<p><strong>ಮೈಸೂರು:</strong> ಕಳೆದ 7 ದಿನಗಳಿಂದ ಇಲ್ಲಿನ ಯೂತ್ ಹಾಸ್ಟೆಲ್ನಲ್ಲಿ ತಂಗಿದ್ದ 132 ಮಂದಿ ಕಾಶ್ಮೀರದ ಯುವಕ, ಯುವತಿಯರು ಭಾರವಾದ ಮನಸ್ಸಿನಿಂದ ಬುಧವಾರ ತವರಿನತ್ತ ಹೆಜ್ಜೆ ಹಾಕಿದರು.</p>.<p>ಕೇಂದ್ರ ಯುವಜನ ಮತ್ತು ಕ್ರೀಡಾ ಸಚಿವಾಲಯ, ನೆಹರೂ ಯುವಕೇಂದ್ರ ಸಂಘಟನೆ ಹಾಗೂ ನೆಹರೂ ಯುವ ಕೇಂದ್ರ ಮೈಸೂರು ವತಿಯಿಂದ ಇಲ್ಲಿ ಏರ್ಪಡಿಸಲಾಗಿದ್ದ ‘ಕಾಶ್ಮೀರಿ ಯುವಜನ ವಿನಿಮಯ ಕಾರ್ಯಕ್ರಮ’ದಲ್ಲಿ ಬುಧವಾರ ನಡೆದ ಸಮಾರೋಪ ಸಮಾರಂಭದಲ್ಲಿ ಈ ದೃಶ್ಯಗಳು ಕಂಡು ಬಂದವು.</p>.<p>ಇವರು ಇಲ್ಲಿನ ಕೈಗಾರಿಕೆಗಳು, ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದರು. ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿ ಖುಷಿ ಪಟ್ಟರು.</p>.<p>ಈ ಕುರಿತು ಪ್ರತಿಕ್ರಿಯಿಸಿದ ಹಾಕಿಬ್ ನಜೀರ್, ‘ಕರ್ನಾಟಕ ಬಿಟ್ಟು ಹೋಗಲು ಮನಸ್ಸಾಗುತ್ತಿಲ್ಲ. ಇಲ್ಲಿಯೆ ನೆಲೆಸೋಣ ಎಂದು ಅನ್ನಿಸುತ್ತಿದೆ’ ಎಂದು ಭಾವುಕರಾದರು.</p>.<p>ಆರಿಫ್ ಹುಸೇನ್ ಪ್ರತಿಕ್ರಿಯಿಸಿ, ‘ಇಲ್ಲಿನ ಚಾಮುಂಡಿಬೆಟ್ಟ, ಅರಮನೆ ತುಂಬಾ ಇಷ್ಟವಾಯಿತು. ಕೈಗಾರಿಕೆಗಳ ಪ್ರಗತಿ ಕಂಡು ಬೆಕ್ಕಸಬೆರಗಾದೆ. ಕರ್ನಾಟಕದವರು ನಿಜಕ್ಕೂ ಅದೃಷ್ಟವಂತರು’ ಎಂದು ತಿಳಿಸಿದರು.</p>.<p>ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್, ‘ಭಾರತದ ಸಾಂಸ್ಕೃತಿಕ ವೈವಿಧ್ಯ ಉಳಿಸುವಲ್ಲಿ ಯುವ ಜನಾಂಗದ ಪಾತ್ರ ದೊಡ್ಡದು. ಯುವ ತಲೆಮಾರು ದೇಶದ ವೈವಿಧ್ಯಗಳನ್ನು ಅರಿತು ಎಲ್ಲರೂ ಒಗ್ಗಟ್ಟಾಗಿ ಸಾಗಬೇಕು’ ಎಂದು ತಿಳಿಸಿದರು.</p>.<p>ನಗರ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ಪ ಅವರು ತಾವು ಕಾಶ್ಮೀರದಲ್ಲಿ ಕಳೆದ ದಿನಗಳನ್ನು ಮೆಲುಕು ಹಾಕಿದರು.</p>.<p>ಭಾಗವಹಿಸಿದ್ದ ಎಲ್ಲರಿಗೂ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಮೈಸೂರು ಪೇಟಾಗೆ ಯುವಕರು ಮಾರುಹೋದರು. ಇದನ್ನು ತೊಟ್ಟುಕೊಂಡು ಸೆಲ್ಫೀ ತೆಗೆದುಕೊಂಡು ಸಂಭ್ರಮಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಕಳೆದ 7 ದಿನಗಳಿಂದ ಇಲ್ಲಿನ ಯೂತ್ ಹಾಸ್ಟೆಲ್ನಲ್ಲಿ ತಂಗಿದ್ದ 132 ಮಂದಿ ಕಾಶ್ಮೀರದ ಯುವಕ, ಯುವತಿಯರು ಭಾರವಾದ ಮನಸ್ಸಿನಿಂದ ಬುಧವಾರ ತವರಿನತ್ತ ಹೆಜ್ಜೆ ಹಾಕಿದರು.</p>.<p>ಕೇಂದ್ರ ಯುವಜನ ಮತ್ತು ಕ್ರೀಡಾ ಸಚಿವಾಲಯ, ನೆಹರೂ ಯುವಕೇಂದ್ರ ಸಂಘಟನೆ ಹಾಗೂ ನೆಹರೂ ಯುವ ಕೇಂದ್ರ ಮೈಸೂರು ವತಿಯಿಂದ ಇಲ್ಲಿ ಏರ್ಪಡಿಸಲಾಗಿದ್ದ ‘ಕಾಶ್ಮೀರಿ ಯುವಜನ ವಿನಿಮಯ ಕಾರ್ಯಕ್ರಮ’ದಲ್ಲಿ ಬುಧವಾರ ನಡೆದ ಸಮಾರೋಪ ಸಮಾರಂಭದಲ್ಲಿ ಈ ದೃಶ್ಯಗಳು ಕಂಡು ಬಂದವು.</p>.<p>ಇವರು ಇಲ್ಲಿನ ಕೈಗಾರಿಕೆಗಳು, ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದರು. ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿ ಖುಷಿ ಪಟ್ಟರು.</p>.<p>ಈ ಕುರಿತು ಪ್ರತಿಕ್ರಿಯಿಸಿದ ಹಾಕಿಬ್ ನಜೀರ್, ‘ಕರ್ನಾಟಕ ಬಿಟ್ಟು ಹೋಗಲು ಮನಸ್ಸಾಗುತ್ತಿಲ್ಲ. ಇಲ್ಲಿಯೆ ನೆಲೆಸೋಣ ಎಂದು ಅನ್ನಿಸುತ್ತಿದೆ’ ಎಂದು ಭಾವುಕರಾದರು.</p>.<p>ಆರಿಫ್ ಹುಸೇನ್ ಪ್ರತಿಕ್ರಿಯಿಸಿ, ‘ಇಲ್ಲಿನ ಚಾಮುಂಡಿಬೆಟ್ಟ, ಅರಮನೆ ತುಂಬಾ ಇಷ್ಟವಾಯಿತು. ಕೈಗಾರಿಕೆಗಳ ಪ್ರಗತಿ ಕಂಡು ಬೆಕ್ಕಸಬೆರಗಾದೆ. ಕರ್ನಾಟಕದವರು ನಿಜಕ್ಕೂ ಅದೃಷ್ಟವಂತರು’ ಎಂದು ತಿಳಿಸಿದರು.</p>.<p>ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್, ‘ಭಾರತದ ಸಾಂಸ್ಕೃತಿಕ ವೈವಿಧ್ಯ ಉಳಿಸುವಲ್ಲಿ ಯುವ ಜನಾಂಗದ ಪಾತ್ರ ದೊಡ್ಡದು. ಯುವ ತಲೆಮಾರು ದೇಶದ ವೈವಿಧ್ಯಗಳನ್ನು ಅರಿತು ಎಲ್ಲರೂ ಒಗ್ಗಟ್ಟಾಗಿ ಸಾಗಬೇಕು’ ಎಂದು ತಿಳಿಸಿದರು.</p>.<p>ನಗರ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ಪ ಅವರು ತಾವು ಕಾಶ್ಮೀರದಲ್ಲಿ ಕಳೆದ ದಿನಗಳನ್ನು ಮೆಲುಕು ಹಾಕಿದರು.</p>.<p>ಭಾಗವಹಿಸಿದ್ದ ಎಲ್ಲರಿಗೂ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಮೈಸೂರು ಪೇಟಾಗೆ ಯುವಕರು ಮಾರುಹೋದರು. ಇದನ್ನು ತೊಟ್ಟುಕೊಂಡು ಸೆಲ್ಫೀ ತೆಗೆದುಕೊಂಡು ಸಂಭ್ರಮಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>