<p><strong>ಮೈಸೂರು:</strong> ಹಿನಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿ ನಿವಾಸಿಗಳು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯ (ಕಮ್ಯೂನಿಸ್ಟ್) ನೇತೃತ್ವದಲ್ಲಿ ಸೇರಿದ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು.</p>.<p>ಪಂಚಾಯಿತಿ ವ್ಯಾಪ್ತಿಯಲ್ಲಿ 35 ಸಾವಿರಕ್ಕೂ ಹೆಚ್ಚು ಜನ ವಾಸವಿದ್ದಾರೆ. ಇರುವ 28 ಕೊಳವೆಬಾವಿಗಳಲ್ಲಿ 25 ಕೊಳೆವೆಬಾವಿಗಳು ಬತ್ತಿ ಹೋಗಿವೆ. ಇದರಿಂದ ನೀರಿನ ಸಮಸ್ಯೆ ಬಿಗಡಾಯಿಸಿದೆ ಎಂದು ಅವರು ಕಿಡಿಕಾರಿದರು.</p>.<p>ಹಿನಕಲ್ಗೆ ಕೂಗಳತೆ ದೂರದಲ್ಲಿರುವ ಇತರ ಬಡಾವಣೆಗಳಿಗೆ ಕಾವೇರಿ ಮತ್ತು ಕಬಿನಿ ನದಿ ಮೂಲದಿಂದ ಕುಡಿಯುವ ನೀರನ್ನು ಸರಬರಾಜಾಗುತ್ತಿದೆ. ಇಲ್ಲಿಗೆ ನೀರನ್ನು ಸರಬರಾಜು ಮಾಡುವ ಕೊಳವೆಗಳು ಹಿನಕಲ್ ಮೂಲಕವೇ ಹಾದು ಹೋಗಿವೆ. ಹೀಗಿದ್ದರೂ ನೀರು ಸರಬರಾಜು ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಪಾಲಿಕೆಯಾಗಲಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವಾಗಲಿ, ಪಂಚಾಯಿತಿಯಾಗಲಿ ಸಮರ್ಪಕವಾಗಿ ಕುಡಿಯುವ ನೀರನ್ನು ಸರಬರಾಜು ಮಾಡುವುದಕ್ಕೆ ಆಸಕ್ತಿ ವಹಿಸಿಲ್ಲ. ಇದರಿಂದ ನಿವಾಸಿಗಳು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ ಎಂದು ಅವರು ಹೇಳಿದರು.</p>.<p>ನೀರು ತರುವುದಕ್ಕೆ ಮಕ್ಕಳು, ಮಹಿಳೆಯರು ಕಿ.ಮೀ. ದೂರ ನಡೆಯಬೇಕಿದೆ. ಗಂಟೆಗಟ್ಟಲೆ ಕಾಯಬೇಕಿದೆ ಎಂದು ಅವರು ಅಳಲು ತೋಡಿಕೊಂಡರು.</p>.<p>ಮುಖಂಡರಾದ ಎಂ.ಉಮಾದೇವಿ, ವಿ.ಯಶೋಧರ್, ಹರೀಶ್, ಎಸ್.ಎಚ್.ಸುನೀಲ್, ಟಿ.ಆರ್.ಸುಮಾ, ಆಕಾಶ್ಕುಮಾರ್, ಕಲಾವತಿ, ಅಭಿಲಾಷ್, ಅನಿಲ್, ಪುಟ್ಟರಾಜು, ಮುದ್ದುಕೃಷ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಹಿನಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿ ನಿವಾಸಿಗಳು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯ (ಕಮ್ಯೂನಿಸ್ಟ್) ನೇತೃತ್ವದಲ್ಲಿ ಸೇರಿದ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು.</p>.<p>ಪಂಚಾಯಿತಿ ವ್ಯಾಪ್ತಿಯಲ್ಲಿ 35 ಸಾವಿರಕ್ಕೂ ಹೆಚ್ಚು ಜನ ವಾಸವಿದ್ದಾರೆ. ಇರುವ 28 ಕೊಳವೆಬಾವಿಗಳಲ್ಲಿ 25 ಕೊಳೆವೆಬಾವಿಗಳು ಬತ್ತಿ ಹೋಗಿವೆ. ಇದರಿಂದ ನೀರಿನ ಸಮಸ್ಯೆ ಬಿಗಡಾಯಿಸಿದೆ ಎಂದು ಅವರು ಕಿಡಿಕಾರಿದರು.</p>.<p>ಹಿನಕಲ್ಗೆ ಕೂಗಳತೆ ದೂರದಲ್ಲಿರುವ ಇತರ ಬಡಾವಣೆಗಳಿಗೆ ಕಾವೇರಿ ಮತ್ತು ಕಬಿನಿ ನದಿ ಮೂಲದಿಂದ ಕುಡಿಯುವ ನೀರನ್ನು ಸರಬರಾಜಾಗುತ್ತಿದೆ. ಇಲ್ಲಿಗೆ ನೀರನ್ನು ಸರಬರಾಜು ಮಾಡುವ ಕೊಳವೆಗಳು ಹಿನಕಲ್ ಮೂಲಕವೇ ಹಾದು ಹೋಗಿವೆ. ಹೀಗಿದ್ದರೂ ನೀರು ಸರಬರಾಜು ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಪಾಲಿಕೆಯಾಗಲಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವಾಗಲಿ, ಪಂಚಾಯಿತಿಯಾಗಲಿ ಸಮರ್ಪಕವಾಗಿ ಕುಡಿಯುವ ನೀರನ್ನು ಸರಬರಾಜು ಮಾಡುವುದಕ್ಕೆ ಆಸಕ್ತಿ ವಹಿಸಿಲ್ಲ. ಇದರಿಂದ ನಿವಾಸಿಗಳು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ ಎಂದು ಅವರು ಹೇಳಿದರು.</p>.<p>ನೀರು ತರುವುದಕ್ಕೆ ಮಕ್ಕಳು, ಮಹಿಳೆಯರು ಕಿ.ಮೀ. ದೂರ ನಡೆಯಬೇಕಿದೆ. ಗಂಟೆಗಟ್ಟಲೆ ಕಾಯಬೇಕಿದೆ ಎಂದು ಅವರು ಅಳಲು ತೋಡಿಕೊಂಡರು.</p>.<p>ಮುಖಂಡರಾದ ಎಂ.ಉಮಾದೇವಿ, ವಿ.ಯಶೋಧರ್, ಹರೀಶ್, ಎಸ್.ಎಚ್.ಸುನೀಲ್, ಟಿ.ಆರ್.ಸುಮಾ, ಆಕಾಶ್ಕುಮಾರ್, ಕಲಾವತಿ, ಅಭಿಲಾಷ್, ಅನಿಲ್, ಪುಟ್ಟರಾಜು, ಮುದ್ದುಕೃಷ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>