ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವೇಗೌಡ ಹೇಳಿಕೆಗೆ ವಿಶ್ವನಾಥ್ ಸಮರ್ಥನೆ

Last Updated 21 ಜೂನ್ 2019, 18:00 IST
ಅಕ್ಷರ ಗಾತ್ರ

ಮೈಸೂರು: ಮಧ್ಯಂತರ ಚುನಾವಣೆ ಕುರಿತು ದೇವೇಗೌಡ ನೀಡಿರುವ ಹೇಳಿಕೆಯನ್ನು ಶಾಸಕ ಎಚ್‌.ವಿಶ್ವನಾಥ್‌ ಸಮರ್ಥಿಸಿಕೊಂಡಿದ್ದಾರೆ.

‘ದೇವೇಗೌಡರು ರಾಜಕೀಯ ಮುತ್ಸದ್ದಿ. ರಾಜಕಾರಣದ ಒಳ ಹೊರಗುಗಳನ್ನು ಅಪಾರವಾಗಿ ಬಲ್ಲ ಅನುಭವಿ. ಅವರು ಹೇಳುವುದರಲ್ಲಿ ಸತ್ಯವೂ ಇರುತ್ತದೆ’ ಎಂದು ತಿಳಿಸಿದರು.

‘ಮಧ್ಯಂತರ ಚುನಾವಣೆ ಬಗ್ಗೆ ಸುಲಭವಾಗಿ ತೀರ್ಮಾನ ತೆಗೆದುಕೊಳ್ಳಲು ಆಗದು. ಎಚ್‌.ಡಿ.ಕುಮಾರಸ್ವಾಮಿ ಅವರ ನಾಯಕತ್ವದಲ್ಲಿ ಸಮ್ಮಿಶ್ರ ಸರ್ಕಾರ ಚೆನ್ನಾಗಿ ನಡೀತಾ ಇದೆ. ಸರ್ಕಾರವನ್ನು ಬೀಳಿಸುವುದು ಸುಲಭವಲ್ಲ. ಜೆಡಿಎಸ್‌ ಮತ್ತು ಕಾಂಗ್ರೆಸ್‌ ಪರಸ್ಪರ ಅಪಘಾತ ಮಾಡಿಕೊಂಡರೆ ಮುಂದೆ ಏನಾಗುವುದೋ ಗೊತ್ತಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT