<p><strong>ನಂಜನಗೂಡು: </strong>ತಾಲ್ಲೂಕಿನ ಅಳಗಂಚಿ ಗ್ರಾಮದ ಬಳಿಯಿರುವ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು, ಭಾನುವಾರ ಆಯತಪ್ಪಿ ಕೆಳಗೆ ಬಿದ್ದು ಕಬ್ಬು ನುರಿಸುವ ಯಂತ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.</p>.<p>ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ಅಮೃತ್ ಕುಮಾರ್ (33) ಮೃತಪಟ್ಟ ವ್ಯಕ್ತಿ. ಕಬ್ಬು ನುರಿಸುವ ಯಂತ್ರದ ಚಾವಣಿಗೆ ಅವರು ವೆಲ್ಡಿಂಗ್ ಮಾಡುತ್ತಿದ್ದರು. ಡಿವೈಎಸ್ಪಿ ಪ್ರಭಾಕರರಾವ್ ಶಿಂಧೆ, ಸಿಪಿಐ ಲಕ್ಷ್ಮೀಕಾಂತ್ ಕೆ.ತಳವಾರ್, ಬಿಳಿಗೆರೆ ಠಾಣೆಯ ಎಸ್.ಐ ಆಕಾಶ್ ಕಾರ್ಖಾನೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ರಾತ್ರಿ 8 ಗಂಟೆಯಾದರೂ ದೂರು ದಾಖಲಾಗಿಲ್ಲ ಎಂಬುದು ಗೊತ್ತಾಗಿದೆ.</p>.<p class="Briefhead"><strong>ಗಾಯಗೊಂಡಿದ್ದ ಯುವಕ ಸಾವು</strong></p>.<p>ನಂಜನಗೂಡುತಾಲ್ಲೂಕಿನ ಕಳಲೆ ಗೇಟ್ ಸಮೀಪ ಶನಿವಾರ ರಾತ್ರಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಚಲುವರಾಜು (24) ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಮೃತಪಟ್ಟರು.</p>.<p>ಸಿಂಧುವಳ್ಳಿಪುರ ಬಳಿಯ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಚೆಲುವರಾಜು ಹಾಗೂ ಭರಣಿಸ್ವಾಮಿ ಶನಿವಾರ ರಾತ್ರಿ ಕೆಲಸ ಮುಗಿಸಿಕೊಂಡು ಗ್ರಾಮಕ್ಕೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದರು.</p>.<p>ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p class="Briefhead"><strong>ಬೈಕ್ಗಳ ಡಿಕ್ಕಿ: ಇಬ್ಬರ ಸಾವು</strong></p>.<p>ತಿ.ನರಸೀಪುರ-ನಂಜನಗೂಡು ಮುಖ್ಯ ರಸ್ತೆಯ ಹೆಳವರಹುಂಡಿ ಗ್ರಾಮದ ಬಳಿ ಭಾನುವಾರ ಎರಡು ಬೈಕ್ಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟು, ಒಬ್ಬರಿಗೆ ಗಾಯವಾಗಿದೆ.</p>.<p>ನಂಜನಗೂಡು ತಾಲ್ಲೂಕಿನ ಹಾರೋಪುರ ಗ್ರಾಮದ ನಾಗಶೆಟ್ಟಿ (31) ಸ್ಥಳದಲ್ಲೇ ಮೃತಪಟ್ಟರೆ, ಕಿರುಗುಂದ ಗ್ರಾಮದ ಮಹದೇವ (35) ಎಂಬಾತ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.</p>.<p>ಭಾನುವಾರ ಸಂಜೆ ಮಹದೇವ ತಿ.ನರಸೀಪುರದಿಂದ ನಂಜನಗೂಡು ಕಡೆಗೆ ಹೋಗುತ್ತಿದ್ದರು. ಮತ್ತೊಂದು ಬೈಕ್ನಲ್ಲಿನಾಗಶೆಟ್ಟಿ ಮತ್ತು ಮಂಟೇಶೆಟ್ಟಿ ಎಂಬುವವರು ತಿ.ನರಸೀಪುರಕ್ಕೆ ಬರುವಾಗಹೆಳವರಹುಂಡಿ ಸಮೀಪ ಅಪಘಾತವಾಗಿದೆ.</p>.<p>ಈ ಸಂಬಂಧ ತಿ.ನರಸೀಪುರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಎಂ.ಆರ್.ಲವ ಭೇಟಿ ನೀಡಿ ಪರಿಶೀಲಿಸಿದರು.</p>.<p class="Briefhead">ನಿವೃತ್ತ ಶಿಕ್ಷಕನಿಗೆ ಚಪ್ಪಲಿ ಏಟು</p>.<p>ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಗೆ ಸಂಬಂಧಿಸಿದಂತೆ ನಡೆದ ಮಾತಿನ ಚಕಮಕಿಯಲ್ಲಿ ನಿವೃತ್ತ ಶಿಕ್ಷಕರಿಗೆ ವ್ಯಕ್ತಿಯೊಬ್ಬ ಚಪ್ಪಲಿಯಿಂದ ಹೊಡೆದಿದ್ದಾನೆ.</p>.<p>ವಿಜಯ್ ಎಂಬುವರೇ ಚಪ್ಪಲಿಯಿಂದ ಹೊಡೆತ ತಿಂದವರು. ಬಿಳಿಕೆರೆಯ ರಮೇಶ್ ಎಂಬಾತನೇ ನಿವೃತ್ತ ಶಿಕ್ಷಕರಿಗೆ ಚಪ್ಪಲಿಯಿಂದ ಥಳಿಸಿದವ.</p>.<p>‘ನಿವೃತ್ತ ಶಿಕ್ಷಕ ವಿಜಯ್ ತಾವಿರುವ ಬಡಾವಣೆಯಲ್ಲಿ ಸ್ವಾತಂತ್ರ್ಯೋತ್ಸವಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಬಡಾವಣೆಯ ಅಭಿವೃದ್ಧಿಗೆ ಶ್ರಮಿಸಿದವ ನಾನು. ನನಗೆ ಹೇಳದೆ ಸ್ವಾತಂತ್ರ್ಯೋತ್ಸವ ಆಯೋಜಿಸಿದ್ದೀರಿ ಎಂದು ರಮೇಶ್ ಎಂಬಾತ ಚಪ್ಪಲಿಯಿಂದ ನಿವೃತ್ತ ಶಿಕ್ಷಕರಿಗೆ ಥಳಿಸಿದ್ದಾನೆ ಎಂಬ ದೂರು ದಾಖಲಾಗಿದೆ’ ಎಂದು ಬಿಳಿಕೆರೆ ಪೊಲೀಸರು ತಿಳಿಸಿದರು.</p>.<p>ಮಹಿಳೆ ಶವ ಪತ್ತೆ</p>.<p>ತಿ.ನರಸೀಪುರ: ಕಾವೇರಿ ನದಿಯಲ್ಲಿ ಭಾನುವಾರ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ.</p>.<p>ಮಹಿಳೆಗೆ ಸುಮಾರು 60 ವರ್ಷ ವಯಸ್ಸಾಗಿದ್ದು, ಹಸಿರು, ನೀಲಿ ಮಿಶ್ರಿತ ಸೀರೆ ಧರಿಸಿದ್ದಾರೆ. ವಾರಸುದಾರರು ಪಟ್ಟಣ ಪೊಲೀಸ್ ಠಾಣೆ (ದೂ: 08227 - 261227) ಸಂಪರ್ಕಿಸಲು<br />ಕೋರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಂಜನಗೂಡು: </strong>ತಾಲ್ಲೂಕಿನ ಅಳಗಂಚಿ ಗ್ರಾಮದ ಬಳಿಯಿರುವ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು, ಭಾನುವಾರ ಆಯತಪ್ಪಿ ಕೆಳಗೆ ಬಿದ್ದು ಕಬ್ಬು ನುರಿಸುವ ಯಂತ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.</p>.<p>ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ಅಮೃತ್ ಕುಮಾರ್ (33) ಮೃತಪಟ್ಟ ವ್ಯಕ್ತಿ. ಕಬ್ಬು ನುರಿಸುವ ಯಂತ್ರದ ಚಾವಣಿಗೆ ಅವರು ವೆಲ್ಡಿಂಗ್ ಮಾಡುತ್ತಿದ್ದರು. ಡಿವೈಎಸ್ಪಿ ಪ್ರಭಾಕರರಾವ್ ಶಿಂಧೆ, ಸಿಪಿಐ ಲಕ್ಷ್ಮೀಕಾಂತ್ ಕೆ.ತಳವಾರ್, ಬಿಳಿಗೆರೆ ಠಾಣೆಯ ಎಸ್.ಐ ಆಕಾಶ್ ಕಾರ್ಖಾನೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ರಾತ್ರಿ 8 ಗಂಟೆಯಾದರೂ ದೂರು ದಾಖಲಾಗಿಲ್ಲ ಎಂಬುದು ಗೊತ್ತಾಗಿದೆ.</p>.<p class="Briefhead"><strong>ಗಾಯಗೊಂಡಿದ್ದ ಯುವಕ ಸಾವು</strong></p>.<p>ನಂಜನಗೂಡುತಾಲ್ಲೂಕಿನ ಕಳಲೆ ಗೇಟ್ ಸಮೀಪ ಶನಿವಾರ ರಾತ್ರಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಚಲುವರಾಜು (24) ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಮೃತಪಟ್ಟರು.</p>.<p>ಸಿಂಧುವಳ್ಳಿಪುರ ಬಳಿಯ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಚೆಲುವರಾಜು ಹಾಗೂ ಭರಣಿಸ್ವಾಮಿ ಶನಿವಾರ ರಾತ್ರಿ ಕೆಲಸ ಮುಗಿಸಿಕೊಂಡು ಗ್ರಾಮಕ್ಕೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದರು.</p>.<p>ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p class="Briefhead"><strong>ಬೈಕ್ಗಳ ಡಿಕ್ಕಿ: ಇಬ್ಬರ ಸಾವು</strong></p>.<p>ತಿ.ನರಸೀಪುರ-ನಂಜನಗೂಡು ಮುಖ್ಯ ರಸ್ತೆಯ ಹೆಳವರಹುಂಡಿ ಗ್ರಾಮದ ಬಳಿ ಭಾನುವಾರ ಎರಡು ಬೈಕ್ಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟು, ಒಬ್ಬರಿಗೆ ಗಾಯವಾಗಿದೆ.</p>.<p>ನಂಜನಗೂಡು ತಾಲ್ಲೂಕಿನ ಹಾರೋಪುರ ಗ್ರಾಮದ ನಾಗಶೆಟ್ಟಿ (31) ಸ್ಥಳದಲ್ಲೇ ಮೃತಪಟ್ಟರೆ, ಕಿರುಗುಂದ ಗ್ರಾಮದ ಮಹದೇವ (35) ಎಂಬಾತ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.</p>.<p>ಭಾನುವಾರ ಸಂಜೆ ಮಹದೇವ ತಿ.ನರಸೀಪುರದಿಂದ ನಂಜನಗೂಡು ಕಡೆಗೆ ಹೋಗುತ್ತಿದ್ದರು. ಮತ್ತೊಂದು ಬೈಕ್ನಲ್ಲಿನಾಗಶೆಟ್ಟಿ ಮತ್ತು ಮಂಟೇಶೆಟ್ಟಿ ಎಂಬುವವರು ತಿ.ನರಸೀಪುರಕ್ಕೆ ಬರುವಾಗಹೆಳವರಹುಂಡಿ ಸಮೀಪ ಅಪಘಾತವಾಗಿದೆ.</p>.<p>ಈ ಸಂಬಂಧ ತಿ.ನರಸೀಪುರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಎಂ.ಆರ್.ಲವ ಭೇಟಿ ನೀಡಿ ಪರಿಶೀಲಿಸಿದರು.</p>.<p class="Briefhead">ನಿವೃತ್ತ ಶಿಕ್ಷಕನಿಗೆ ಚಪ್ಪಲಿ ಏಟು</p>.<p>ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಗೆ ಸಂಬಂಧಿಸಿದಂತೆ ನಡೆದ ಮಾತಿನ ಚಕಮಕಿಯಲ್ಲಿ ನಿವೃತ್ತ ಶಿಕ್ಷಕರಿಗೆ ವ್ಯಕ್ತಿಯೊಬ್ಬ ಚಪ್ಪಲಿಯಿಂದ ಹೊಡೆದಿದ್ದಾನೆ.</p>.<p>ವಿಜಯ್ ಎಂಬುವರೇ ಚಪ್ಪಲಿಯಿಂದ ಹೊಡೆತ ತಿಂದವರು. ಬಿಳಿಕೆರೆಯ ರಮೇಶ್ ಎಂಬಾತನೇ ನಿವೃತ್ತ ಶಿಕ್ಷಕರಿಗೆ ಚಪ್ಪಲಿಯಿಂದ ಥಳಿಸಿದವ.</p>.<p>‘ನಿವೃತ್ತ ಶಿಕ್ಷಕ ವಿಜಯ್ ತಾವಿರುವ ಬಡಾವಣೆಯಲ್ಲಿ ಸ್ವಾತಂತ್ರ್ಯೋತ್ಸವಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಬಡಾವಣೆಯ ಅಭಿವೃದ್ಧಿಗೆ ಶ್ರಮಿಸಿದವ ನಾನು. ನನಗೆ ಹೇಳದೆ ಸ್ವಾತಂತ್ರ್ಯೋತ್ಸವ ಆಯೋಜಿಸಿದ್ದೀರಿ ಎಂದು ರಮೇಶ್ ಎಂಬಾತ ಚಪ್ಪಲಿಯಿಂದ ನಿವೃತ್ತ ಶಿಕ್ಷಕರಿಗೆ ಥಳಿಸಿದ್ದಾನೆ ಎಂಬ ದೂರು ದಾಖಲಾಗಿದೆ’ ಎಂದು ಬಿಳಿಕೆರೆ ಪೊಲೀಸರು ತಿಳಿಸಿದರು.</p>.<p>ಮಹಿಳೆ ಶವ ಪತ್ತೆ</p>.<p>ತಿ.ನರಸೀಪುರ: ಕಾವೇರಿ ನದಿಯಲ್ಲಿ ಭಾನುವಾರ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ.</p>.<p>ಮಹಿಳೆಗೆ ಸುಮಾರು 60 ವರ್ಷ ವಯಸ್ಸಾಗಿದ್ದು, ಹಸಿರು, ನೀಲಿ ಮಿಶ್ರಿತ ಸೀರೆ ಧರಿಸಿದ್ದಾರೆ. ವಾರಸುದಾರರು ಪಟ್ಟಣ ಪೊಲೀಸ್ ಠಾಣೆ (ದೂ: 08227 - 261227) ಸಂಪರ್ಕಿಸಲು<br />ಕೋರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>