<p><strong>ಸಾಲಿಗ್ರಾಮ: </strong>ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಅವರು ಮುಡಾ ಮಾಜಿ ಅಧ್ಯಕ್ಷ ಹರದನಹಳ್ಳಿ ವಿಜಯ್ ಅವರನ್ನು ಶುಕ್ರವಾರ ಭೇಟಿಯಾಗಿ ರಹಸ್ಯ ಮಾತುಕತೆ ನಡೆಸಿದ್ದು, ತಾಲ್ಲೂಕಿನ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ವಿಶ್ವನಾಥ್ ಅವರು ಹಬ್ಬದ ದಿನವೇ ವಿಜಯ್ ಅವರ ತೋಟದ ಮನೆಯಲ್ಲಿ 3 ಗಂಟೆ ಕಾಲ ಮಾತುಕತೆ ನಡೆಸಿದ್ದಾರೆ.</p>.<p>ಜೆಡಿಎಸ್ನಲ್ಲಿದ್ದ ವಿಜಯ್, ಮಿರ್ಲೆ ಜಿಲ್ಲಾ ಪಂಚಾಯಿತಿ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ನಂತರ ಮುಡಾ ಅಧ್ಯಕ್ಷರಾಗಿದ್ದರು. ಶಾಸಕ ಸಾ.ರಾ.ಮಹೇಶ್ ಬಣದಿಂದ ದೂರ ಉಳಿದು, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರ ಬಣದಲ್ಲಿ ಗುರುತಿಸಿಕೊಂಡಿದ್ದರು.</p>.<p>ಸ್ವಂತ ಹಣದಲ್ಲಿ ಸಾ.ರಾ ಮಹೇಶ್ ಕೋವಿಡ್ ಆಸ್ಪತ್ರೆ ತೆರೆದಾಗ, ಭಿನ್ನಾಭಿಪ್ರಾಯ ಮರೆತು ವಿಶ್ವನಾಥ್ ಶ್ಲಾಘಿಸಿದ್ದರು. ಆದರೆ ಈಗ ಮಹೇಶ್ ಅವರಿಂದ ದೂರ ಉಳಿದಿರುವ ಮುಖಂಡರೊಂದಿಗೆ ಮಾತುಕತೆ ನಡೆಸುತ್ತಿರುವುದು ಅಚ್ಚರಿ ಮೂಡಿಸಿದೆ.</p>.<p>‘ಜಪದಕಟ್ಟೆಗೆ ಹೋಗಿ ವಾಪಸ್ ಬರುವಾಗ ವಿಜಯ್ ಮನೆಗೆ ಹೋಗಿ ಹಬ್ಬದ ಶುಭಾಶಯ ತಿಳಿಸಿದೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ’ ಎಂದು ವಿಶ್ವನಾಥ್ ಪ್ರತಿಕ್ರಿಯಿಸಿದರು. ‘ವಿಶ್ವನಾಥ್ ಅವರು ನಮ್ಮ ಮನೆಗೆ ಬಂದು ಯೋಗಕ್ಷೇಮ ವಿಚಾರಿಸಿದರು ಅಷ್ಟೇ’ ಎಂದು ವಿಜಯ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಲಿಗ್ರಾಮ: </strong>ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಅವರು ಮುಡಾ ಮಾಜಿ ಅಧ್ಯಕ್ಷ ಹರದನಹಳ್ಳಿ ವಿಜಯ್ ಅವರನ್ನು ಶುಕ್ರವಾರ ಭೇಟಿಯಾಗಿ ರಹಸ್ಯ ಮಾತುಕತೆ ನಡೆಸಿದ್ದು, ತಾಲ್ಲೂಕಿನ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ವಿಶ್ವನಾಥ್ ಅವರು ಹಬ್ಬದ ದಿನವೇ ವಿಜಯ್ ಅವರ ತೋಟದ ಮನೆಯಲ್ಲಿ 3 ಗಂಟೆ ಕಾಲ ಮಾತುಕತೆ ನಡೆಸಿದ್ದಾರೆ.</p>.<p>ಜೆಡಿಎಸ್ನಲ್ಲಿದ್ದ ವಿಜಯ್, ಮಿರ್ಲೆ ಜಿಲ್ಲಾ ಪಂಚಾಯಿತಿ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ನಂತರ ಮುಡಾ ಅಧ್ಯಕ್ಷರಾಗಿದ್ದರು. ಶಾಸಕ ಸಾ.ರಾ.ಮಹೇಶ್ ಬಣದಿಂದ ದೂರ ಉಳಿದು, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರ ಬಣದಲ್ಲಿ ಗುರುತಿಸಿಕೊಂಡಿದ್ದರು.</p>.<p>ಸ್ವಂತ ಹಣದಲ್ಲಿ ಸಾ.ರಾ ಮಹೇಶ್ ಕೋವಿಡ್ ಆಸ್ಪತ್ರೆ ತೆರೆದಾಗ, ಭಿನ್ನಾಭಿಪ್ರಾಯ ಮರೆತು ವಿಶ್ವನಾಥ್ ಶ್ಲಾಘಿಸಿದ್ದರು. ಆದರೆ ಈಗ ಮಹೇಶ್ ಅವರಿಂದ ದೂರ ಉಳಿದಿರುವ ಮುಖಂಡರೊಂದಿಗೆ ಮಾತುಕತೆ ನಡೆಸುತ್ತಿರುವುದು ಅಚ್ಚರಿ ಮೂಡಿಸಿದೆ.</p>.<p>‘ಜಪದಕಟ್ಟೆಗೆ ಹೋಗಿ ವಾಪಸ್ ಬರುವಾಗ ವಿಜಯ್ ಮನೆಗೆ ಹೋಗಿ ಹಬ್ಬದ ಶುಭಾಶಯ ತಿಳಿಸಿದೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ’ ಎಂದು ವಿಶ್ವನಾಥ್ ಪ್ರತಿಕ್ರಿಯಿಸಿದರು. ‘ವಿಶ್ವನಾಥ್ ಅವರು ನಮ್ಮ ಮನೆಗೆ ಬಂದು ಯೋಗಕ್ಷೇಮ ವಿಚಾರಿಸಿದರು ಅಷ್ಟೇ’ ಎಂದು ವಿಜಯ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>