<p><strong>ಮೈಸೂರು:</strong> ಇಲ್ಲಿನ ಅಗ್ರಹಾರ ವಾರ್ಡ್ 51ರಲ್ಲಿ ಕಳೆದ 10 ದಿನಗಳಿಂದಲೂ ಹೊಟ್ಟೆನೋವು, ವಾಂತಿ, ಭೇದಿ ಪ್ರಕರಣಗಳು ಹೆಚ್ಚುತ್ತಿವೆ. ಇಲ್ಲಿನ ಔಷಧ ಅಂಗಡಿಗಳಲ್ಲಿಯೂ ಈ ಆರೋಗ್ಯ ಸಮಸ್ಯೆಗಳಿಗೆ ಸಂಬಂಧಿಸಿದಂತಹ ಔಷಧಗಳು ಹೆಚ್ಚು ಹೆಚ್ಚು ಮಾರಾಟವಾಗುತ್ತಿವೆ.</p>.<p>ಈಗಾಗಲೇ ಈ ವಾರ್ಡಿನಿಂದ ಕುಡಿಯುವ ನೀರಿನ 24 ಮಾದರಿಗಳನ್ನು ಇಲ್ಲಿನ ವಾಣಿವಿಲಾಸ ನೀರು ಸರಬ<br />ರಾಜು ಕಾರ್ಯಾಗಾರದಲ್ಲಿರುವ ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಲಾಗಿದೆ. ನೀರನ್ನು ಕ್ಲೋರಿನ್ ಮೂಲಕ ಸ್ವಚ್ಛಗೊಳಿಸಿದರೂ ಅನಾರೋಗ್ಯ ಸಮಸ್ಯೆ ನಿವಾರಣೆಯಾಗಿಲ್ಲ.</p>.<p>‘ಕೆಲವೊಬ್ಬರಿಗೆ ದಿನವೊಂದಕ್ಕೆ 45–50 ಬಾರಿ ಭೇದಿಯಾಗಿರುವ ಉದಾಹರಣೆಗಳೂ ಇವೆ. ಹಲವು ಮಂದಿ ತೀವ್ರವಾಗಿ ಸುಸ್ತಾಗಿ ಆಸ್ಪತ್ರೆಗೂ ದಾಖಲಾಗಿದ್ದಾರೆ. 24 ಕುಟುಂಬಗಳು ಈ ಸಮಸ್ಯೆ ಕುರಿತು ದೂರು ನೀಡಿವೆ’ ಎಂದು ಇಲ್ಲಿನ ಪಾಲಿಕೆ ಸದಸ್ಯ ಬಿ.ವಿ.ಮಂಜು<br />ನಾಥ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಕುಡಿಯುವ ನೀರನ್ನು ಹಿಂದಿನಂತೆಯೇ ಶುದ್ಧೀಕರಿಸಿ ನೀಡಲಾಗುತ್ತಿದೆ. ಮಳೆ ಬಂದಿರುವುದರಿಂದ ಹೊಸ ನೀರು ಬರುತ್ತಿದೆ. ನಿವಾಸಿಗಳು ನೀರನ್ನು ಕುದಿಸಿ, ಆರಿಸಿ ಕುಡಿಯಬೇಕು ಎಂದು ಪಾಲಿಕೆ ಈಗಾಗಲೇ ತಿಳಿಸಿದೆ.</p>.<p>ಇಲ್ಲಿ ₹ 5 ನಾಣ್ಯ ಹಾಕಿ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ನೀರನ್ನು ತೆಗೆದುಕೊಳ್ಳುವವರೇ ಅಧಿಕ. ಈ ನೀರು ನಿಜಕ್ಕೂ ಶುದ್ಧವಾಗಿದೆಯೇ ಎಂದು ಪರೀಕ್ಷಿಸಬೇಕು ಎಂದು ನಿವಾಸಿಗಳು ಒತ್ತಾಯಿಸಿದ್ದಾರೆ.</p>.<p>ಇಲ್ಲಿನ ಅಕ್ಕಮ್ಮಣ್ಣಿ ಸರ್ಕಾರಿ ಪ್ರಾಥಮಿಕ ಆರೋಗ್ಯದ ಸಿಬ್ಬಂದಿ ಅನಾರೋಗ್ಯಪೀಡಿತರ ಮೇಲೆ ನಿಗಾ ಇಟ್ಟಿದ್ದಾರೆ. ದೂರು ಬಂದ ಕಡೆ ಧಾವಿಸಿ, ನೀರಿನ ಪರಿಶೀಲನೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಇಲ್ಲಿನ ಅಗ್ರಹಾರ ವಾರ್ಡ್ 51ರಲ್ಲಿ ಕಳೆದ 10 ದಿನಗಳಿಂದಲೂ ಹೊಟ್ಟೆನೋವು, ವಾಂತಿ, ಭೇದಿ ಪ್ರಕರಣಗಳು ಹೆಚ್ಚುತ್ತಿವೆ. ಇಲ್ಲಿನ ಔಷಧ ಅಂಗಡಿಗಳಲ್ಲಿಯೂ ಈ ಆರೋಗ್ಯ ಸಮಸ್ಯೆಗಳಿಗೆ ಸಂಬಂಧಿಸಿದಂತಹ ಔಷಧಗಳು ಹೆಚ್ಚು ಹೆಚ್ಚು ಮಾರಾಟವಾಗುತ್ತಿವೆ.</p>.<p>ಈಗಾಗಲೇ ಈ ವಾರ್ಡಿನಿಂದ ಕುಡಿಯುವ ನೀರಿನ 24 ಮಾದರಿಗಳನ್ನು ಇಲ್ಲಿನ ವಾಣಿವಿಲಾಸ ನೀರು ಸರಬ<br />ರಾಜು ಕಾರ್ಯಾಗಾರದಲ್ಲಿರುವ ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಲಾಗಿದೆ. ನೀರನ್ನು ಕ್ಲೋರಿನ್ ಮೂಲಕ ಸ್ವಚ್ಛಗೊಳಿಸಿದರೂ ಅನಾರೋಗ್ಯ ಸಮಸ್ಯೆ ನಿವಾರಣೆಯಾಗಿಲ್ಲ.</p>.<p>‘ಕೆಲವೊಬ್ಬರಿಗೆ ದಿನವೊಂದಕ್ಕೆ 45–50 ಬಾರಿ ಭೇದಿಯಾಗಿರುವ ಉದಾಹರಣೆಗಳೂ ಇವೆ. ಹಲವು ಮಂದಿ ತೀವ್ರವಾಗಿ ಸುಸ್ತಾಗಿ ಆಸ್ಪತ್ರೆಗೂ ದಾಖಲಾಗಿದ್ದಾರೆ. 24 ಕುಟುಂಬಗಳು ಈ ಸಮಸ್ಯೆ ಕುರಿತು ದೂರು ನೀಡಿವೆ’ ಎಂದು ಇಲ್ಲಿನ ಪಾಲಿಕೆ ಸದಸ್ಯ ಬಿ.ವಿ.ಮಂಜು<br />ನಾಥ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಕುಡಿಯುವ ನೀರನ್ನು ಹಿಂದಿನಂತೆಯೇ ಶುದ್ಧೀಕರಿಸಿ ನೀಡಲಾಗುತ್ತಿದೆ. ಮಳೆ ಬಂದಿರುವುದರಿಂದ ಹೊಸ ನೀರು ಬರುತ್ತಿದೆ. ನಿವಾಸಿಗಳು ನೀರನ್ನು ಕುದಿಸಿ, ಆರಿಸಿ ಕುಡಿಯಬೇಕು ಎಂದು ಪಾಲಿಕೆ ಈಗಾಗಲೇ ತಿಳಿಸಿದೆ.</p>.<p>ಇಲ್ಲಿ ₹ 5 ನಾಣ್ಯ ಹಾಕಿ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ನೀರನ್ನು ತೆಗೆದುಕೊಳ್ಳುವವರೇ ಅಧಿಕ. ಈ ನೀರು ನಿಜಕ್ಕೂ ಶುದ್ಧವಾಗಿದೆಯೇ ಎಂದು ಪರೀಕ್ಷಿಸಬೇಕು ಎಂದು ನಿವಾಸಿಗಳು ಒತ್ತಾಯಿಸಿದ್ದಾರೆ.</p>.<p>ಇಲ್ಲಿನ ಅಕ್ಕಮ್ಮಣ್ಣಿ ಸರ್ಕಾರಿ ಪ್ರಾಥಮಿಕ ಆರೋಗ್ಯದ ಸಿಬ್ಬಂದಿ ಅನಾರೋಗ್ಯಪೀಡಿತರ ಮೇಲೆ ನಿಗಾ ಇಟ್ಟಿದ್ದಾರೆ. ದೂರು ಬಂದ ಕಡೆ ಧಾವಿಸಿ, ನೀರಿನ ಪರಿಶೀಲನೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>