5 ದಿನಗಳ ಹಿಂದೆ ಶಿವರಾಜು ಅವರ ಶವ ತಾಲ್ಲೂಕಿನ ಕಪ್ಪಸೋಗೆ ಗ್ರಾಮದ ನಾಲೆಯೊಂದರಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಅಪರಿಚಿತ ಶವವೆಂದು ದೂರು ದಾಖಲಾಗಿತ್ತು. ಈ ಪ್ರಕರಣವನ್ನು ಪತ್ತೆಹಚ್ಚುವ ಸಲುವಾಗಿ ಸಿಪಿಐ ಲಕ್ಷ್ಮಿಕಾಂತ ತಳವಾರ್, ದೇವರಾಜು, ಸತೀಶ್, ಗುರು, ನವೀನ್, ಮಹೇಶ್, ಕಾಂತಮ್ಮ ಸೇರಿ 6 ಮಂದಿಯ ತಂಡವನ್ನು ರಚಿಸಿದ್ದರು.