ಮೈಸೂರು: ತಿ.ನರಸೀಪುರ ತಾಲ್ಲೂಕಿನ ತಲಕಾಡುಪಂಚಲಿಂಗಗಳಲ್ಲಿ ಒಂದಾಗಿರುವ ಮುಡುಕುತೊರೆ ಭ್ರಮರಾಂಬ ಮಲ್ಲಿಕಾರ್ಜುನಸ್ವಾಮಿ ದೇಗುಲವನ್ನು ಪುನರ್ ನಿರ್ಮಾಣ ಮಾಡಲು ವಾರದಲ್ಲಿ ₹ 10 ಕೋಟಿ ಬಿಡುಗಡೆ ಮಾಡಲಾಗುವುದುಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದರು.
ಮುಡುಕುತೊರೆ ಗ್ರಾಮದಲ್ಲಿ ₹ 30 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಕಾರ್ಯಕ್ಕೆ ಬುಧವಾರ ಶಂಕುಸ್ಥಾಪನೆ ನೆರವೇರಿಸಿಈವಿಚಾರ ಪ್ರಕಟಿಸಿದರು.
‘ಯಾವುದೇ ವ್ಯಕ್ತಿಯ ಸಾಧನೆ ಮಾತನಾಡಬೇಕೇ ಹೊರತು ಮಾತೇ ಸಾಧನೆ ಆಗಬಾರದು. ಇನ್ನೂ ಎರಡೂವರೆ ವರ್ಷ ನನ್ನ ಅಧಿಕಾರಾವಧಿ ಇದೆ. ಈ ಅವಧಿಯಲ್ಲಿ ಅಭಿವೃದ್ಧಿ ಕೆಲಸ ಪೂರ್ಣಗೊಳಿಸುವ ಅಪೇಕ್ಷೆ ಹೊಂದಿದ್ದೇನೆ’ ಎಂದು ಮಾರ್ಮಿಕವಾಗಿ ನುಡಿದರು.
‘ಗುತ್ತಿಗೆದಾರರು ತಮಗೆ ಎಷ್ಟು ಬರುತ್ತೆ ಎಂದು ಯೋಚನೆ ಮಾಡದೆ ಇನ್ನು ಎರಡು ವರ್ಷಗಳಲ್ಲಿ ಈ ದೇಗುಲ ನಿರ್ಮಿಸಬೇಕು. ನನ್ನ ಅಧಿಕಾರಾವಧಿಯಲ್ಲಿ ಹಣದ ಕೊರತೆ ಉಂಟಾಗದಂತೆ ನೋಡಿಕೊಳ್ಳುತ್ತೇನೆ’ ಎಂದರು.
‘ದೇವಸ್ಥಾನಗಳ ಅಭಿವೃದ್ಧಿಗೆ ಹಣದ ಕೊರತೆಯಿಲ್ಲ. ದೇವರು ಕೊಟ್ಟಿದ್ದನ್ನು ದೇಗುಲಗಳ ಅಭಿವೃದ್ಧಿಗೇನೀಡಲಾಗುವುದು. ಕೆಲ ದಿನಗಳ ಹಿಂದೆ 136 ದೇಗುಲಗಳ ಅಭಿವೃದ್ಧಿಗೆ ತಲಾ ₹ 1 ಕೋಟಿಯಂತೆ ₹ 136 ಕೋಟಿ ಬಿಡುಗಡೆ ಮಾಡಿದ್ದೇನೆ’ ಎಂದು ತಿಳಿಸಿದರು.
ಈ ದೇಗುಲ ನಿರ್ಮಾಣಕ್ಕೆ ಮೊದಲ ಹಂತದಲ್ಲಿ ₹ 16 ಕೋಟಿ ವೆಚ್ಚ ಮಾಡಲು ಅನುಮೋದನೆ ಸಿಕ್ಕಿದೆ. ಸರ್ಕಾರ ಈಗಾಗಲೇ ₹ 5 ಕೋಟಿ ಬಿಡುಗಡೆ ಮಾಡಿದೆ. ಅಲ್ಲದೇ, ಇನ್ನುಳಿದ ₹ 11 ಕೋಟಿಮೊತ್ತವನ್ನುಭಕ್ತರಿಂದ ದೇಣಿಗೆ ಸಂಗ್ರಹಿಸಲುದೇವಾಲಯ ಅಭಿವೃದ್ಧಿ ಸಮಿತಿ ರಚಿಸಲಾಗಿದೆ.
ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟೊ.ಸೋಮಶೇಖರ್ ಪಾಲ್ಗೊಂಡಿದ್ದರು.