<p><strong>ಮೈಸೂರು</strong>: ಕಟ್ಟಡ ಮತ್ತು ಇತರೆ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘದ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಲಾಕ್ಡೌನ್ ನಂತರ ನೋಂದಾಯಿಸಿಕೊಂಡ ಕಾರ್ಮಿಕರಿಗೂ ‘ಕೋವಿಡ್–19 ಸಹಾಯಧನ’ ವಿತರಿಸಬೇಕು, ಕೋವಿಡ್ ಕಾಯಿಲೆಯಿಂದ ಬಳಲುತ್ತಿರುವ ಕಾರ್ಮಿಕರ ಕುಟುಂಬದ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸಬೇಕು, ರಾಜ್ಯದ ಎಲ್ಲ ಸಾರಿಗೆ ನಿಗಮಗಳಲ್ಲಿಯೂ ಉಚಿತ ಬಸ್ ಪಾಸ್ ನೀಡಬೇಕು ಎಂದು ಅವರು ಒತ್ತಾಯಿಸಿದರು.</p>.<p>ಕಾರ್ಮಿಕ ಚಿಕಿತ್ಸಾ ಭಾಗ್ಯ ಯೋಜನೆಯನ್ನು ಕಟ್ಟಡ ಕಾರ್ಮಿಕರ ಕುಟುಂಬದ ಸದಸ್ಯರಿಗೂ ವಿಸ್ತರಿಸಬೇಕು, ಗೃಹಭಾಗ್ಯ ಯೋಜನೆಗೆ ನೀಡುವ ಸಹಾಯಧನ, ಸಾಲಕ್ಕೆ ನಿಗದಿಪಡಿಸಿರುವ ಷರತ್ತುಗಳನ್ನು ಅರ್ಹ ಎಲ್ಲ ಕಾರ್ಮಿಕರಿಗೂ ಸಿಗುವಂತೆ ಸರಳೀಕರಣ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಎಐಯುಟಿಯುಸಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ ಮೇಟಿ, ಜಂಟಿ ಜಿಲ್ಲಾ ಕಾರ್ಯದರ್ಶಿ ಮುದ್ದುಕೃಷ್ಣ, ಮುಖಂಡರಾದ ಹುಲ್ಲಹಳ್ಳಿ ಸಿದ್ಧಯ್ಯ, ಶಿರಮಳ್ಳಿ ಮಾದಪ್ಪ, ಹೆಬ್ಬಾಳು ಮಂಜುನಾಥ, ಬಾಳೆಲೆ ಸೂರಿ, ಬೋಗಾದಿ ಮಂಜು, ಅರಬ್ ಜಾನ್ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಕಟ್ಟಡ ಮತ್ತು ಇತರೆ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘದ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಲಾಕ್ಡೌನ್ ನಂತರ ನೋಂದಾಯಿಸಿಕೊಂಡ ಕಾರ್ಮಿಕರಿಗೂ ‘ಕೋವಿಡ್–19 ಸಹಾಯಧನ’ ವಿತರಿಸಬೇಕು, ಕೋವಿಡ್ ಕಾಯಿಲೆಯಿಂದ ಬಳಲುತ್ತಿರುವ ಕಾರ್ಮಿಕರ ಕುಟುಂಬದ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸಬೇಕು, ರಾಜ್ಯದ ಎಲ್ಲ ಸಾರಿಗೆ ನಿಗಮಗಳಲ್ಲಿಯೂ ಉಚಿತ ಬಸ್ ಪಾಸ್ ನೀಡಬೇಕು ಎಂದು ಅವರು ಒತ್ತಾಯಿಸಿದರು.</p>.<p>ಕಾರ್ಮಿಕ ಚಿಕಿತ್ಸಾ ಭಾಗ್ಯ ಯೋಜನೆಯನ್ನು ಕಟ್ಟಡ ಕಾರ್ಮಿಕರ ಕುಟುಂಬದ ಸದಸ್ಯರಿಗೂ ವಿಸ್ತರಿಸಬೇಕು, ಗೃಹಭಾಗ್ಯ ಯೋಜನೆಗೆ ನೀಡುವ ಸಹಾಯಧನ, ಸಾಲಕ್ಕೆ ನಿಗದಿಪಡಿಸಿರುವ ಷರತ್ತುಗಳನ್ನು ಅರ್ಹ ಎಲ್ಲ ಕಾರ್ಮಿಕರಿಗೂ ಸಿಗುವಂತೆ ಸರಳೀಕರಣ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಎಐಯುಟಿಯುಸಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ ಮೇಟಿ, ಜಂಟಿ ಜಿಲ್ಲಾ ಕಾರ್ಯದರ್ಶಿ ಮುದ್ದುಕೃಷ್ಣ, ಮುಖಂಡರಾದ ಹುಲ್ಲಹಳ್ಳಿ ಸಿದ್ಧಯ್ಯ, ಶಿರಮಳ್ಳಿ ಮಾದಪ್ಪ, ಹೆಬ್ಬಾಳು ಮಂಜುನಾಥ, ಬಾಳೆಲೆ ಸೂರಿ, ಬೋಗಾದಿ ಮಂಜು, ಅರಬ್ ಜಾನ್ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>