<p><strong>ಮೈಸೂರು</strong>: ‘ಮೈಸೂರು ಮಹಾರಾಜರಿಗೆ ಮೋಸ ಮಾಡಿದ ಟಿಪ್ಪು ಜಯಂತಿಯನ್ನು ಸಾರ್ವಜನಿಕರ ಹಣದಲ್ಲಿ ಮಾಡಿದ್ದು, ಸಿದ್ದರಾಮಯ್ಯ ಅವರ ದೊಡ್ಡ ಸಾಧನೆ’ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೊಂಕು ಮಾತನಾಡಿದ್ದಾರೆ.</p>.<p>ಬಿಜೆಪಿಯ ಮೈಸೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ಘಟಕವು ಇಲ್ಲಿನ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಕಾಳಿಂಗರಾವ್ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಜನಸ್ವರಾಜ್ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>‘ಶಾದಿಭಾಗ್ಯ ನೀಡಿದ ಸಿದ್ದರಾಮಯ್ಯ ಅವರ ಕೊಡುಗೆ ಮೈಸೂರಿಗೆ ಏನು?’ ಎಂದು ಪ್ರಶ್ನಿಸಿದರು.</p>.<p>ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿ,‘ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಆಗುವುದು ಇರಲಿ,ವಿಧಾನ ಪರಿಷತ್ ಚುನಾವಣೆಯಲ್ಲೂ ಗೆಲ್ಲುವುದಿಲ್ಲ’ ಎಂದರು.</p>.<p>‘ನೆನ್ನೆಯಷ್ಟೇ ಅವರು ತನ್ನನ್ನು ಸೋಲಿಸಿದ ಕಾರ್ಯಕರ್ತರನ್ನು ತರಾಟೆಗೆ ತೆಗೆದುಕೊಂಡರು. ನನ್ನನ್ನು ಸೋಲಿಸಿದ ನಿಮಗೆ ನಾಚಿಕೆ ಆಗಲ್ವಾ ಎಂದರು. ಆದರೆ, ಡಾ.ಜಿ.ಪರಮೇಶ್ವರ ಅವರನ್ನು ಸೋಲಿಸಿದ ಸಿದ್ದರಾಮಯ್ಯ ಅವರಿಗೆ ನಾಚಿಕೆ ಇದೆಯೆ?’ ಎಂದು ವ್ಯಂಗ್ಯವಾಡಿದರು.</p>.<p>‘ಡಿ.ಕೆ.ಶಿವಕುಮಾರ್ ಎಂದು ಕೂಗಿದರೆ ಸಾಕು ಅವರನ್ನು ಕಾಂಗ್ರೆಸ್ ದ್ರೋಹಿಗಳು ಅಂತ ಸಿದ್ದರಾಮಯ್ಯ ಹೇಳುತ್ತಾರೆ. ಇದು ಕಾಂಗ್ರೆಸ್ ಸ್ಥಿತಿ.ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ 5 ಸಾವಿರ, ಉಪಾಧ್ಯಕ್ಷರಿಗೆ 4 ಸಾವಿರ, ಸದಸ್ಯರಿಗೆ 2 ಸಾವಿರ ಗೌರವಧನ ನೀಡುತ್ತೇವೆ’ಎಂದು ಭರವಸೆ ನೀಡಿದರು.</p>.<p><strong>ಇದನ್ನೂ ಓದಿ:<a href="https://www.prajavani.net/karnataka-news/farma-laws-rejected-union-minister-shobha-karndlaje-no-reaction-885438.html" target="_blank">ಕೃಷಿ ಕಾಯ್ದೆ ವಾಪಸ್: ಪ್ರತಿಕ್ರಿಯೆ ನೀಡದ ಕೃಷಿ ಸಚಿವೆ ಶೋಭಾ ಕರಂದ್ಲಾಜೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಮೈಸೂರು ಮಹಾರಾಜರಿಗೆ ಮೋಸ ಮಾಡಿದ ಟಿಪ್ಪು ಜಯಂತಿಯನ್ನು ಸಾರ್ವಜನಿಕರ ಹಣದಲ್ಲಿ ಮಾಡಿದ್ದು, ಸಿದ್ದರಾಮಯ್ಯ ಅವರ ದೊಡ್ಡ ಸಾಧನೆ’ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೊಂಕು ಮಾತನಾಡಿದ್ದಾರೆ.</p>.<p>ಬಿಜೆಪಿಯ ಮೈಸೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ಘಟಕವು ಇಲ್ಲಿನ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಕಾಳಿಂಗರಾವ್ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಜನಸ್ವರಾಜ್ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>‘ಶಾದಿಭಾಗ್ಯ ನೀಡಿದ ಸಿದ್ದರಾಮಯ್ಯ ಅವರ ಕೊಡುಗೆ ಮೈಸೂರಿಗೆ ಏನು?’ ಎಂದು ಪ್ರಶ್ನಿಸಿದರು.</p>.<p>ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿ,‘ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಆಗುವುದು ಇರಲಿ,ವಿಧಾನ ಪರಿಷತ್ ಚುನಾವಣೆಯಲ್ಲೂ ಗೆಲ್ಲುವುದಿಲ್ಲ’ ಎಂದರು.</p>.<p>‘ನೆನ್ನೆಯಷ್ಟೇ ಅವರು ತನ್ನನ್ನು ಸೋಲಿಸಿದ ಕಾರ್ಯಕರ್ತರನ್ನು ತರಾಟೆಗೆ ತೆಗೆದುಕೊಂಡರು. ನನ್ನನ್ನು ಸೋಲಿಸಿದ ನಿಮಗೆ ನಾಚಿಕೆ ಆಗಲ್ವಾ ಎಂದರು. ಆದರೆ, ಡಾ.ಜಿ.ಪರಮೇಶ್ವರ ಅವರನ್ನು ಸೋಲಿಸಿದ ಸಿದ್ದರಾಮಯ್ಯ ಅವರಿಗೆ ನಾಚಿಕೆ ಇದೆಯೆ?’ ಎಂದು ವ್ಯಂಗ್ಯವಾಡಿದರು.</p>.<p>‘ಡಿ.ಕೆ.ಶಿವಕುಮಾರ್ ಎಂದು ಕೂಗಿದರೆ ಸಾಕು ಅವರನ್ನು ಕಾಂಗ್ರೆಸ್ ದ್ರೋಹಿಗಳು ಅಂತ ಸಿದ್ದರಾಮಯ್ಯ ಹೇಳುತ್ತಾರೆ. ಇದು ಕಾಂಗ್ರೆಸ್ ಸ್ಥಿತಿ.ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ 5 ಸಾವಿರ, ಉಪಾಧ್ಯಕ್ಷರಿಗೆ 4 ಸಾವಿರ, ಸದಸ್ಯರಿಗೆ 2 ಸಾವಿರ ಗೌರವಧನ ನೀಡುತ್ತೇವೆ’ಎಂದು ಭರವಸೆ ನೀಡಿದರು.</p>.<p><strong>ಇದನ್ನೂ ಓದಿ:<a href="https://www.prajavani.net/karnataka-news/farma-laws-rejected-union-minister-shobha-karndlaje-no-reaction-885438.html" target="_blank">ಕೃಷಿ ಕಾಯ್ದೆ ವಾಪಸ್: ಪ್ರತಿಕ್ರಿಯೆ ನೀಡದ ಕೃಷಿ ಸಚಿವೆ ಶೋಭಾ ಕರಂದ್ಲಾಜೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>