ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಪ್ರತಿಮೆಗೆ ಪುಷ್ಪಾರ್ಚನೆ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲೇ ಒಮ್ಮೆ ಆಗಿರುವ ತನಿಖೆಯನ್ನು ಇನ್ನೊಮ್ಮೆ ಮಾಡಿಸುವುದರಲ್ಲಿ ಏನು ಅರ್ಥವಿದೆ. ಕೆಲವು ಐಎಎಸ್ ಅಧಿಕಾರಿಗಳಲ್ಲಿ ತಾವು ಮಾತ್ರ ಪ್ರಾಮಾಣಿಕರು, ಬೇರೆಯವರೆಲ್ಲ ಅಪ್ರಾಮಾಣಿಕರು ಎನ್ನುವ ಮನಸ್ಥಿತಿ ಇದೆ. ಅವರ ಮನಸ್ಸಿಂದ ಇಂತಹ ಅಭಿಪ್ರಾಯ ತೆಗೆಯಬೇಕು ಎಂದರು.