರ ಸಮಿತಿಯೊಂದನ್ನು ರಚಿಸಲಿದ್ದು, ಸಮಿತಿಯು ತಲಕಾಡಿಗೆ ಭೇಟಿ ನೀಡಲಿದೆ. ತಜ್ಞರು ನೀಡುವ ವರದಿ ಆಧಾರದಲ್ಲಿ ಎಷ್ಟು ಜನರನ್ನು ಸೇರಿಸಬೇಕು ಎಂಬುದನ್ನು ನಿರ್ಧರಿಸಲಾಗುತ್ತದೆ. ಮುಖ್ಯಮಂತ್ರಿ ಜತೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ’ ಎಂದು ಹೇಳಿದರು.</p>.<p>‘2013 ರಲ್ಲಿ ಕೊನೆಯದಾಗಿ ಪಂಚಲಿಂಗದರ್ಶನ ಮಹೋತ್ಸವ ನಡೆದಿತ್ತು. ಅಂದು ಸುಮಾರು 20 ಲಕ್ಷ ಜನರು ಪಾಲ್ಗೊಂಡಿದ್ದರು. ಕೋವಿಡ್ ಇರುವುದರಿಂದ ಈ ಬಾರಿ ಎಚ್ಚರವಹಿಸಬೇಕಿದೆ’ ಎಂದರು.</p>.<p>ಪಂಚಲಿಂಗ ದರ್ಶನ ಕಾರ್ಯಕ್ರಮಗಳು ಡಿ.10 ರಿಂದ 19ರ ವರೆಗೆ ನಡೆಯಲಿವೆ. ಡಿ.14 ರಂದು ಪಂಚಲಿಂಗ ದರ್ಶನ ಮಹೋತ್ಸವಇರಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>