ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ

ರಸ್ತೆ ಅಪಘಾತ; ಪಾದಚಾರಿ ಸಾವು
Last Updated 21 ನವೆಂಬರ್ 2019, 10:47 IST
ಅಕ್ಷರ ಗಾತ್ರ

ಮೈಸೂರು: ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಇಲವಾಲದ ಬೊಮ್ಮೇನಹಳ್ಳಿಯ ಪುಟ್ಟಮ್ಮ (55) ಅವರ ಮೃತದೇಹ ಇಲ್ಲಿನ ಲಿಂಗದೇವರಕೊಪ್ಪಲು ಸಮೀಪದ ಮೋರಿಯಲ್ಲಿ ಪತ್ತೆಯಾಗಿದೆ.

ದೇಹವು ಸಂಪೂರ್ಣ ಕೊಳೆತು ಹೋಗಿದೆ. ಯಾರೊ ಕೊಲೆ ಮಾಡಿ ಮೃತದೇಹವನ್ನು ಇಲ್ಲಿಗೆ ತಂದು ಎಸೆದಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಆರೋಪಿಯೊಬ್ಬನನ್ನು ವಶಕ್ಕೆ ತೆಗೆದುಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಪುಟ್ಟಮ್ಮ ಲಿಂಗದೇವರಕೊಪ್ಪಲು ಕೊಪ್ಪಲಿನಲ್ಲಿರುವ ಶುಂಠಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಮೊಮ್ಮಗುವಿನ ನಾಮಕರಣ ಕಾರ್ಯಕ್ರಮಕ್ಕೆ ಆಹ್ವಾನ ಪತ್ರಿಕೆ ನೀಡಲು ನ. 14ರಂದು ತೆರಳಿದ್ದರು. ನಂತರ ಇವರು ನಾಪತ್ತೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ವಿಜಯನಗರ ಠಾಣೆಯ ಇನ್‌ಸ್ಪೆಕ್ಟರ್ ಬಾಲಕೃಷ್ಣ ತನಿಖೆ ಕೈಗೊಂಡಿದ್ದಾರೆ.

ಪಾದಚಾರಿ ಸಾವು

ಮೈಸೂರು: ತಾಲ್ಲೂಕಿನ ಕಡಕೊಳ ಸಮೀಪ ಮೈಸೂರು ನಂಜನಗೂಡು ರಸ್ತೆ ದಾಟುತ್ತಿದ್ದ ಹೆಬ್ಬಾಳ ನಿವಾಸಿ ಶಿವಸ್ವಾಮಿ (55) ಎಂಬುವವರಿಗೆ ಲಾರಿಯೊಂದು ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮೈಸೂರು ದಕ್ಷಿಣ ಠಾಣೆಯ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT