<p><strong>ಮೈಸೂರು:</strong> ಬಿಟ್ಟು ಹೋಗುತ್ತೇನೆ ಎಂದಿದ್ದಕ್ಕೆ ತನ್ನ ಜತೆ ವಾಸಿಸುತ್ತಿದ್ದ ಪ್ರೀತಿಕುಮಾರಿ (25) ಎಂಬ ಮಹಿಳೆಯನ್ನು ಕಿರಣ್ (27) ಎಂಬಾತ ಮನಸೋಇಚ್ಛೆ ಮಚ್ಚಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬೆಳವಾಡಿಯಲ್ಲಿ ಗುರುವಾರ ಸಂಜೆ ನಡೆದಿದೆ.</p>.<p>ಎಚ್.ಡಿ.ಕೋಟೆ ತಾಲ್ಲೂಕಿನ ಕ್ಯಾತನಹಳ್ಳಿ ಗ್ರಾಮದ ಪ್ರೀತಿಕುಮಾರಿ ಪತಿಯನ್ನು ತೊರೆದಿದ್ದರು. ತನ್ನ ಮೂವರು ಮಕ್ಕಳೊಂದಿಗೆ ತನ್ನ ಅತ್ತೆಯ ಮಗ ಕಿರಣ್ ಜತೆ ಇಲ್ಲಿನ ಬೆಳವಾಡಿಯಲ್ಲಿ ಕಳೆದ 8 ತಿಂಗಳಿನಿಂದ ವಾಸವಿದ್ದರು. ಕೂಲಿ ಕೆಲಸ ಮಾಡಿಕೊಂಡಿದ್ದ ಕಿರಣ್ ಇವರಿಗೆ ವಿಪರೀತ ಕಿರುಕುಳ ಕೊಡುತ್ತಿದ್ದು, ಇಷ್ಟು ಹಿಂಸೆ ತಾಳಲಾಗುತ್ತಿಲ್ಲ. ನಿನ್ನನ್ನು ಬಿಟ್ಟು ಹೋಗುತ್ತೇನೆ ಎಂದು ಪ್ರೀತಿಕುಮಾರಿ ಹೇಳಿದ್ದಾರೆ. ಇದನ್ನು ಕೇಳಿ ಕೋಪಗೊಂಡ ಕಿರಣ್ ಮಚ್ಚಿನಿಂದ ತಲೆ, ಹೊಟ್ಟೆ ಹಾಗೂ ಕೈಗಳಿಗೆ ಹೊಡೆದಿದ್ದಾನೆ.</p>.<p>ರಕ್ತದ ಮಡುವಿನಲ್ಲಿ ಹೊರಳಾಡುತ್ತಿದ್ದ ಪ್ರೀತಿಕುಮಾರಿಯನ್ನು ಸಮೀಪದ ಆಸ್ಪತ್ರೆಗೆ ಅಕ್ಕಪಕ್ಕದವರು ದಾಖಲಿಸಿದರಾದರೂ, ಚಿಕಿತ್ಸೆಗೆ ಸ್ಪಂದಿಸದೇ ಇವರು ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ವಿಷಯ ತಿಳಿಯುತ್ತಿದ್ದಂತೆ ಕಾರ್ಯೋನ್ಮುಖರಾದ ವಿಜಯನಗರ ಠಾಣೆ ಪೊಲೀಸರು ಆರೋಪಿ ಕಿರಣ್ನನ್ನು ಬಂಧಿಸಿದ್ದಾರೆ. ಪ್ರಕರಣ ವಿಜಯನಗರ ಠಾಣೆಯಲ್ಲಿ ದಾಖಲಾಗಿದೆ.</p>.<p><strong>ಇಸ್ಕಾನ್ ದೇಗುಲದ ಎದುರು ಜೂಜಾಟ; 15 ಮಂದಿ ವಶಕ್ಕೆ</strong></p>.<p>ಇಲ್ಲಿನ ಚಿನ್ನಗಿರಿ ಕೊಪ್ಪಲುವಿನ ಇಸ್ಕಾನ್ ದೇಗುಲದ ಎದುರು ಜೂಜಾಟದಲ್ಲಿ ತೊಡಗಿದ್ದ 15 ಮಂದಿಯನ್ನು ನಗರ ಅಪರಾಧ ಪತ್ತೆ ವಿಭಾಗದ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಪಣವಾಗಿ ಇರಿಸಿದ್ದ ₹ 79 ಸಾವಿರ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಬಿಟ್ಟು ಹೋಗುತ್ತೇನೆ ಎಂದಿದ್ದಕ್ಕೆ ತನ್ನ ಜತೆ ವಾಸಿಸುತ್ತಿದ್ದ ಪ್ರೀತಿಕುಮಾರಿ (25) ಎಂಬ ಮಹಿಳೆಯನ್ನು ಕಿರಣ್ (27) ಎಂಬಾತ ಮನಸೋಇಚ್ಛೆ ಮಚ್ಚಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬೆಳವಾಡಿಯಲ್ಲಿ ಗುರುವಾರ ಸಂಜೆ ನಡೆದಿದೆ.</p>.<p>ಎಚ್.ಡಿ.ಕೋಟೆ ತಾಲ್ಲೂಕಿನ ಕ್ಯಾತನಹಳ್ಳಿ ಗ್ರಾಮದ ಪ್ರೀತಿಕುಮಾರಿ ಪತಿಯನ್ನು ತೊರೆದಿದ್ದರು. ತನ್ನ ಮೂವರು ಮಕ್ಕಳೊಂದಿಗೆ ತನ್ನ ಅತ್ತೆಯ ಮಗ ಕಿರಣ್ ಜತೆ ಇಲ್ಲಿನ ಬೆಳವಾಡಿಯಲ್ಲಿ ಕಳೆದ 8 ತಿಂಗಳಿನಿಂದ ವಾಸವಿದ್ದರು. ಕೂಲಿ ಕೆಲಸ ಮಾಡಿಕೊಂಡಿದ್ದ ಕಿರಣ್ ಇವರಿಗೆ ವಿಪರೀತ ಕಿರುಕುಳ ಕೊಡುತ್ತಿದ್ದು, ಇಷ್ಟು ಹಿಂಸೆ ತಾಳಲಾಗುತ್ತಿಲ್ಲ. ನಿನ್ನನ್ನು ಬಿಟ್ಟು ಹೋಗುತ್ತೇನೆ ಎಂದು ಪ್ರೀತಿಕುಮಾರಿ ಹೇಳಿದ್ದಾರೆ. ಇದನ್ನು ಕೇಳಿ ಕೋಪಗೊಂಡ ಕಿರಣ್ ಮಚ್ಚಿನಿಂದ ತಲೆ, ಹೊಟ್ಟೆ ಹಾಗೂ ಕೈಗಳಿಗೆ ಹೊಡೆದಿದ್ದಾನೆ.</p>.<p>ರಕ್ತದ ಮಡುವಿನಲ್ಲಿ ಹೊರಳಾಡುತ್ತಿದ್ದ ಪ್ರೀತಿಕುಮಾರಿಯನ್ನು ಸಮೀಪದ ಆಸ್ಪತ್ರೆಗೆ ಅಕ್ಕಪಕ್ಕದವರು ದಾಖಲಿಸಿದರಾದರೂ, ಚಿಕಿತ್ಸೆಗೆ ಸ್ಪಂದಿಸದೇ ಇವರು ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ವಿಷಯ ತಿಳಿಯುತ್ತಿದ್ದಂತೆ ಕಾರ್ಯೋನ್ಮುಖರಾದ ವಿಜಯನಗರ ಠಾಣೆ ಪೊಲೀಸರು ಆರೋಪಿ ಕಿರಣ್ನನ್ನು ಬಂಧಿಸಿದ್ದಾರೆ. ಪ್ರಕರಣ ವಿಜಯನಗರ ಠಾಣೆಯಲ್ಲಿ ದಾಖಲಾಗಿದೆ.</p>.<p><strong>ಇಸ್ಕಾನ್ ದೇಗುಲದ ಎದುರು ಜೂಜಾಟ; 15 ಮಂದಿ ವಶಕ್ಕೆ</strong></p>.<p>ಇಲ್ಲಿನ ಚಿನ್ನಗಿರಿ ಕೊಪ್ಪಲುವಿನ ಇಸ್ಕಾನ್ ದೇಗುಲದ ಎದುರು ಜೂಜಾಟದಲ್ಲಿ ತೊಡಗಿದ್ದ 15 ಮಂದಿಯನ್ನು ನಗರ ಅಪರಾಧ ಪತ್ತೆ ವಿಭಾಗದ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಪಣವಾಗಿ ಇರಿಸಿದ್ದ ₹ 79 ಸಾವಿರ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>