ಪಿರಿಯಾಪಟ್ಟಣ: ಇಲ್ಲಿನ ಕೆಲ್ಲೂರು– ಹೊಸಕೋಟೆ ರಸ್ತೆಯಲ್ಲಿ ಅರೆಬೆಂದ ಸ್ಥಿತಿಯಲ್ಲಿ ಯುವತಿಯೊಬ್ಬರ ಶವ ಭಾನುವಾರ ದೊರತಿದೆ.
ಉರಿಯುತ್ತಿದ್ದ ಸ್ಥಿತಿಯಲ್ಲಿದ್ದ ಶವವನ್ನು ಕಂಡ ಗ್ರಾಮಸ್ಥರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ದೇಹವು ಗುರುತು ಹಿಡಿಯಲಾರದಷ್ಟು ಸುಟ್ಟು ಹೋಗಿದೆ.
ಮೃತದೇಹದಲ್ಲಿ ಕೆಂಪು ಬಣ್ಣದ ಲೆಗ್ಗಿನ್ಸ್, ಕಾಲುಂಗುರ, ಕಾಲ್ಗೆಜ್ಜೆ, ಕೈಯಲ್ಲಿ ಉಂಗುರ ಪತ್ತೆಯಾಗಿದೆ. ಘಟನೆ ಕುರಿತು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಿಳಾ ಸಂಘಟನೆಗಳ ಆಕ್ರೋಶ:ಘಟನೆ ಕುರಿತು ಮಹಿಳಾ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಶೀಘ್ರವೇ ತನಿಖೆನಡೆಸಿ, ಅಪರಾಧಿಗಳಿಗೆ ಶಿಕ್ಷೆ ವಿಧಿಸಬೇಕು ಎಂದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್ಎಸ್) ಆಗ್ರಹಿಸಿದೆ.