ಪುಟ್ಟಮ್ಮ ಲಿಂಗದೇವರಕೊಪ್ಪಲು ಕೊಪ್ಪಲಿನಲ್ಲಿರುವ ಶುಂಠಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಮೊಮ್ಮಗುವಿನ ನಾಮಕರಣ ಕಾರ್ಯಕ್ರಮಕ್ಕೆ ಆಹ್ವಾನ ಪತ್ರಿಕೆ ನೀಡಲು ನ. 14ರಂದು ತೆರಳಿದ್ದರು. ನಂತರ ಇವರು ನಾಪತ್ತೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ವಿಜಯನಗರ ಠಾಣೆಯ ಇನ್ಸ್ಪೆಕ್ಟರ್ ಬಾಲಕೃಷ್ಣ ತನಿಖೆ ಕೈಗೊಂಡಿದ್ದಾರೆ.