‘ಕುಲಪತಿ ಪ್ರೊ.ಜಿ.ಹೇಮಂತಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯು ಪೀಠ ಸ್ಥಾಪನೆಗೆ ತಾತ್ವಿಕ ಅನುಮೋದನೆ ನೀಡಿದೆ. ಪ್ರಸ್ತಾಪವನ್ನು ಸರ್ಕಾರಕ್ಕೆ ಕಳಿಸಿಕೊಡಲು ನಿರ್ಧರಿಸಲಾಗಿದ್ದು, ಒಪ್ಪಿಗೆ ಸಿಕ್ಕರೆ ಮುಂದಿನ ಹೆಜ್ಜೆ ಇಡಲಾಗುವುದು. ಈಗಾಗಲೇ ವಾಲ್ಮೀಕಿ ಅಧ್ಯಯನ ಪೀಠ ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಇದೆ. ಹೀಗಾಗಿ, ವ್ಯಾಸ–ವಾಲ್ಮೀಕಿ ಪೀಠ ಸ್ಥಾಪನೆ ಮಾಡಲು ಉದ್ದೇಶಿಸಲಾಗಿದೆ’ ಎಂದು ವಿಶ್ವವಿದ್ಯಾಲಯದ ಮೂಲಗಳು ತಿಳಿಸಿವೆ.