‘ಯುವಕರಿಗೆ ಚಾಕೊಲೇಟ್ ನೀಡುವ ಅಗ್ನಿಪಥ್ ಯೋಜನೆ ಕೈಬಿಡಬೇಕು. ಕಾರ್ಮಿಮರನ್ನು ಶೋಷಿಸುವ 4 ಕಾರ್ಮಿಕ ಸಂಹಿತೆಗಳನ್ನು ಕೈಬಿಡಬೇಕು. ಕನಿಷ್ಠ ಬೆಂಬಲ ಬೆಲೆ ಶಾಸನಬದ್ಧಗೊಳಿಸಬೇಕು. ವಿದ್ಯುತ್ ಖಾಸಗೀಕರಣ ಪ್ರಸ್ತಾವದಿಂದ ಹಿಂದೆ ಸರಿಯಬೇಕು. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸಿಲಿಂಡರ್ ಮತ್ತು ಅಗತ್ಯ ವಸ್ತುಗಳ ಬೆಲೆ ಇಳಿಕೆಗೆ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.