<p><strong>ಮೈಸೂರು</strong>:‘ಇನ್ನೂ ಎರಡು ವರ್ಷ ಜೆಡಿಎಸ್ ಪಕ್ಷ ತೊರೆಯುವ ಪ್ರಶ್ನೆಯೇ ಇಲ್ಲ. ಜೆಡಿಎಸ್ ಶಾಸಕನಾಗಿಯೇ ಕೆಲಸ ಮಾಡುತ್ತೇನೆ’ ಎಂದು ಶಾಸಕ ಜಿ.ಟಿ.ದೇವೇಗೌಡ ಸೋಮವಾರ ಇಲ್ಲಿ ತಿಳಿಸಿದರು.</p>.<p>‘ಮುಂದಿನ ವಿಧಾನಸಭೆ ಚುನಾವಣೆವೇಳೆಗೆಜೆಡಿಎಸ್, ಬಿಜೆಪಿ, ಕಾಂಗ್ರೆಸ್ ಯಾವಸ್ವರೂಪದಲ್ಲಿಇರಲಿವೆ ಎಂಬುದನ್ನು ನೋಡಿ ತೀರ್ಮಾನ ಕೈಗೊಳ್ಳುತ್ತೇನೆ. ಕ್ಷೇತ್ರದ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡುನಿರ್ಧಾರ ಮಾಡುತ್ತೇನೆ. ಈಗ ಯಾವುದೇ ತೀರ್ಮಾನ ಕೈಗೊಳ್ಳಲ್ಲ’ ಎಂದರು.</p>.<p>‘ರಾಜ್ಯ, ರಾಷ್ಟ್ರ ಮಟ್ಟದ ರಾಜ ಕೀಯದಲ್ಲಿ ರಾಜಕಾರಣ ಮಾಡಿ. ಆದರೆ, ದಯವಿಟ್ಟು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 3 ಪಕ್ಷಗಳು ರಾಜಕೀಯ ಮಾಡ ಬಾರದು.ಉತ್ತಮವಾಗಿ ಸೇವೆ ಸಲ್ಲಿಸುವವರನ್ನು ಜನರೇಆಯ್ಕೆ ಮಾಡಿ ಕೊಳ್ಳುತ್ತಾರೆ’ ಎಂದು ನುಡಿದರು.<br />‘ಬಿಜೆಪಿಯವರು ಪಂಚಾಯಿತಿಯಿಂದ ರಾಷ್ಟ್ರಮಟ್ಟದವರೆಗೆ ರಾಜಕಾರಣ ಎನ್ನುತ್ತಿದ್ದಾರೆ. ಕಾಂಗ್ರೆಸ್ನವರು ಈಗಾ ಗಲೇ ಪ್ರಚಾರ ಕೈಗೊಂಡಿರು ವುದಾಗಿ ಹೇಳಿದ್ದಾರೆ. ಜೆಡಿಎಸ್ನವರೂ ಇದೇ ರೀತಿ ಮಾಡುತ್ತಿದ್ದಾರೆ’ ಎಂದರು.</p>.<p>‘ಯಾರು ಪಿಂಚಣಿ ಮಾಡಿಸಿಕೊ ಡುತ್ತಾರೆ, ಯಾರು ಗ್ರಾಮದಲ್ಲಿ ವಿದ್ಯುತ್ ಬಲ್ಬು ಹಾಕಿಸಿಕೊಡುತ್ತಾರೆ, ಯಾರು ಸ್ವಚ್ಛತೆ ಕಾರ್ಯ ಕೈಗೊಳ್ಳುತ್ತಾರೆ, ಕಷ್ಟಕ್ಕೆ ಯಾರು ಸ್ಪಂದಿಸುತ್ತಾರೆ ಅಂಥವರನ್ನು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆ ಮಾಡಿಕೊಳ್ಳುತ್ತಾರೆ. ಈ ಚುನಾವಣೆಯಲ್ಲಿ ಯಾವುದೇ ಚಿಹ್ನೆ ಇರುವುದಿಲ್ಲ. ಹೀಗಾಗಿ, ಪಕ್ಷಾತೀತವಾಗಿ ನಡೆಯಬೇಕು. ದಯವಿಟ್ಟು ಪಕ್ಷವನ್ನು ಇಲ್ಲಿಗೆ ತರದೇ ಜನರ ನಿರ್ಧಾರಕ್ಕೆ ಬಿಡಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>:‘ಇನ್ನೂ ಎರಡು ವರ್ಷ ಜೆಡಿಎಸ್ ಪಕ್ಷ ತೊರೆಯುವ ಪ್ರಶ್ನೆಯೇ ಇಲ್ಲ. ಜೆಡಿಎಸ್ ಶಾಸಕನಾಗಿಯೇ ಕೆಲಸ ಮಾಡುತ್ತೇನೆ’ ಎಂದು ಶಾಸಕ ಜಿ.ಟಿ.ದೇವೇಗೌಡ ಸೋಮವಾರ ಇಲ್ಲಿ ತಿಳಿಸಿದರು.</p>.<p>‘ಮುಂದಿನ ವಿಧಾನಸಭೆ ಚುನಾವಣೆವೇಳೆಗೆಜೆಡಿಎಸ್, ಬಿಜೆಪಿ, ಕಾಂಗ್ರೆಸ್ ಯಾವಸ್ವರೂಪದಲ್ಲಿಇರಲಿವೆ ಎಂಬುದನ್ನು ನೋಡಿ ತೀರ್ಮಾನ ಕೈಗೊಳ್ಳುತ್ತೇನೆ. ಕ್ಷೇತ್ರದ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡುನಿರ್ಧಾರ ಮಾಡುತ್ತೇನೆ. ಈಗ ಯಾವುದೇ ತೀರ್ಮಾನ ಕೈಗೊಳ್ಳಲ್ಲ’ ಎಂದರು.</p>.<p>‘ರಾಜ್ಯ, ರಾಷ್ಟ್ರ ಮಟ್ಟದ ರಾಜ ಕೀಯದಲ್ಲಿ ರಾಜಕಾರಣ ಮಾಡಿ. ಆದರೆ, ದಯವಿಟ್ಟು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 3 ಪಕ್ಷಗಳು ರಾಜಕೀಯ ಮಾಡ ಬಾರದು.ಉತ್ತಮವಾಗಿ ಸೇವೆ ಸಲ್ಲಿಸುವವರನ್ನು ಜನರೇಆಯ್ಕೆ ಮಾಡಿ ಕೊಳ್ಳುತ್ತಾರೆ’ ಎಂದು ನುಡಿದರು.<br />‘ಬಿಜೆಪಿಯವರು ಪಂಚಾಯಿತಿಯಿಂದ ರಾಷ್ಟ್ರಮಟ್ಟದವರೆಗೆ ರಾಜಕಾರಣ ಎನ್ನುತ್ತಿದ್ದಾರೆ. ಕಾಂಗ್ರೆಸ್ನವರು ಈಗಾ ಗಲೇ ಪ್ರಚಾರ ಕೈಗೊಂಡಿರು ವುದಾಗಿ ಹೇಳಿದ್ದಾರೆ. ಜೆಡಿಎಸ್ನವರೂ ಇದೇ ರೀತಿ ಮಾಡುತ್ತಿದ್ದಾರೆ’ ಎಂದರು.</p>.<p>‘ಯಾರು ಪಿಂಚಣಿ ಮಾಡಿಸಿಕೊ ಡುತ್ತಾರೆ, ಯಾರು ಗ್ರಾಮದಲ್ಲಿ ವಿದ್ಯುತ್ ಬಲ್ಬು ಹಾಕಿಸಿಕೊಡುತ್ತಾರೆ, ಯಾರು ಸ್ವಚ್ಛತೆ ಕಾರ್ಯ ಕೈಗೊಳ್ಳುತ್ತಾರೆ, ಕಷ್ಟಕ್ಕೆ ಯಾರು ಸ್ಪಂದಿಸುತ್ತಾರೆ ಅಂಥವರನ್ನು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆ ಮಾಡಿಕೊಳ್ಳುತ್ತಾರೆ. ಈ ಚುನಾವಣೆಯಲ್ಲಿ ಯಾವುದೇ ಚಿಹ್ನೆ ಇರುವುದಿಲ್ಲ. ಹೀಗಾಗಿ, ಪಕ್ಷಾತೀತವಾಗಿ ನಡೆಯಬೇಕು. ದಯವಿಟ್ಟು ಪಕ್ಷವನ್ನು ಇಲ್ಲಿಗೆ ತರದೇ ಜನರ ನಿರ್ಧಾರಕ್ಕೆ ಬಿಡಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>