ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ವಾಣಿವಿಲಾಸ ನೀರು ಸರಬರಾಜು ಕೇಂದ್ರದ ಕಾರ್ಯನಿರ್ವಾಹಕ ಎಂಜಿನಿಯರ್ ಶ್ರೀನಿವಾಸ್, ‘ಸಾಕಷ್ಟು ಬಾರಿ ಎಚ್ಚರಿಕೆ ನೀಡಿದ್ದರೂ, ಈ ರೀತಿ ಮೋಟಾರ್ ಅಳವಡಿಸಿಕೊಂಡು ನೀರನ್ನು ಕಳವು ಮಾಡಲಾಗುತ್ತಿದೆ. ಇನ್ನು ಮುಂದೆ ನಗರದೆಲ್ಲೆಡೆ ಕಾರ್ಯಾಚರಣೆ ಕೈಗೊಂಡು ಎಲ್ಲ ಮೋಟಾರ್ಗಳನ್ನು ವಶಪಡಿಸಿಕೊಳ್ಳಲಾಗುವುದು. ಒಂದು ವೇಳೆ ಮತ್ತೆ ಇಂತಹ ಕೃತ್ಯಕ್ಕೆ ಕೈ ಹಾಕಿದರೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.