‘ತಮಿಳುನಾಡಿಗೆ ಹಾಗೂ ವಿದ್ಯುತ್ ಉತ್ಪಾದನಾ ಘಟಕಕ್ಕೆ ನೀರು ಹರಿಸಿ ಹಗಲು ದರೋಡೆ ಮಾಡುತ್ತಿದ್ದಾರೆ. ಆದರೆ, ಕಾಲುವೆಗಳಿಗೆ, ಕೆರೆ ಕಟ್ಟೆಗಳಿಗೂ ನೀರು ಹರಿಸುತ್ತಿಲ್ಲ. ಹೀಗಾಗಿ, ಬೆಳೆಗೆ ನೀರಿಲ್ಲದಂತಾಗಿದೆ. ಅಧಿಕಾರಿಗಳನ್ನು ಕೇಳಿದರೆ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಹೇಳುತ್ತಾರೆ. ಜನಪ್ರತಿನಿಧಿಗಳು ಕಣ್ಣುಮುಚ್ಚಿಕೊಂಡಿದ್ದಾರೆ’ ಎಂದು ಸ್ಥಳೀಯ ರೈತರು ಆರೋಪಿಸಿದ್ದಾರೆ.ಈ ಆರೋಪವನ್ನು ಅಧಿಕಾರಿಗಳು ಅಲ್ಲಗಳೆದಿದ್ದಾರೆ.