<p><strong>ಮೈಸೂರು: </strong>ಕಳೆದ 15 ದಿನಗಳಲ್ಲಿ 2ನೇ ಬಾರಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆಯಾಗಿರುವುದನ್ನು ವಿರೋಧಿಸಿ ಕಾಂಗ್ರೆಸ್ ಮಹಿಳಾ ಘಟಕದ ಪದಾಧಿಕಾರಿಗಳು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.</p>.<p>ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಸಿಲಿಂಡರ್ ಬೆಲೆಯನ್ನು 5 ರೂಪಾಯಿ ಹೆಚ್ಚಿಸಿದ್ದಕ್ಕೆ ಪ್ರತಿಭಟನೆ ನಡೆಸಿದ್ದ ಶೋಭಾ ಕರಂದ್ಲಾಜೆ ಎಲ್ಲಿ ಅಡಗಿ ಕುಳಿತಿದ್ದಾರೆ ಎಂದು ಪ್ರಶ್ನಿಸಿದ ಅಧ್ಯಕ್ಷೆ ಪುಷ್ಪಾ ಅಮರನಾಥ್, ‘ಅಚ್ಚೇ ದಿನ್ ಎಂದರೆ ಇದೇನಾ’ ಎಂದು ಪ್ರಶ್ನಿಸಿದರು.</p>.<p>ನಿತ್ಯವೂ ಮಹಿಳೆಯರು ಕಣ್ಣೀರು ಹಾಕುತ್ತಾ ಒಲೆ ಹೊತ್ತಿಸಬೇಕಿದೆ. ಅಡುಗೆ ಅನಿಲ ಖರೀದಿಸಲು ಕಾರ್ಮಿಕರು, ಬಡವರು ಪರದಾಡುತ್ತಿದ್ದಾರೆ ಎಂದು ಹರಿಯಾಯ್ದರು.</p>.<p>ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದಾರೆ. ಒಂದು ಹೊತ್ತು ಊಟಕ್ಕೂ ಪರದಾಡುವಂತಹ ಸ್ಥಿತಿ ಇದೆ. ರಾಷ್ಟ್ರಪತಿಗಳಾದರೂ ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿ ಕೇಂದ್ರ ಸರ್ಕಾರಕ್ಕೆ ಸರ್ಕಾರಕ್ಕೆ ಚಾಟಿ ಬೀಸಬೇಕು ಎಂದು ಒತ್ತಾಯಿಸಿದರು.</p>.<p>ಉಪಾಧ್ಯಕ್ಷೆ ಪುಷ್ಪವಲ್ಲಿ, ಮುಖಂಡರಾದ ರಾಣಿ, ಕಮಲಾ, ನಾಗರತ್ನ, ಕುಮುದಾ, ಮಂಜುಳಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಕಳೆದ 15 ದಿನಗಳಲ್ಲಿ 2ನೇ ಬಾರಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆಯಾಗಿರುವುದನ್ನು ವಿರೋಧಿಸಿ ಕಾಂಗ್ರೆಸ್ ಮಹಿಳಾ ಘಟಕದ ಪದಾಧಿಕಾರಿಗಳು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.</p>.<p>ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಸಿಲಿಂಡರ್ ಬೆಲೆಯನ್ನು 5 ರೂಪಾಯಿ ಹೆಚ್ಚಿಸಿದ್ದಕ್ಕೆ ಪ್ರತಿಭಟನೆ ನಡೆಸಿದ್ದ ಶೋಭಾ ಕರಂದ್ಲಾಜೆ ಎಲ್ಲಿ ಅಡಗಿ ಕುಳಿತಿದ್ದಾರೆ ಎಂದು ಪ್ರಶ್ನಿಸಿದ ಅಧ್ಯಕ್ಷೆ ಪುಷ್ಪಾ ಅಮರನಾಥ್, ‘ಅಚ್ಚೇ ದಿನ್ ಎಂದರೆ ಇದೇನಾ’ ಎಂದು ಪ್ರಶ್ನಿಸಿದರು.</p>.<p>ನಿತ್ಯವೂ ಮಹಿಳೆಯರು ಕಣ್ಣೀರು ಹಾಕುತ್ತಾ ಒಲೆ ಹೊತ್ತಿಸಬೇಕಿದೆ. ಅಡುಗೆ ಅನಿಲ ಖರೀದಿಸಲು ಕಾರ್ಮಿಕರು, ಬಡವರು ಪರದಾಡುತ್ತಿದ್ದಾರೆ ಎಂದು ಹರಿಯಾಯ್ದರು.</p>.<p>ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದಾರೆ. ಒಂದು ಹೊತ್ತು ಊಟಕ್ಕೂ ಪರದಾಡುವಂತಹ ಸ್ಥಿತಿ ಇದೆ. ರಾಷ್ಟ್ರಪತಿಗಳಾದರೂ ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿ ಕೇಂದ್ರ ಸರ್ಕಾರಕ್ಕೆ ಸರ್ಕಾರಕ್ಕೆ ಚಾಟಿ ಬೀಸಬೇಕು ಎಂದು ಒತ್ತಾಯಿಸಿದರು.</p>.<p>ಉಪಾಧ್ಯಕ್ಷೆ ಪುಷ್ಪವಲ್ಲಿ, ಮುಖಂಡರಾದ ರಾಣಿ, ಕಮಲಾ, ನಾಗರತ್ನ, ಕುಮುದಾ, ಮಂಜುಳಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>