<p><strong>ಮೈಸೂರು</strong>: ಇಲ್ಲಿನ ಅರಮನೆಗೆ ಸೋಮವಾರ ಬಂದ ಪ್ರವಾಸಿಗರಿಗೆ ಅಚ್ಚರಿ ಕಾದಿತ್ತು. ಬಾಗಿಲಿನಲ್ಲೇ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೂ ನೀಡುವ ಮೂಲಕ ಬರಮಾಡಿಕೊಂಡರು. ಅಪರೂಪದ ಈ ಕ್ಷಣವನ್ನು ಹಲವು ಪ್ರವಾಸಿಗರು ಸಂಭ್ರಮಿಸಿದರು.</p>.<p>ಮೈಸೂರು ಟ್ರಾವೆಲ್ ಅಸೋಸಿಯೇಷನ್, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಹಾಗೂ ಹೋಟೆಲ್ ಮಾಲೀಕರ ಸಂಘವು ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಅರಮನೆಯ ವರಹಾ ದ್ವಾರದಲ್ಲಿ ಈ ಕಾರ್ಯಕ್ರಮ ಏರ್ಪಡಿಸಿತ್ತು. ಅರಮನೆಗೆ ಬಂದವರಿಗೆ ಹೂ ನೀಡಿ ಸ್ವಾಗತಿಸಿದ್ದು ಮಾತ್ರವಲ್ಲ, ಸಿಹಿಯನ್ನೂ ಹಂಚಲಾಯಿತು.</p>.<p>ಈ ವೇಳೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ‘ಸಿಂಹಾಸನವನ್ನು ಸಾರ್ವಜನಿಕ ವೀಕ್ಷಣೆಗೆ ಮುಕ್ತಗೊಳಿಸಬೇಕೋ ಬೇಡವೊ, ಅರಮನೆಯಲ್ಲಿ ಜಟ್ಟಿ ಕಾಳಗ ನಡೆಸಬೇಕೋ ಬೇಡವೊ ಎಂಬ ವಿಚಾರವನ್ನು ಅರಮನೆ ಕಚೇರಿ ಮಾಹಿತಿ ನೀಡಲಿದೆ’ ಎಂದರು.</p>.<p>ಹೋಟೆಲ್ ಮಾಲೀಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸಿ.ನಾರಾಯಣಗೌಡ ಪ್ರತಿಕ್ರಿಯಿಸಿ, ‘ಕೆಲದಿನಗಳಿಂದ ಪ್ರವಾಸಿಗರು ಸ್ವಲ್ಪ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಹೋಟೆಲ್ ಉದ್ಯಮ ಚೇತರಿಕೆಗೆ ಇನ್ನಷ್ಟು ಕಾಲ ಬೇಕು’ ಎಂದು ಹೇಳಿದರು.</p>.<p>ಮೈಸೂರು ಟ್ರಾವೆಲ್ ಅಸೋಸಿಯೇಷನ್ ಅಧ್ಯಕ್ಷ ಜಯಕುಮಾರ್ ಮಾತನಾಡಿ, ‘ಬಹಳಷ್ಟು ಮಂದಿ ಪ್ರವಾಸೋದ್ಯಮವನ್ನೇ ನಂಬಿಕೊಂಡಿದ್ದಾರೆ. ಹೀಗಾಗಿ, ಜಂಬೂಸವಾರಿ ಬನ್ನಿಮಂಟಪದವರೆಗೂ ಹೋಗಬೇಕಿತ್ತು’ ಎಂದು ಅಭಿಪ್ರಾಯಪಟ್ಟರು.</p>.<p>ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ರಾಘವೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಇಲ್ಲಿನ ಅರಮನೆಗೆ ಸೋಮವಾರ ಬಂದ ಪ್ರವಾಸಿಗರಿಗೆ ಅಚ್ಚರಿ ಕಾದಿತ್ತು. ಬಾಗಿಲಿನಲ್ಲೇ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೂ ನೀಡುವ ಮೂಲಕ ಬರಮಾಡಿಕೊಂಡರು. ಅಪರೂಪದ ಈ ಕ್ಷಣವನ್ನು ಹಲವು ಪ್ರವಾಸಿಗರು ಸಂಭ್ರಮಿಸಿದರು.</p>.<p>ಮೈಸೂರು ಟ್ರಾವೆಲ್ ಅಸೋಸಿಯೇಷನ್, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಹಾಗೂ ಹೋಟೆಲ್ ಮಾಲೀಕರ ಸಂಘವು ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಅರಮನೆಯ ವರಹಾ ದ್ವಾರದಲ್ಲಿ ಈ ಕಾರ್ಯಕ್ರಮ ಏರ್ಪಡಿಸಿತ್ತು. ಅರಮನೆಗೆ ಬಂದವರಿಗೆ ಹೂ ನೀಡಿ ಸ್ವಾಗತಿಸಿದ್ದು ಮಾತ್ರವಲ್ಲ, ಸಿಹಿಯನ್ನೂ ಹಂಚಲಾಯಿತು.</p>.<p>ಈ ವೇಳೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ‘ಸಿಂಹಾಸನವನ್ನು ಸಾರ್ವಜನಿಕ ವೀಕ್ಷಣೆಗೆ ಮುಕ್ತಗೊಳಿಸಬೇಕೋ ಬೇಡವೊ, ಅರಮನೆಯಲ್ಲಿ ಜಟ್ಟಿ ಕಾಳಗ ನಡೆಸಬೇಕೋ ಬೇಡವೊ ಎಂಬ ವಿಚಾರವನ್ನು ಅರಮನೆ ಕಚೇರಿ ಮಾಹಿತಿ ನೀಡಲಿದೆ’ ಎಂದರು.</p>.<p>ಹೋಟೆಲ್ ಮಾಲೀಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸಿ.ನಾರಾಯಣಗೌಡ ಪ್ರತಿಕ್ರಿಯಿಸಿ, ‘ಕೆಲದಿನಗಳಿಂದ ಪ್ರವಾಸಿಗರು ಸ್ವಲ್ಪ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಹೋಟೆಲ್ ಉದ್ಯಮ ಚೇತರಿಕೆಗೆ ಇನ್ನಷ್ಟು ಕಾಲ ಬೇಕು’ ಎಂದು ಹೇಳಿದರು.</p>.<p>ಮೈಸೂರು ಟ್ರಾವೆಲ್ ಅಸೋಸಿಯೇಷನ್ ಅಧ್ಯಕ್ಷ ಜಯಕುಮಾರ್ ಮಾತನಾಡಿ, ‘ಬಹಳಷ್ಟು ಮಂದಿ ಪ್ರವಾಸೋದ್ಯಮವನ್ನೇ ನಂಬಿಕೊಂಡಿದ್ದಾರೆ. ಹೀಗಾಗಿ, ಜಂಬೂಸವಾರಿ ಬನ್ನಿಮಂಟಪದವರೆಗೂ ಹೋಗಬೇಕಿತ್ತು’ ಎಂದು ಅಭಿಪ್ರಾಯಪಟ್ಟರು.</p>.<p>ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ರಾಘವೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>