ಬಿಲ್ಲೇನಹೊಸಹಳ್ಳಿಯ ಸಂಪರ್ಕ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಡಾಂಬರು ಹಾಕಬೇಕು. ಗ್ರಾಮದಲ್ಲಿ ಶಾಲಾ ಕಟ್ಟಡ ನಿರ್ಮಿಸಲು ಹಳೆಯ ಕಟ್ಟಡವನ್ನು ತೆರವುಗೊಳಿಸಲಾಗಿದೆ. ಆದರೆ, ಈವರೆಗೂ ಕಟ್ಟಡ ಕಾಮಗಾರಿ ಆರಂಭಿಸಿಲ್ಲ. ಇದರಿಂದ ಶಾಲಾ ಮಕ್ಕಳಿಗೆ ತೊಂದರೆ ಉಂಟಾಗಿದೆ. ಆನೆ ಹಾವಳಿಯನ್ನು ತಡೆಗಟ್ಟಲು ಕೈಗೊಂಡಿರುವ ತಡೆಗೋಡೆ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಇದರಿಂದ, ಆನೆಗಳು ಗ್ರಾಮಕ್ಕೆ ನುಗ್ಗುತ್ತಿವೆ. ನಿರಂತರ ಜ್ಯೋತಿ ಯೋಜನೆಯಡಿ ವಿದ್ಯುತ್ ಸಂಪರ್ಕ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.