ಚಂಡಮಾರುತಕ್ಕೆ ಸಿಲುಕಿ ಜಪಾನ್ ನಷ್ಟ ಅನುಭವಿಸಿರಬಹುದು. ಆದರೆ, ಇನ್ನೆರಡು ತಿಂಗಳಲ್ಲಿ ದೇಶವನ್ನು ಮುಂಚಿನಂತೆ ಕಟ್ಟಬಲ್ಲ ಶಕ್ತಿ ಅಲ್ಲಿನ ಎಂಜಿನಿಯರುಗಳಿಗಿದೆ. ಅಲ್ಲಿನ ಜನರೂ ಅಷ್ಟೇ ಕಷ್ಟ ಸಹಿಷ್ಣುಗಳು. ಭಾರತದಲ್ಲಿ ಸೃಜನಶೀಲ, ಬುದ್ಧಿವಂತ ಯುವ ಜನತೆಯಿದೆ. ಮನಸು ಮಾಡಿದಲ್ಲಿ ಬೇರೆಲ್ಲ ದೇಶಗಳನ್ನು ಹಿಂದಿಕ್ಕಬಲ್ಲ ಶಕ್ತಿ ಇವರಿಗಿದೆ. ದೇಶ ಕಟ್ಟುವ ಸಂಕಲ್ಪವಷ್ಟೇ ಬೇಕಿದೆ ಎಂದು ಹೇಳಿದರು.