ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ಸ್ಪಷ್ಟವಾಗಿ ವಿಶ್ವನಾಥ್ ಅವರನ್ನು ಅನರ್ಹ ಶಾಸಕ ಎಂದು ಹೇಳಿದೆ. ವಕೀಲರೂ ಆಗಿರುವ ಅವರಿಗೆ ಈ ಆದೇಶದ ಅರಿವಿದೆ. ಹೀಗಿದ್ದರೂ, ಅವರು ವಿಧಾನಪರಿಷತ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ನ್ಯಾಯಾಲಯದ ಆದೇಶದ ಬಗ್ಗೆ ಗೌರವ ಇದ್ದರೆ, ಕೂಡಲೇ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ, ಕಾನೂನು ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.