<p><strong>ಮೈಸೂರು:</strong> ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತಿ ದಿನವನ್ನು ‘ಉತ್ತಮ ಆಡಳಿತ ದಿನ’ವನ್ನಾಗಿ ಆಚರಿಸಲು ಸರ್ಕಾರ ಕ್ರಮವಹಿಸಬೇಕು ಎಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದರು.</p>.<p>ಅನ್ವೇಷನಾ ಸೇವಾ ಟ್ರಸ್ಟ್ ವತಿಯಿಂದ ಗುರುವಾರ ಆಯೋಜಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಸರ್.ಎಂ.ವಿಶ್ವೇಶ್ವರಯ್ಯ ಅವರ ಜಯಂತಿ ದಿನ ನಾವು ದೇಶದಲ್ಲಿ ಎಂಜಿನಿಯರುಗಳ ದಿನ ಆಚರಿಸುತ್ತೇವೆ. ಅದೇ ರೀತಿ ನಾಲ್ವಡಿ ಅವರ ಜಯಂತಿ ಸಮಯದಲ್ಲಿ ‘ಉತ್ತಮ ಆಡಳಿತ ದಿನ’ ಆಚರಿಸಬೇಕು’ ಎಂದು ಅಭಿಪ್ರಾಯಪಟ್ಟರು.</p>.<p>ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತಕುಮಾರ್ ಮಾತನಾಡಿ, ‘ನಾಲ್ವಡಿ ಜಯಂತಿ ದಿನವನ್ನು ಉತ್ತಮ ಆಡಳಿತ ದಿನವನ್ನಾಗಿ ಆಚರಿಸಬೇಕು ಎಂಬ ಸಲಹೆಯನ್ನು ಯದುವೀರ ಅವರು ಮುಂದಿಟ್ಟಿದ್ದಾರೆ. ಆ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತದೆ. ಆದರೆ ಮೈಸೂರು ವಿ.ವಿ ವತಿಯಿಂದ ಮುಂದಿನ ವರ್ಷದಿಂದ ನಾಲ್ವಡಿ ಜಯಂತಿಯನ್ನು ಉತ್ತಮ ಆಡಳಿತ ದಿನವನ್ನಾಗಿ ಆಚರಿಸಲಾಗುವುದು’ ಎಂದು ಪ್ರಕಟಿಸಿದರು.</p>.<p>ಅನ್ವೇಷಣಾ ಸೇವಾ ಟ್ರಸ್ಟ್ ಅಧ್ಯಕ್ಷ ಡಾ.ಎಂ.ಜಿ.ಆರ್.ಅರಸ್, ವೈಜ್ಞಾನಿಕ ವಾಸ್ತು ತಜ್ಞ ಡಿ.ಸತೀಶ್ ಚೌಹಾಣ್ ಗುರೂಜಿ, ಮಹಾಲಕ್ಷ್ಮಿ ಸ್ವೀಟ್ಸ್ ಮಾಲೀಕ ಶಿವಕುಮಾರ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತಿ ದಿನವನ್ನು ‘ಉತ್ತಮ ಆಡಳಿತ ದಿನ’ವನ್ನಾಗಿ ಆಚರಿಸಲು ಸರ್ಕಾರ ಕ್ರಮವಹಿಸಬೇಕು ಎಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದರು.</p>.<p>ಅನ್ವೇಷನಾ ಸೇವಾ ಟ್ರಸ್ಟ್ ವತಿಯಿಂದ ಗುರುವಾರ ಆಯೋಜಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಸರ್.ಎಂ.ವಿಶ್ವೇಶ್ವರಯ್ಯ ಅವರ ಜಯಂತಿ ದಿನ ನಾವು ದೇಶದಲ್ಲಿ ಎಂಜಿನಿಯರುಗಳ ದಿನ ಆಚರಿಸುತ್ತೇವೆ. ಅದೇ ರೀತಿ ನಾಲ್ವಡಿ ಅವರ ಜಯಂತಿ ಸಮಯದಲ್ಲಿ ‘ಉತ್ತಮ ಆಡಳಿತ ದಿನ’ ಆಚರಿಸಬೇಕು’ ಎಂದು ಅಭಿಪ್ರಾಯಪಟ್ಟರು.</p>.<p>ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತಕುಮಾರ್ ಮಾತನಾಡಿ, ‘ನಾಲ್ವಡಿ ಜಯಂತಿ ದಿನವನ್ನು ಉತ್ತಮ ಆಡಳಿತ ದಿನವನ್ನಾಗಿ ಆಚರಿಸಬೇಕು ಎಂಬ ಸಲಹೆಯನ್ನು ಯದುವೀರ ಅವರು ಮುಂದಿಟ್ಟಿದ್ದಾರೆ. ಆ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತದೆ. ಆದರೆ ಮೈಸೂರು ವಿ.ವಿ ವತಿಯಿಂದ ಮುಂದಿನ ವರ್ಷದಿಂದ ನಾಲ್ವಡಿ ಜಯಂತಿಯನ್ನು ಉತ್ತಮ ಆಡಳಿತ ದಿನವನ್ನಾಗಿ ಆಚರಿಸಲಾಗುವುದು’ ಎಂದು ಪ್ರಕಟಿಸಿದರು.</p>.<p>ಅನ್ವೇಷಣಾ ಸೇವಾ ಟ್ರಸ್ಟ್ ಅಧ್ಯಕ್ಷ ಡಾ.ಎಂ.ಜಿ.ಆರ್.ಅರಸ್, ವೈಜ್ಞಾನಿಕ ವಾಸ್ತು ತಜ್ಞ ಡಿ.ಸತೀಶ್ ಚೌಹಾಣ್ ಗುರೂಜಿ, ಮಹಾಲಕ್ಷ್ಮಿ ಸ್ವೀಟ್ಸ್ ಮಾಲೀಕ ಶಿವಕುಮಾರ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>