<p><strong>ಮೈಸೂರು: </strong>ದಸರಾ ವಸ್ತು ಪ್ರದರ್ಶನ ಮಳಿಗೆಗಳದ್ದು ಅದೇ ರಾಗ, ಅದೇ ಹಾಡು. ನಾಡಹಬ್ಬದ ಉದ್ಘಾಟನೆ ವೇಳೆಗೆ ಸರ್ಕಾರದ ವಿವಿಧ ಇಲಾಖೆಗಳ, ನಿಗಮ ಮಂಡಳಿಗಳು ಮತ್ತು ಜಿಲ್ಲಾ ಪಂಚಾಯಿತಿಗಳ ಮಳಿಗೆಗಳು ಸಿದ್ಧಗೊಂಡಿರುವುದಿಲ್ಲ. ಈ ಬಾರಿಯೂ ಹಳೆಯ ಕತೆ ಮುಂದುವರಿದಿದೆ.</p>.<p>ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಸ್ತು ಪ್ರದರ್ಶನವನ್ನು ಭಾನುವಾರ ಉದ್ಘಾಟಿಸಿದರು. ಒಂದು ಕಡೆ ಉದ್ಘಾಟನಾ ಸಮಾರಂಭ ನಡೆಯುತ್ತಿದ್ದರೆ, ಇನ್ನೊಂದು ಕಡೆ ನಿರ್ಮಾಣ ಕೆಲಸ ಭರದಿಂದ ಸಾಗಿತ್ತು.</p>.<p>ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಗಳ 18, ವಿವಿಧ ನಿಗಮ ಮಂಡಳಿಗಳ 19 ಮತ್ತು ಜಿಲ್ಲಾ ಪಂಚಾಯಿತಿಗಳ ಆರು ಮಳಿಗೆಗಳು ಈ ಬಾರಿ ವಸ್ತು ಪ್ರದರ್ಶನದಲ್ಲಿ ಇರಲಿವೆ. ಇವುಗಳಲ್ಲಿ ಮೊದಲ ದಿನ ಉದ್ಘಾಟನೆಯಾಗಿದ್ದು ಎರಡು ಮಳಿಗೆಗಳು ಮಾತ್ರ.</p>.<p>ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಳಿಗೆಗಳನ್ನು ಉದ್ಘಾಟಿಸಿದರು. ಪ್ರವಾಸೋದ್ಯಮ ಇಲಾಖೆ ಒಳಗೊಂಡಂತೆ ನಾಲ್ಕೈದು ಮಳಿಗೆಗಳ ನಿರ್ಮಾಣ ಶೇ 80 ರಷ್ಟು ಪೂರ್ಣಗೊಂಡಿವೆ.</p>.<p>ಇನ್ನುಳಿದ ಮಳಿಗೆಗಳ ಕೆಲಸ ಆರಂಭಿಕ ಹಂತದಲ್ಲಿವೆ. ಕೆಲವು ಇಲಾಖೆಗಳು ಇನ್ನೂ ಕೆಲಸವನ್ನೇ ಆರಂಭಿಸಿಲ್ಲ! ಎಲ್ಲ 43 ಮಳಿಗೆಗಳು ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಲು ಕನಿಷ್ಠ 15 ದಿನಗಳಾದರೂ ಬೇಕು.</p>.<p>‘ಎಲ್ಲ ಮಳಿಗೆಗಳು ಇನ್ನೂ ಆರಂಭವಾಗಿಲ್ಲ. ಉದ್ಘಾಟನೆ ಮಾಡುವುದು ನನ್ನ ಕರ್ತವ್ಯ. ಆದ್ದರಿಂದ ವಸ್ತು ಪ್ರದರ್ಶನಕ್ಕೆ ಅಧಿಕೃತ ಚಾಲನೆ ನೀಡಿದ್ದೇನೆ’ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.</p>.<p>ತಡವಾಗಿ ಟೆಂಡರ್: ಈ ಬಾರಿ ಟೆಂಡರ್ ಪ್ರಕ್ರಿಯೆಯೇ ತಡವಾಗಿ ನಡೆದಿದೆ. ಇದರಿಂದ ಗುತ್ತಿಗೆದಾರರಿಗೆ ಮಳಿಗೆಗಳ ನಿರ್ಮಾಣಕ್ಕೆ ಸಾಕಷ್ಟು ಸಮಯ ದೊರೆತಿಲ್ಲ. 15 ದಿನಗಳ ಹಿಂದೆಯಷ್ಟೇ ಕೆಲಸಗಳು ಆರಂಭವಾಗಿದ್ದವು.</p>.<p>‘ಇ–ಪ್ರಕ್ಯೂರ್ಮೆಂಟ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಇದರಿಂದ ಟೆಂಡರ್ ಪ್ರಕ್ರಿಯೆ ಅಂತಿಮಗೊಳಿಸಲು ತಡವಾಗಿದೆ. ಆರು ಮಳಿಗೆಗಳು ಸಿದ್ಧವಾಗಿದ್ದು, ಅ.6ರ ಒಳಗೆ ಎಲ್ಲ ಮಳಿಗೆಗಳು ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಲಿದೆ’ ಎಂದು ವಸ್ತು ಪ್ರದರ್ಶನ ಪ್ರಾಧಿಕಾರದ ಸಿಇಒ ಗಿರೀಶ್ ತಿಳಿಸಿದರು.</p>.<p>‘10 ದಿನಗಳ ಹಿಂದೆಯಷ್ಟೇ ನಿರ್ಮಾಣ ಆರಂಭಿಸಿದ್ದೆವು. ಹಗಲು ರಾತ್ರಿ ಕೆಲಸ ಮಾಡಿದ್ದರಿಂದ ಉದ್ಘಾಟನೆ ವೇಳೆ ಮಳಿಗೆ ಸಿದ್ಧಗೊಂಡಿದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಳಿಗೆ ನಿರ್ಮಾಣದ ಗುತ್ತಿಗೆ ವಹಿಸಿಕೊಂಡಿರುವ ಸಂಸ್ಥೆಯ ಪ್ರತಿನಿಧಿ ಪ್ರತಿಕ್ರಿಯಿಸಿದರು.</p>.<p>ದಸರಾ ಉದ್ಘಾಟನೆ ವೇಳೆಗೆ ಎಲ್ಲ ಮಳಿಗೆಗಳು ಸಿದ್ಧವಾಗಿರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಸಲ ಎಚ್ಚರಿಕೆ ಕೊಟ್ಟಿದ್ದರು. ಆದರೂ ಹಳೆಯ ಕತೆ ಮುಂದುವರಿದಿದೆ.</p>.<p>ಈ ಬಾರಿ 150 ವಾಣಿಜ್ಯ ಮಳಿಗೆಗಳು ಮತ್ತು 100 ಕ್ಕೂ ಅಧಿಕ ಆಹಾರ ಮಳಿಗೆಗಳು ಇರಲಿವೆ. ಇದರ ಜತೆಗೆ ಮನರಂಜನಾ ಪಾರ್ಕ್ ನಿರ್ಮಾಣ ಕೂಡಾ ಅಂತಿಮ ಹಂತದಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ದಸರಾ ವಸ್ತು ಪ್ರದರ್ಶನ ಮಳಿಗೆಗಳದ್ದು ಅದೇ ರಾಗ, ಅದೇ ಹಾಡು. ನಾಡಹಬ್ಬದ ಉದ್ಘಾಟನೆ ವೇಳೆಗೆ ಸರ್ಕಾರದ ವಿವಿಧ ಇಲಾಖೆಗಳ, ನಿಗಮ ಮಂಡಳಿಗಳು ಮತ್ತು ಜಿಲ್ಲಾ ಪಂಚಾಯಿತಿಗಳ ಮಳಿಗೆಗಳು ಸಿದ್ಧಗೊಂಡಿರುವುದಿಲ್ಲ. ಈ ಬಾರಿಯೂ ಹಳೆಯ ಕತೆ ಮುಂದುವರಿದಿದೆ.</p>.<p>ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಸ್ತು ಪ್ರದರ್ಶನವನ್ನು ಭಾನುವಾರ ಉದ್ಘಾಟಿಸಿದರು. ಒಂದು ಕಡೆ ಉದ್ಘಾಟನಾ ಸಮಾರಂಭ ನಡೆಯುತ್ತಿದ್ದರೆ, ಇನ್ನೊಂದು ಕಡೆ ನಿರ್ಮಾಣ ಕೆಲಸ ಭರದಿಂದ ಸಾಗಿತ್ತು.</p>.<p>ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಗಳ 18, ವಿವಿಧ ನಿಗಮ ಮಂಡಳಿಗಳ 19 ಮತ್ತು ಜಿಲ್ಲಾ ಪಂಚಾಯಿತಿಗಳ ಆರು ಮಳಿಗೆಗಳು ಈ ಬಾರಿ ವಸ್ತು ಪ್ರದರ್ಶನದಲ್ಲಿ ಇರಲಿವೆ. ಇವುಗಳಲ್ಲಿ ಮೊದಲ ದಿನ ಉದ್ಘಾಟನೆಯಾಗಿದ್ದು ಎರಡು ಮಳಿಗೆಗಳು ಮಾತ್ರ.</p>.<p>ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಳಿಗೆಗಳನ್ನು ಉದ್ಘಾಟಿಸಿದರು. ಪ್ರವಾಸೋದ್ಯಮ ಇಲಾಖೆ ಒಳಗೊಂಡಂತೆ ನಾಲ್ಕೈದು ಮಳಿಗೆಗಳ ನಿರ್ಮಾಣ ಶೇ 80 ರಷ್ಟು ಪೂರ್ಣಗೊಂಡಿವೆ.</p>.<p>ಇನ್ನುಳಿದ ಮಳಿಗೆಗಳ ಕೆಲಸ ಆರಂಭಿಕ ಹಂತದಲ್ಲಿವೆ. ಕೆಲವು ಇಲಾಖೆಗಳು ಇನ್ನೂ ಕೆಲಸವನ್ನೇ ಆರಂಭಿಸಿಲ್ಲ! ಎಲ್ಲ 43 ಮಳಿಗೆಗಳು ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಲು ಕನಿಷ್ಠ 15 ದಿನಗಳಾದರೂ ಬೇಕು.</p>.<p>‘ಎಲ್ಲ ಮಳಿಗೆಗಳು ಇನ್ನೂ ಆರಂಭವಾಗಿಲ್ಲ. ಉದ್ಘಾಟನೆ ಮಾಡುವುದು ನನ್ನ ಕರ್ತವ್ಯ. ಆದ್ದರಿಂದ ವಸ್ತು ಪ್ರದರ್ಶನಕ್ಕೆ ಅಧಿಕೃತ ಚಾಲನೆ ನೀಡಿದ್ದೇನೆ’ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.</p>.<p>ತಡವಾಗಿ ಟೆಂಡರ್: ಈ ಬಾರಿ ಟೆಂಡರ್ ಪ್ರಕ್ರಿಯೆಯೇ ತಡವಾಗಿ ನಡೆದಿದೆ. ಇದರಿಂದ ಗುತ್ತಿಗೆದಾರರಿಗೆ ಮಳಿಗೆಗಳ ನಿರ್ಮಾಣಕ್ಕೆ ಸಾಕಷ್ಟು ಸಮಯ ದೊರೆತಿಲ್ಲ. 15 ದಿನಗಳ ಹಿಂದೆಯಷ್ಟೇ ಕೆಲಸಗಳು ಆರಂಭವಾಗಿದ್ದವು.</p>.<p>‘ಇ–ಪ್ರಕ್ಯೂರ್ಮೆಂಟ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಇದರಿಂದ ಟೆಂಡರ್ ಪ್ರಕ್ರಿಯೆ ಅಂತಿಮಗೊಳಿಸಲು ತಡವಾಗಿದೆ. ಆರು ಮಳಿಗೆಗಳು ಸಿದ್ಧವಾಗಿದ್ದು, ಅ.6ರ ಒಳಗೆ ಎಲ್ಲ ಮಳಿಗೆಗಳು ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಲಿದೆ’ ಎಂದು ವಸ್ತು ಪ್ರದರ್ಶನ ಪ್ರಾಧಿಕಾರದ ಸಿಇಒ ಗಿರೀಶ್ ತಿಳಿಸಿದರು.</p>.<p>‘10 ದಿನಗಳ ಹಿಂದೆಯಷ್ಟೇ ನಿರ್ಮಾಣ ಆರಂಭಿಸಿದ್ದೆವು. ಹಗಲು ರಾತ್ರಿ ಕೆಲಸ ಮಾಡಿದ್ದರಿಂದ ಉದ್ಘಾಟನೆ ವೇಳೆ ಮಳಿಗೆ ಸಿದ್ಧಗೊಂಡಿದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಳಿಗೆ ನಿರ್ಮಾಣದ ಗುತ್ತಿಗೆ ವಹಿಸಿಕೊಂಡಿರುವ ಸಂಸ್ಥೆಯ ಪ್ರತಿನಿಧಿ ಪ್ರತಿಕ್ರಿಯಿಸಿದರು.</p>.<p>ದಸರಾ ಉದ್ಘಾಟನೆ ವೇಳೆಗೆ ಎಲ್ಲ ಮಳಿಗೆಗಳು ಸಿದ್ಧವಾಗಿರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಸಲ ಎಚ್ಚರಿಕೆ ಕೊಟ್ಟಿದ್ದರು. ಆದರೂ ಹಳೆಯ ಕತೆ ಮುಂದುವರಿದಿದೆ.</p>.<p>ಈ ಬಾರಿ 150 ವಾಣಿಜ್ಯ ಮಳಿಗೆಗಳು ಮತ್ತು 100 ಕ್ಕೂ ಅಧಿಕ ಆಹಾರ ಮಳಿಗೆಗಳು ಇರಲಿವೆ. ಇದರ ಜತೆಗೆ ಮನರಂಜನಾ ಪಾರ್ಕ್ ನಿರ್ಮಾಣ ಕೂಡಾ ಅಂತಿಮ ಹಂತದಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>