<p><strong>ಮೈಸೂರು: </strong>ಇಲ್ಲಿನ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ಸೋಮವಾರ ಯಶೋಧರಮ್ಮ ದಾಸಪ್ಪ ಅವರ ನೆನಪುಗಳು ರಿಂಗಣಿಸಿದವು.</p>.<p>ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಎಚ್.ಸಿ.ದಾಸಪ್ಪ ಸಾರ್ವಜನಿಕ ವಿಚಾರ ಸಂಸ್ಥೆ, ಡಾ.ಕೆ.ಎಸ್.ಗೌಡಯ್ಯ ಪ್ರತಿಷ್ಠಾನದ ವತಿಯಿಂದ ‘ಮರೆಯಲಾಗದ ಮಹನೀಯರು’ ಸರಣಿಯಲ್ಲಿ ನಡೆದ ‘ಯಶೋಧರಮ್ಮ ದಾಸಪ್ಪ ಒಂದು ನೆನಪು ಕಾರ್ಯಕ್ರಮ’ದಲ್ಲಿ ಪ್ರೇಕ್ಷಕರಿಂದ ಸಭಾಂಗಣ ತುಂಬಿ ಹೋಗಿತ್ತು. ಸಭಾಂಗಣದ ಹೊರಗೆ ನಿಂತು ಕಾರ್ಯಕ್ರಮ ಆಲಿಸಿದರು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ಯಶೋಧರಮ್ಮ ಅವರು ಶಿವಪುರದ ಧ್ವಜ ಸತ್ಯಾಗ್ರಹ ಸೌಧದಲ್ಲಿ ರಾಷ್ಟ್ರಧ್ವಜವನ್ನು ಸಂರಕ್ಷಿಸಿದ ಪ್ರಕರಣವನ್ನು ವಿವರಿಸುವ ಮೂಲಕ ಸಭಿಕರನ್ನು ಸೆಳೆದರು.</p>.<p>ಇದಕ್ಕೂ ಮುನ್ನ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ ಅವರು, ಯಶೋಧರಮ್ಮ ಅವರ ಜೀವನ ಸಾಧನೆಗಳನ್ನು ಕುರಿತು ಮಾತನಾಡಿದರು. ಚಿಂತಕರಾದ ಲೀಲಾ ಅಪ್ಪಾಜಿ ಅವರು ಪ್ರಧಾನ ಭಾಷಣ ಮಾಡಿದರು.</p>.<p>ಪಾನನಿರೋಧಕ್ಕೆ ಆಗ್ರಹಿಸಿ ಯಶೋಧರಮ್ಮ ಅವರು ಸಚಿವ ಪದವಿಗೆ ರಾಜೀನಾಮೆ ನೀಡಿದ ಪ್ರಸಂಗ, ಅವರು ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ತಮ್ಮ ಸ್ವಂತ ಮನೆಯನ್ನೇ ಬಿಟ್ಟುಕೊಟ್ಟ ವಿಚಾರಗಳನ್ನು ಕುರ್ಚಿಯಿಂದ ಕದಲದೇ ಪ್ರೇಕ್ಷಕರು ಆಲಿಸಿದರು.</p>.<p>ಪ್ರೊ.ಎಂ.ಕೃಷ್ಣೇಗೌಡ ಮಾತನಾಡಿ, ‘ಮಹಾತ್ಮ ಗಾಂಧೀಜಿ ರಾಷ್ಟ್ರಪಿತರೋ ಅಥವಾ ರಾಷ್ಟ್ರದ್ರೋಹಿಯೋ ಎಂಬ ಚರ್ಚೆ ಸಾಮಾಜಿಕ ಮಾಧ್ಯಮಗಳಲ್ಲಿ ನಡೆಯುತ್ತಿರುವ ಅನೈತಿಕ ರಾಜಕಾರಣದ ಫಲ’ ಎಂದು ಕಿಡಿಕಾರಿದರು.</p>.<p>‘ವೋಟ್ ಬ್ಯಾಂಕ್ ರಾಜಕಾರಣಕ್ಕೆ ಎಲ್ಲ ಪಕ್ಷಗಳೂ ನೀಚ ರಾಜಕಾರಣ ಮಾಡಿದ್ದರ ಫಲವೇ ಇದು’ ಎಂದು ವಿಶ್ಲೇಷಿಸಿದ ಅವರು, ರಾಜಕಾರಣಿಗಳು ಲಜ್ಜೆಗೆಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಎಡ ಪಂಥೀಯ ಹಾಗೂ ಬಲ ಪಂಥೀಯ ಎನ್ನುವ ರೋಗ ರಾಜಕಾರಣಿಗಳನ್ನು ಮಾತ್ರವಲ್ಲ ಸಾಹಿತಿಗಳನ್ನೂ ಬಿಟ್ಟಿಲ್ಲ. ಒಂದೊಂದು ಪಕ್ಷಕ್ಕೆ ಸೇರಿದವರ ಹಾಗೆ ಸಾಹಿತಿಗಳು ಮಾತನಾಡುತ್ತಿರುವುದು ಸರಿಯಲ್ಲ ಎಂದು ಟೀಕಿಸಿದರು.</p>.<p>ನಾಗರತ್ಮಮ್ಮ ಜವರೇಗೌಡ, ಮಾಣಿಕ್ಯ ಶಾಮಣ್ಣಶೆಟ್ಟಿ, ಪ್ರೇಮಾವತಿ ಆರ್.ಜಿ.ಮಧುರವೇಲು ಅವರನ್ನು ಸನ್ಮನಿಸಲಾಯಿತು.</p>.<p>ಎಚ್.ಸಿ.ದಾಸಪ್ಪ ಸಾರ್ವಜನಿಕ ವಿಚಾರ ಸಂಸ್ಥೆಯ ಅಧ್ಯಕ್ಷ ವಾಸು, ಯಶೋಧರಪ್ಪ ದಾಸಪ್ಪ ಅವರ ಕುಟಂಬಸ್ಥರಾದ ಸರೋಜಮ್ಮ ತುಳಸಿದಾಸಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಇಲ್ಲಿನ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ಸೋಮವಾರ ಯಶೋಧರಮ್ಮ ದಾಸಪ್ಪ ಅವರ ನೆನಪುಗಳು ರಿಂಗಣಿಸಿದವು.</p>.<p>ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಎಚ್.ಸಿ.ದಾಸಪ್ಪ ಸಾರ್ವಜನಿಕ ವಿಚಾರ ಸಂಸ್ಥೆ, ಡಾ.ಕೆ.ಎಸ್.ಗೌಡಯ್ಯ ಪ್ರತಿಷ್ಠಾನದ ವತಿಯಿಂದ ‘ಮರೆಯಲಾಗದ ಮಹನೀಯರು’ ಸರಣಿಯಲ್ಲಿ ನಡೆದ ‘ಯಶೋಧರಮ್ಮ ದಾಸಪ್ಪ ಒಂದು ನೆನಪು ಕಾರ್ಯಕ್ರಮ’ದಲ್ಲಿ ಪ್ರೇಕ್ಷಕರಿಂದ ಸಭಾಂಗಣ ತುಂಬಿ ಹೋಗಿತ್ತು. ಸಭಾಂಗಣದ ಹೊರಗೆ ನಿಂತು ಕಾರ್ಯಕ್ರಮ ಆಲಿಸಿದರು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ಯಶೋಧರಮ್ಮ ಅವರು ಶಿವಪುರದ ಧ್ವಜ ಸತ್ಯಾಗ್ರಹ ಸೌಧದಲ್ಲಿ ರಾಷ್ಟ್ರಧ್ವಜವನ್ನು ಸಂರಕ್ಷಿಸಿದ ಪ್ರಕರಣವನ್ನು ವಿವರಿಸುವ ಮೂಲಕ ಸಭಿಕರನ್ನು ಸೆಳೆದರು.</p>.<p>ಇದಕ್ಕೂ ಮುನ್ನ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ ಅವರು, ಯಶೋಧರಮ್ಮ ಅವರ ಜೀವನ ಸಾಧನೆಗಳನ್ನು ಕುರಿತು ಮಾತನಾಡಿದರು. ಚಿಂತಕರಾದ ಲೀಲಾ ಅಪ್ಪಾಜಿ ಅವರು ಪ್ರಧಾನ ಭಾಷಣ ಮಾಡಿದರು.</p>.<p>ಪಾನನಿರೋಧಕ್ಕೆ ಆಗ್ರಹಿಸಿ ಯಶೋಧರಮ್ಮ ಅವರು ಸಚಿವ ಪದವಿಗೆ ರಾಜೀನಾಮೆ ನೀಡಿದ ಪ್ರಸಂಗ, ಅವರು ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ತಮ್ಮ ಸ್ವಂತ ಮನೆಯನ್ನೇ ಬಿಟ್ಟುಕೊಟ್ಟ ವಿಚಾರಗಳನ್ನು ಕುರ್ಚಿಯಿಂದ ಕದಲದೇ ಪ್ರೇಕ್ಷಕರು ಆಲಿಸಿದರು.</p>.<p>ಪ್ರೊ.ಎಂ.ಕೃಷ್ಣೇಗೌಡ ಮಾತನಾಡಿ, ‘ಮಹಾತ್ಮ ಗಾಂಧೀಜಿ ರಾಷ್ಟ್ರಪಿತರೋ ಅಥವಾ ರಾಷ್ಟ್ರದ್ರೋಹಿಯೋ ಎಂಬ ಚರ್ಚೆ ಸಾಮಾಜಿಕ ಮಾಧ್ಯಮಗಳಲ್ಲಿ ನಡೆಯುತ್ತಿರುವ ಅನೈತಿಕ ರಾಜಕಾರಣದ ಫಲ’ ಎಂದು ಕಿಡಿಕಾರಿದರು.</p>.<p>‘ವೋಟ್ ಬ್ಯಾಂಕ್ ರಾಜಕಾರಣಕ್ಕೆ ಎಲ್ಲ ಪಕ್ಷಗಳೂ ನೀಚ ರಾಜಕಾರಣ ಮಾಡಿದ್ದರ ಫಲವೇ ಇದು’ ಎಂದು ವಿಶ್ಲೇಷಿಸಿದ ಅವರು, ರಾಜಕಾರಣಿಗಳು ಲಜ್ಜೆಗೆಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಎಡ ಪಂಥೀಯ ಹಾಗೂ ಬಲ ಪಂಥೀಯ ಎನ್ನುವ ರೋಗ ರಾಜಕಾರಣಿಗಳನ್ನು ಮಾತ್ರವಲ್ಲ ಸಾಹಿತಿಗಳನ್ನೂ ಬಿಟ್ಟಿಲ್ಲ. ಒಂದೊಂದು ಪಕ್ಷಕ್ಕೆ ಸೇರಿದವರ ಹಾಗೆ ಸಾಹಿತಿಗಳು ಮಾತನಾಡುತ್ತಿರುವುದು ಸರಿಯಲ್ಲ ಎಂದು ಟೀಕಿಸಿದರು.</p>.<p>ನಾಗರತ್ಮಮ್ಮ ಜವರೇಗೌಡ, ಮಾಣಿಕ್ಯ ಶಾಮಣ್ಣಶೆಟ್ಟಿ, ಪ್ರೇಮಾವತಿ ಆರ್.ಜಿ.ಮಧುರವೇಲು ಅವರನ್ನು ಸನ್ಮನಿಸಲಾಯಿತು.</p>.<p>ಎಚ್.ಸಿ.ದಾಸಪ್ಪ ಸಾರ್ವಜನಿಕ ವಿಚಾರ ಸಂಸ್ಥೆಯ ಅಧ್ಯಕ್ಷ ವಾಸು, ಯಶೋಧರಪ್ಪ ದಾಸಪ್ಪ ಅವರ ಕುಟಂಬಸ್ಥರಾದ ಸರೋಜಮ್ಮ ತುಳಸಿದಾಸಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>