‘ನಾಟಕವು ಅಷ್ಟು ದೀರ್ಘವಾಗಿ ಇರಬೇಕಿಲ್ಲ. ನಾವು ಏನನ್ನು ಹೇಳಬೇಕು ಎಂಬುದನ್ನು ಸೂಕ್ಷ್ಮವಾಗಿ, ಒಂದು ಸೀಮಿತ ಚೌಕಟ್ಟಿನಲ್ಲಿ ಹೇಳಬೇಕು. ಆಗ ಅಷ್ಟೊಂದು ದೀರ್ಘವಾಗಿ ಬೆಳೆಯುವುದಿಲ್ಲ. ನಾಟಕ ಮಾಡಿದ್ದನ್ನು ನಾನು ಪ್ರಶ್ನಿಸುವುದಿಲ್ಲ. ಆದರೆ ಸಮಯದ ಮಿತಿ ಇಟ್ಟು ಕೆಲಸ ಮಾಡಿದರೆ ಅದರಿಂದ ಆಗುವಂತಹ ಪರಿಣಾಮ ಹೆಚ್ಚು. ಸಿಕ್ಕಾಪಟ್ಟೆ ಹಣ ಖರ್ಚು ಮಾಡಿ ನಾಟಕ ಆಡುವುದರಿಂದ ಜನರ ಸಮಯ ಹಾಗೂ ಹಣ ವ್ಯರ್ಥವಾಗುತ್ತದೆ’ ಎಂದು ಹೇಳಿದರು.