ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಕ್ಷದಲ್ಲಿ ಒಡಕಿದೆ ಎಂಬ ಸಂದೇಶವನ್ನು ಈ ಬೆಳವಣಿಗೆಗಳು ರವಾನಿಸುತ್ತವೆ- ಡಾ.ಯತೀಂದ್ರ

Last Updated 27 ಫೆಬ್ರುವರಿ 2021, 11:08 IST
ಅಕ್ಷರ ಗಾತ್ರ

ಚಾಮರಾಜನಗರ: 'ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ‌ ನಡೆದಿರುವ ಬೆಳವಣಿಗೆ ದುರದೃಷ್ಟಕರ. ಪಕ್ಷದ ನಾಯಕರೊಬ್ಬರಿಗೆ ಹಿನ್ನಡೆ ಮಾಡಬೇಕು ಎಂಬ ಕಾರಣಕ್ಕೆ ನಮ್ಮ ಪಕ್ಷದ ಮುಖಂಡರೇ ಸೇರಿ ಮಾಡಿರುವ ಕೆಲಸ ಇದು' ಎಂದು ವರುಣಾ ಕ್ಷೇತ್ರದ ಶಾಸಕ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮಗ ಡಾ.ಯತೀಂದ್ರ ಅವರು ಹೇಳಿದರು.

ನಗರದಲ್ಲಿ‌ ನಡೆದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅವರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, 'ಇಂತಹದ್ದು ನಡೆಯ ಬಾರದು. ಪಕ್ಷದಲ್ಲಿ ಒಡಕಿದೆ ಎಂಬ ಸಂದೇಶವನ್ನು ಇಂತಹ ಬೆಳವಣಿಗೆಗಳು ರವಾನಿಸುತ್ತವೆ' ಎಂದರು.

'ಇಂತಹ ಘಟನೆಗಳು ರಾಜ್ಯದಲ್ಲಿ ಎಲ್ಲೂ ಮರುಕಳಿಸಬಾರದು. ಎಲ್ಲ‌ ಮುಖಂಡರು ಒಗ್ಗಟ್ಟಾಗಿರುವಂತೆ ಕೆಪಿಸಿಸಿ ಅಧ್ಯಕ್ಷರು, ಕಾರ್ಯಾಧ್ಯಕ್ಷರು ನೋಡಿಕೊಳ್ಳಬೇಕು ಎಂದು‌ ಮನವಿ ಮಾಡುತ್ತೇನೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT