ಶಾಲೆಯ ಜಾಗದಲ್ಲಿ ಸ್ಮಾರಕ ನಿರ್ಮಿಸುವಂತೆ ನಗರಪಾಲಿಕೆಯು 2012ರಲ್ಲಿ ರಾಮಕೃಷ್ಣ ಮಠಕ್ಕೆ ಅನುಮತಿ ನೀಡಿದೆ. ಆದರೆ, ಇದಕ್ಕೆ ಹಲವು ಸಂಘಟನೆಗಳಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ 2014ರಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಲೆ ತೆರವುಗೊಳಿಸದಂತೆ ಮೌಖಿಕ ಆದೇಶ ನೀಡಿದ್ದರು. ಇದನ್ನು ಪ್ರಶ್ನಿಸಿದ್ದ ಮಠವು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಮಠಕ್ಕೆ ಶಾಲೆಯ ಜಾಗವನ್ನು ಹಸ್ತಾಂತರಿಸುವಂತೆ ಆದೇಶ ನೀಡಿದೆ.