ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವಿಶ್ವನಾಥ್‌ಗೆ ಬಿಜೆಪಿಯವರು ನೀಡಿದ ಮಿಠಾಯಿ ಯಾವುದು?’

ಜೆಡಿಎಸ್‌ ವಕ್ತಾರ ಎನ್.ಆರ್.ರವಿಚಂದ್ರೇಗೌಡ ‍ಪ್ರಶ್ನೆ
Last Updated 17 ಡಿಸೆಂಬರ್ 2020, 13:14 IST
ಅಕ್ಷರ ಗಾತ್ರ

ಮೈಸೂರು: ಬಿಜೆಪಿ ಮುಂಬೈನಲ್ಲಿ ನೀಡಿರುವ ಮಿಠಾಯಿ ಯಾವುದು ಎಂಬುದನ್ನು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಬಹಿರಂಗಪಡಿಸಬೇಕು ಎಂದು ಜೆಡಿಎಸ್‌ ರಾಜ್ಯ ಘಟಕದ ವಕ್ತಾರ ಎನ್.ಆರ್.ರವಿಚಂದ್ರೇಗೌಡ ಒತ್ತಾಯಿಸಿದರು.

‘ಕಾಂಗ್ರೆಸ್‌ನಲ್ಲಿದ್ದಾಗ ಕಾಂಗ್ರೆಸ್‌ ತಾಯಿ ಎಂದು, ಜೆಡಿಎಸ್‌ಗೆ ಬಂದಾಗ ಎಚ್.ಡಿ.ದೇವೇಗೌಡ ತಂದೆ ಸಮಾನರೆಂದು ವಿಶ್ವನಾಥ್ ಹೇಳಿದ್ದರು. ಈಗ ತಾವು ಯಾರ ಮಗು ಎಂಬುದನ್ನು ಅವರೇ ಹೇಳಬೇಕು. ಬಿಜೆಪಿಯಲ್ಲಿರುವ ಅವರಿಗೆ ನರೇಂದ್ರ ಮೋದಿ ಏನಾಗಬೇಕು ಎನ್ನುವುದನ್ನೂ ನಮಗೆ ತಿಳಿಸಬೇಕು’ ಎಂದು ಅವರು ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.‌

ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ಸ್ಪಷ್ಟವಾಗಿ ವಿಶ್ವನಾಥ್ ಅವರನ್ನು ಅನರ್ಹ ಶಾಸಕ ಎಂದು ಹೇಳಿದೆ. ವಕೀಲರೂ ಆಗಿರುವ ಅವರಿಗೆ ಈ ಆದೇಶದ ಅರಿವಿದೆ. ಹೀಗಿದ್ದರೂ, ಅವರು ವಿಧಾನಪರಿಷತ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ನ್ಯಾಯಾಲಯದ ಆದೇಶದ ಬಗ್ಗೆ ಗೌರವ ಇದ್ದರೆ, ಕೂಡಲೇ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ, ಕಾನೂನು ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT