‘ಹುಣಸೂರು ಜಿಲ್ಲೆ ರಚನೆಗೆ ಸಂಬಂಧಿಸಿದಂತೆ ನನ್ನ ಹಾಗೂ ಅಲ್ಲಿನ ಶಾಸಕ ಎಚ್.ಪಿ.ಮಂಜುನಾಥ್ ಅಭಿಪ್ರಾಯವೇ ಬೇಕಿಲ್ಲ. ಅವರು ಯಾರು ? ಎಂದು ಕೇಳಿದ್ದಾರೆ. ವಿಶ್ವನಾಥ್ ಅವರ ಈ ಪ್ರಶ್ನೆಗೆ ಜನ ಈಗಾಗಲೇ ಉತ್ತರ ನೀಡಿದ್ದಾರೆ. ತಾವು ಯಾರು ಎಂಬುದನ್ನೊಮ್ಮೆ ಆತ್ಮಾವಲೋಕನ ಮಾಡಿಕೊಳ್ಳಲಿ’ ಎಂದು ಪತ್ರಿಕಾಗೋಷ್ಠಿಯಲ್ಲಿ ತಿರುಗೇಟು ನೀಡಿದರು.