ಕಾರ್ಖಾನೆ ಆವರಣದಲ್ಲಿ ಹೆಚ್ಚುವರಿ ಮದ್ಯಸಾರ ಘಟಕ ಕಟ್ಟಡ ನಿರ್ಮಾಣಕ್ಕಾಗಿ, ಬಿಹಾರ ಹಾಗೂ ಉತ್ತರಪ್ರದೇಶದಿಂದ ಕೂಲಿ ಕಾರ್ಮಿಕರನ್ನು ಗುತ್ತಿಗೆದಾರರು ಕರೆತಂದಿದ್ದರು. ಕಾರ್ಮಿಕರಿಗೆ ಕಾರ್ಖಾನೆ ಆವರಣದಲ್ಲಿಯೇ ತಾತ್ಕಾಲಿಕ ಶೆಡ್ಗಳ ಮೂಲಕ ವಸತಿ ಸೌಕರ್ಯ ಕಲ್ಪಿಸಿಕೊಡಲಾಗಿತ್ತು. ಆದರೆ, ಇದೀಗ ಕೊರೊನಾ ಸಂಕಷ್ಟದಿಂದಾಗಿ ಬಹುತೇಕ ಎಲ್ಲ ಕಾರ್ಮಿಕರೂ ವಾಪಸ್ ಊರಿಗೆ ಮರಳಲು ಇಚ್ಛಿಸಿದ್ದಾರೆ. ಸಾರಿಗೆ ಸೌಲಭ್ಯವಿಲ್ಲದಿರುವುದರಿಂದ ತೊಡಕಾಗುತ್ತಿದೆ. ಹೀಗಾಗಿ, ತಾಲ್ಲೂಕು ಆಡಳಿತದ ಅಧಿಕಾರಿಗಳು ಕಾರ್ಮಿಕರು ವಾಪಸ್ ಊರಿಗೆ ತೆರಳಲು ಅಗತ್ಯ ನೆರವು ನೀಡಬೇಕು ಎಂದು ಒತ್ತಾಯಿಸಿದರು.