ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತಕುಮಾರ್ ಮಾತನಾಡಿ, ‘ನಾಲ್ವಡಿ ಜಯಂತಿ ದಿನವನ್ನು ಉತ್ತಮ ಆಡಳಿತ ದಿನವನ್ನಾಗಿ ಆಚರಿಸಬೇಕು ಎಂಬ ಸಲಹೆಯನ್ನು ಯದುವೀರ ಅವರು ಮುಂದಿಟ್ಟಿದ್ದಾರೆ. ಆ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತದೆ. ಆದರೆ ಮೈಸೂರು ವಿ.ವಿ ವತಿಯಿಂದ ಮುಂದಿನ ವರ್ಷದಿಂದ ನಾಲ್ವಡಿ ಜಯಂತಿಯನ್ನು ಉತ್ತಮ ಆಡಳಿತ ದಿನವನ್ನಾಗಿ ಆಚರಿಸಲಾಗುವುದು’ ಎಂದು ಪ್ರಕಟಿಸಿದರು.