ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಚಾರಕ್ಕೆ ಹೋಗುವುದಿಲ್ಲ: ಶಿವರಾಜ್‌ಕುಮಾರ್

Last Updated 24 ಮಾರ್ಚ್ 2019, 14:22 IST
ಅಕ್ಷರ ಗಾತ್ರ

ಮೈಸೂರು: ‘ರಾಜಕೀಯದ ಬಗ್ಗೆ ನನಗೇನೂ ಗೊತ್ತಿಲ್ಲ. ಯಾವುದೇ ಅಭ್ಯರ್ಥಿಯ ಪರ ಪ್ರಚಾರಕ್ಕೂ ಹೋಗುವುದಿಲ್ಲ’ ಎಂದು ನಟ ಶಿವರಾಜ್‌ಕುಮಾರ್‌ ಹೇಳಿದರು.

ಏ. 5 ರಂದು ಬಿಡುಗಡೆಯಾಗಲಿರುವ ತಮ್ಮ ಹೊಸ ಸಿನಿಮಾ ‘ಕವಚ’ ಪ್ರಚಾರಾರ್ಥ ಭಾನುವಾರ ಇಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

‘ಕಳೆದ ಚುನಾವಣೆಯಲ್ಲಿ ಪತ್ನಿ ಗೀತಾ ಸ್ಪರ್ಧಿಸಿದ್ದರಿಂದ ಶಿವಮೊಗ್ಗಕ್ಕೆ ಪ್ರಚಾರಕ್ಕೆ ಹೋಗಿದ್ದೆ. ಈ ಬಾರಿ ಶಿವಮೊಗ್ಗಕ್ಕೂ ಹೋಗುವುದಿಲ್ಲ. ನಾನು ಪ್ರಚಾರಕ್ಕೆ ಬರಬೇಕೆಂದು ಮಧು ಬಂಗಾರಪ್ಪ ಕೂಡ ಬಯಸುವುದಿಲ್ಲ’ ಎಂದು ತಿಳಿಸಿದರು.

ಸುಮಲತಾ ಕರೆದರೆ ಮಂಡ್ಯದಲ್ಲಿ ಪ್ರಚಾರ ಮಾಡುವಿರಾ ಎಂಬ ಪ್ರಶ್ನೆಗೆ, ‘ಅವರು ಕರೆದಿಲ್ಲ. ಕರೆದರೂ ಹೋಗುವುದಿಲ್ಲ. ರಾಜಕೀಯದ ಕಲೆ ತಿಳಿಯುವಷ್ಟು ಬುದ್ಧಿವಂತನಲ್ಲ. ಸಿನಿಮಾದಲ್ಲೇ ಬ್ಯುಸಿಯಾಗಿದ್ದೇನೆ. ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಲು ಸಮಯವೂ ಇಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT