ಜಿಲ್ಲಾಧಿಕಾರಿ ಶಿಖಾ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಾಪ ಸಿಂಹ ಆರೋಪಕ್ಕೆ ತಿರುಗೇಟು ನೀಡಿದ ಎಂ.ಲಕ್ಷ್ಮಣ್, ‘ಸಂಸದರು ಮಾಹಿತಿ ಪಡೆದು ಮಾತನಾಡಲಿ. ಶಿಖಾ ಪ್ರಕರಣದಲ್ಲಿ ಆರೋಪಿಯಾಗಿದ್ದ ಮರಿಗೌಡ ಅಂದು ಜೈಲು ಪಾಲಾದರು. ಆ ತಕ್ಷಣಕ್ಕೆ ಸಿದ್ದರಾಮಯ್ಯ ಶಿಖಾ ಅವರನ್ನು ವರ್ಗಾಯಿಸಿರಲಿಲ್ಲ. ಈ ಘಟನೆಯ ನಂತರವೂ ಒಂದು ಕಾಲು ವರ್ಷ ಮೈಸೂರಿನ ಜಿಲ್ಲಾಧಿಕಾರಿಯಾಗಿದ್ದರು ಎಂಬುದು ನೆನಪಿನಲ್ಲಿರಲಿ’ ಎಂದರು.