<p><strong>ಮೈಸೂರು: </strong>ಇಲ್ಲಿನ ಪೀಪಲ್ಸ್ ಪಾರ್ಕ್ ಸರ್ಕಾರಿ ಪ್ರೌಢಶಾಲೆಯಲ್ಲಿ ‘ಪ್ರಜಾವಾಣಿ’ ವತಿಯಿಂದ ನವೋದಯ ಫೌಂಡೇಷನ್ ಮತ್ತು ನವೋ– ಕಾವೇರಿ ಪದವಿಪೂರ್ವ ಕಾಲೇಜಿನ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಶುಕ್ರವಾರ ಹೂ ನೀಡಿ ಸ್ವಾಗತ ಕೋರಲಾಯಿತು.</p>.<p>ಡಿಡಿಪಿಐ ಪಾಂಡುರಂಗ ಅವರು ಗುಲಾಬಿ ಹೂ ನೀಡಿ ಸಾಲಾಗಿ ವಿದ್ಯಾರ್ಥಿಗಳನ್ನು ಶಾಲೆಗೆ ಬರಮಾಡಿಕೊಂಡರು. ಕೋವಿಡ್ ಭಯವನ್ನು ಬಿಟ್ಟು, ನಿರ್ಭಯವಾಗಿ ಪಾಠ ಆಲಿಸುವಂತೆ ಕಿವಿಮಾತು ಹೇಳಿದರು. ಶಾಲೆಯ ಶಿಕ್ಷಕರು ಈಗಾಗಲೇ ಅಗತ್ಯ ಇರುವ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಧೈರ್ಯ ತುಂಬಿದರು.</p>.<p>ಮಕ್ಕಳೂ ನಗುನಗುತ್ತ ಶಾಲಾ ಆವರಣವನ್ನು ಪ್ರವೇಶಿಸಿ, ಶಿಕ್ಷಕರಿಗೆ ವಂದಿಸಿದರು. ತಮ್ಮ ತಮ್ಮ ಬ್ಯಾಗುಗಳನ್ನು ಅಂಗಳದಲ್ಲಿ ಇಟ್ಟು, ಮರದ ನೆರಳಿನಲ್ಲಿ ವಿದ್ಯಾಗಮ ತರಗತಿಗೆ ಕಿವಿಗೊಟ್ಟರು. 9ನೇ ತರಗತಿ ವಿದ್ಯಾರ್ಥಿಗಳು ಬಯಲು ರಂಗದ ಮಂದಿರದ ವೇದಿಕೆಯಲ್ಲಿ ಆಸೀನರಾಗಿ ಪಾಠ ಕೇಳಿ ಸಂಭ್ರಮಿಸಿದರು.</p>.<p>ಶಿಕ್ಷಕರೊಂದಿಗೆ ಮಾತನಾಡಿದ ಅವರು, ‘ಸೋಮವಾರದವರೆಗೂ ಯಾವ ಯಾವ ವಿದ್ಯಾರ್ಥಿಗಳು ಶಾಲೆಗೆ ಬಂದಿರುವುದಿಲ್ಲವೋ ಆ ವಿದ್ಯಾರ್ಥಿಗಳ ಮನೆಗೆ ಹೋಗಿ ಪೋಷಕರ ಮನವೊಲಿಸುವ ಕಾರ್ಯ ಮಾಡಬೇಕು. ಕೇವಲ ಒಬ್ಬರೇ ಶಿಕ್ಷಕರು ಹೋದರೆ ಸಾಕಾಗುವುದಿಲ್ಲ. ಕನಿಷ್ಠ ಇಬ್ಬರು ಶಿಕ್ಷಕರಾದರೂ ಮನೆಗೆ ಹೋಗಿ ಪೋಷಕರಿಗೆ ಧೈರ್ಯ ತುಂಬಿ ಮಕ್ಕಳನ್ನು ಶಾಲೆಗೆ ಕರೆತರಬೇಕು’ ಎಂದು ಸೂಚನೆ ನೀಡಿದರು.</p>.<p>ವಿದ್ಯಾರ್ಥಿಗಳಿಗೆ ಉಚಿತವಾಗಿ ‘ಪ್ರಜಾವಾಣಿ’ ದಿನಪತ್ರಿಕೆಯನ್ನು ಹಂಚಲಾಯಿತು. ನಂತರ, ವಿದ್ಯಾರ್ಥಿಗಳಿಗೆ ಉಡುಗೊರೆ ನೀಡಲಾಯಿತು. ನವೋದಯ ಫೌಂಡೇಷನ್ನಿನ ಅಧ್ಯಕ್ಷ ಡಾ.ರವಿ, ಮ್ಯಾನೇಜಿಂಗ್ ಟ್ರಸ್ಟಿ ಪ್ರಿಯದರ್ಶಿನಿ, ಕಾರ್ಯದರ್ಶಿ ಶ್ವೇತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಇಲ್ಲಿನ ಪೀಪಲ್ಸ್ ಪಾರ್ಕ್ ಸರ್ಕಾರಿ ಪ್ರೌಢಶಾಲೆಯಲ್ಲಿ ‘ಪ್ರಜಾವಾಣಿ’ ವತಿಯಿಂದ ನವೋದಯ ಫೌಂಡೇಷನ್ ಮತ್ತು ನವೋ– ಕಾವೇರಿ ಪದವಿಪೂರ್ವ ಕಾಲೇಜಿನ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಶುಕ್ರವಾರ ಹೂ ನೀಡಿ ಸ್ವಾಗತ ಕೋರಲಾಯಿತು.</p>.<p>ಡಿಡಿಪಿಐ ಪಾಂಡುರಂಗ ಅವರು ಗುಲಾಬಿ ಹೂ ನೀಡಿ ಸಾಲಾಗಿ ವಿದ್ಯಾರ್ಥಿಗಳನ್ನು ಶಾಲೆಗೆ ಬರಮಾಡಿಕೊಂಡರು. ಕೋವಿಡ್ ಭಯವನ್ನು ಬಿಟ್ಟು, ನಿರ್ಭಯವಾಗಿ ಪಾಠ ಆಲಿಸುವಂತೆ ಕಿವಿಮಾತು ಹೇಳಿದರು. ಶಾಲೆಯ ಶಿಕ್ಷಕರು ಈಗಾಗಲೇ ಅಗತ್ಯ ಇರುವ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಧೈರ್ಯ ತುಂಬಿದರು.</p>.<p>ಮಕ್ಕಳೂ ನಗುನಗುತ್ತ ಶಾಲಾ ಆವರಣವನ್ನು ಪ್ರವೇಶಿಸಿ, ಶಿಕ್ಷಕರಿಗೆ ವಂದಿಸಿದರು. ತಮ್ಮ ತಮ್ಮ ಬ್ಯಾಗುಗಳನ್ನು ಅಂಗಳದಲ್ಲಿ ಇಟ್ಟು, ಮರದ ನೆರಳಿನಲ್ಲಿ ವಿದ್ಯಾಗಮ ತರಗತಿಗೆ ಕಿವಿಗೊಟ್ಟರು. 9ನೇ ತರಗತಿ ವಿದ್ಯಾರ್ಥಿಗಳು ಬಯಲು ರಂಗದ ಮಂದಿರದ ವೇದಿಕೆಯಲ್ಲಿ ಆಸೀನರಾಗಿ ಪಾಠ ಕೇಳಿ ಸಂಭ್ರಮಿಸಿದರು.</p>.<p>ಶಿಕ್ಷಕರೊಂದಿಗೆ ಮಾತನಾಡಿದ ಅವರು, ‘ಸೋಮವಾರದವರೆಗೂ ಯಾವ ಯಾವ ವಿದ್ಯಾರ್ಥಿಗಳು ಶಾಲೆಗೆ ಬಂದಿರುವುದಿಲ್ಲವೋ ಆ ವಿದ್ಯಾರ್ಥಿಗಳ ಮನೆಗೆ ಹೋಗಿ ಪೋಷಕರ ಮನವೊಲಿಸುವ ಕಾರ್ಯ ಮಾಡಬೇಕು. ಕೇವಲ ಒಬ್ಬರೇ ಶಿಕ್ಷಕರು ಹೋದರೆ ಸಾಕಾಗುವುದಿಲ್ಲ. ಕನಿಷ್ಠ ಇಬ್ಬರು ಶಿಕ್ಷಕರಾದರೂ ಮನೆಗೆ ಹೋಗಿ ಪೋಷಕರಿಗೆ ಧೈರ್ಯ ತುಂಬಿ ಮಕ್ಕಳನ್ನು ಶಾಲೆಗೆ ಕರೆತರಬೇಕು’ ಎಂದು ಸೂಚನೆ ನೀಡಿದರು.</p>.<p>ವಿದ್ಯಾರ್ಥಿಗಳಿಗೆ ಉಚಿತವಾಗಿ ‘ಪ್ರಜಾವಾಣಿ’ ದಿನಪತ್ರಿಕೆಯನ್ನು ಹಂಚಲಾಯಿತು. ನಂತರ, ವಿದ್ಯಾರ್ಥಿಗಳಿಗೆ ಉಡುಗೊರೆ ನೀಡಲಾಯಿತು. ನವೋದಯ ಫೌಂಡೇಷನ್ನಿನ ಅಧ್ಯಕ್ಷ ಡಾ.ರವಿ, ಮ್ಯಾನೇಜಿಂಗ್ ಟ್ರಸ್ಟಿ ಪ್ರಿಯದರ್ಶಿನಿ, ಕಾರ್ಯದರ್ಶಿ ಶ್ವೇತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>