ಕೋವಿಡ್ ಭೀತಿಯಿಂದ ಹಲವು ದೇಗುಲಗಳಲ್ಲಿ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಒಂಟಿಕೊಪ್ಪಲಿನ ಲಕ್ಷ್ಮಿವೆಂಕಟರಮಣಸ್ವಾಮಿ ದೇಗುಲಕ್ಕೆ ನಸುಕಿನಿಂದಲೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರಲಾರಂಭಿಸಿದರು. ಆದರೆ, ಭಕ್ತರಿಗೆ ಪ್ರವೇಶವಕಾಶ ನೀಡಿರಲಿಲ್ಲ. ಹೀಗಾಗಿ, ಹೊರಗಡೆಯೇ ಪೂಜೆ ಸಲ್ಲಿಸಿ ಹಲವರು ವಾಪಸ್ ತೆರಳಿದರು.