ಮೈಸೂರು: ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯ

ಮೈಸೂರು: ಕಟ್ಟಡ ಮತ್ತು ಇತರೆ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘದ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಿದರು.
ಲಾಕ್ಡೌನ್ ನಂತರ ನೋಂದಾಯಿಸಿಕೊಂಡ ಕಾರ್ಮಿಕರಿಗೂ ‘ಕೋವಿಡ್–19 ಸಹಾಯಧನ’ ವಿತರಿಸಬೇಕು, ಕೋವಿಡ್ ಕಾಯಿಲೆಯಿಂದ ಬಳಲುತ್ತಿರುವ ಕಾರ್ಮಿಕರ ಕುಟುಂಬದ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸಬೇಕು, ರಾಜ್ಯದ ಎಲ್ಲ ಸಾರಿಗೆ ನಿಗಮಗಳಲ್ಲಿಯೂ ಉಚಿತ ಬಸ್ ಪಾಸ್ ನೀಡಬೇಕು ಎಂದು ಅವರು ಒತ್ತಾಯಿಸಿದರು.
ಕಾರ್ಮಿಕ ಚಿಕಿತ್ಸಾ ಭಾಗ್ಯ ಯೋಜನೆಯನ್ನು ಕಟ್ಟಡ ಕಾರ್ಮಿಕರ ಕುಟುಂಬದ ಸದಸ್ಯರಿಗೂ ವಿಸ್ತರಿಸಬೇಕು, ಗೃಹಭಾಗ್ಯ ಯೋಜನೆಗೆ ನೀಡುವ ಸಹಾಯಧನ, ಸಾಲಕ್ಕೆ ನಿಗದಿಪಡಿಸಿರುವ ಷರತ್ತುಗಳನ್ನು ಅರ್ಹ ಎಲ್ಲ ಕಾರ್ಮಿಕರಿಗೂ ಸಿಗುವಂತೆ ಸರಳೀಕರಣ ಮಾಡಬೇಕು ಎಂದು ಆಗ್ರಹಿಸಿದರು.
ಎಐಯುಟಿಯುಸಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ ಮೇಟಿ, ಜಂಟಿ ಜಿಲ್ಲಾ ಕಾರ್ಯದರ್ಶಿ ಮುದ್ದುಕೃಷ್ಣ, ಮುಖಂಡರಾದ ಹುಲ್ಲಹಳ್ಳಿ ಸಿದ್ಧಯ್ಯ, ಶಿರಮಳ್ಳಿ ಮಾದಪ್ಪ, ಹೆಬ್ಬಾಳು ಮಂಜುನಾಥ, ಬಾಳೆಲೆ ಸೂರಿ, ಬೋಗಾದಿ ಮಂಜು, ಅರಬ್ ಜಾನ್ ಹಾಗೂ ಇತರರು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.