<p><strong>ಮೈಸೂರು:</strong> ಬಹುಮತದೊಂದಿಗೆ ಮತ್ತೊಮ್ಮೆ ರಾಜ್ಯದ ಚುಕ್ಕಾಣಿ ಹಿಡಿಯಲೇಬೇಕು ಎಂಬ ಗುರಿ ಹೊಂದಿರುವ ಬಿಜೆಪಿ, ಹಳೆ ಮೈಸೂರು ಪ್ರಾಂತ್ಯದಲ್ಲಿ ಕಮಲ ಅರಳಿಸಲು ಈಗಿನಿಂದಲೇ ಸಿದ್ಧತೆ ಆರಂಭಿಸಿದೆ.</p>.<p>ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಜಿಲ್ಲೆಯ 32 ವಿಧಾನಸಭಾ ಕ್ಷೇತ್ರಗಳಲ್ಲಿ, ಪ್ರಸ್ತುತ 6 ಕ್ಷೇತ್ರಗಳಲ್ಲಿ ಮಾತ್ರ ಬಿಜೆಪಿ ಶಾಸಕರಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಈ ಸಂಖ್ಯೆ ಹೆಚ್ಚಿಸಿಕೊಳ್ಳಲಿಕ್ಕಾಗಿಯೇ ರಾಜ್ಯ ಘಟಕ ಕಸರತ್ತು ನಡೆಸಿದೆ.</p>.<p>ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಶುಕ್ರವಾರ ರಾಜ್ಯ ಘಟಕದ ಪದಾಧಿಕಾರಿಗಳ ಪಟ್ಟಿ ಪ್ರಕಟಿಸಿದ್ದು, ಹಳೆ ಮೈಸೂರು ಭಾಗದಿಂದ ಸಂಸದ ಪ್ರತಾಪ ಸಿಂಹ, ವಿಧಾನ ಪರಿಷತ್ನ ಮಾಜಿ ಸದಸ್ಯ ಸಿದ್ದರಾಜು ಹಾಗೂ ಪಕ್ಷ ನಿಷ್ಠ ಎಂ.ರಾಜೇಂದ್ರ ಅವರಿಗೆ ಅವಕಾಶ ಸಿಕ್ಕಿದೆ.</p>.<p>ಯುವ ಮೋರ್ಚಾ ಅಧ್ಯಕ್ಷರಾಗಿದ್ದ ಸಂಸದ ಪ್ರತಾಪಸಿಂಹ, ಇದೀಗ ರಾಜ್ಯ ಉಪಾಧ್ಯಕ್ಷ. ಪಕ್ಷಕ್ಕೆ ಸಾಕಷ್ಟು ಕೊಡುಗೆ ನೀಡುವ ಜೊತೆಗೆ ಸಂಘಟನೆಯಲ್ಲೂ ಸಕ್ರಿಯರಾಗಿದ್ದ ಎಂ.ರಾಜೇಂದ್ರ ಸಹ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ವಿಧಾನ ಪರಿಷತ್ನ ಮಾಜಿ ಸದಸ್ಯ ಸಿದ್ದರಾಜು ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿದ್ದು, ಈ ನೇಮಕದ ಹಿಂದೆ ಯುವ ಶಕ್ತಿ ಹಾಗೂ ಜಾತಿ ಸಮೀಕರಣದ ಸೂತ್ರ ಬಳಸಲಾಗಿದೆ ಎಂಬ ವಿಶ್ಲೇಷಣೆ ಕೇಳಿ ಬಂದಿದೆ.</p>.<p>ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಬಿ.ವೈ.ವಿಜಯೇಂದ್ರ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದು, ಹಳೆ ಮೈಸೂರು ಪ್ರಾಂತ್ಯದಲ್ಲೂ ಪಕ್ಷ ಸಂಘಟನೆಯ ಹೊಣೆ ಹೊರಲಿದ್ದಾರೆ ಎನ್ನಲಾಗಿದೆ.</p>.<p>ಒಕ್ಕಲಿಗ, ನಾಯಕ ಹಾಗೂ ಧ್ವನಿ ಇಲ್ಲದ ವರ್ಗದವರನ್ನು ತನ್ನತ್ತ ಸೆಳೆಯಲಿಕ್ಕಾಗಿಯೇ ದೂರದೃಷ್ಟಿಯ ಆಲೋಚನೆಯಿಂದ ಕಮಲ ಪಾಳೆಯದಿಂದ ಈ ನೇಮಕ ನಡೆದಿದೆ ಎಂಬುದು ತಿಳಿದು ಬಂದಿದೆ. ಯಡಿಯೂರಪ್ಪ ಬೆನ್ನಿಗೆ ನಿಂತಿರುವ ಲಿಂಗಾಯತ ಸಮುದಾಯದ ಒಲವು ಉಳಿಸಿಕೊಳ್ಳಲಿಕ್ಕಾಗಿ ವಿಜಯೇಂದ್ರ ಸಹ ಈ ಭಾಗದ ಸಂಘಟನೆಯಲ್ಲಿ ಸಕ್ರಿಯರಾಗಲಿದ್ದಾರೆ ಎಂದು ಹೆಸರು ಬಹಿರಂಗಪಡಿಸಲಿಚ್ಚಿಸದ ಬಿಜೆಪಿಯ ಮುಖಂಡರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಪ್ರತಾಪ ಸಿಂಹ ಯುವ ಸಮುದಾಯದಲ್ಲಿ ತಮ್ಮದೇ ವರ್ಚಸ್ಸು ಹೊಂದಿದ್ದಾರೆ. ಮೂರು ದಶಕದ ಅವಧಿಯಲ್ಲಿ ಮೈಸೂರು ಲೋಕಸಭಾ ಕ್ಷೇತ್ರವನ್ನು ಸತತ ಎರಡನೇ ಬಾರಿಗೆ ಪ್ರತಿನಿಧಿಸಿದ ಹಿರಿಮೆ ಹೊಂದಿದ್ದಾರೆ. ವಿಜಯೇಂದ್ರ ಸಹ ಈ ಭಾಗದಲ್ಲಿನ ಎಲ್ಲ ವರ್ಗದವರ ಒಲವು ಗಳಿಸಿಕೊಂಡಿದ್ದು, ಯುವ ಶಕ್ತಿಯ ಸಮ್ಮಿಳಿತ, ಜಾತಿ ಸಮೀಕರಣದ ಸೂತ್ರದೊಂದಿಗೆ, ಮುಂದಿನ ಬಾರಿಯಾದರೂ ಹಂಗಿಲ್ಲದ ಸರ್ಕಾರ ರಚನೆಯ ಕಸರತ್ತಿಗೆ ವರಿಷ್ಠರು ಚಾಲನೆ ನೀಡಿದ್ದಾರೆ. ಇದಕ್ಕೆ ಈ ಭಾಗದಲ್ಲಿ ಹೆಚ್ಚಿನ ಶಾಸಕರು ಗೆಲ್ಲಲೇಬೇಕಿದೆ. ಸಂಪುಟ ವಿಸ್ತರಣೆ ಸಂದರ್ಭ ಕುರುಬ ಸಮುದಾಯದ, ಅಹಿಂದ ಮುಖಂಡ ಎಚ್.ವಿಶ್ವನಾಥ್ ಸಚಿವರಾಗುವುದು ಬಹುತೇಕ ಖಚಿತ. ಇದೂ ಸಹ ಪಕ್ಷ ಸಂಘಟನೆಗೆ ಪೂರಕವಾಗಲಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಬಹುಮತದೊಂದಿಗೆ ಮತ್ತೊಮ್ಮೆ ರಾಜ್ಯದ ಚುಕ್ಕಾಣಿ ಹಿಡಿಯಲೇಬೇಕು ಎಂಬ ಗುರಿ ಹೊಂದಿರುವ ಬಿಜೆಪಿ, ಹಳೆ ಮೈಸೂರು ಪ್ರಾಂತ್ಯದಲ್ಲಿ ಕಮಲ ಅರಳಿಸಲು ಈಗಿನಿಂದಲೇ ಸಿದ್ಧತೆ ಆರಂಭಿಸಿದೆ.</p>.<p>ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಜಿಲ್ಲೆಯ 32 ವಿಧಾನಸಭಾ ಕ್ಷೇತ್ರಗಳಲ್ಲಿ, ಪ್ರಸ್ತುತ 6 ಕ್ಷೇತ್ರಗಳಲ್ಲಿ ಮಾತ್ರ ಬಿಜೆಪಿ ಶಾಸಕರಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಈ ಸಂಖ್ಯೆ ಹೆಚ್ಚಿಸಿಕೊಳ್ಳಲಿಕ್ಕಾಗಿಯೇ ರಾಜ್ಯ ಘಟಕ ಕಸರತ್ತು ನಡೆಸಿದೆ.</p>.<p>ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಶುಕ್ರವಾರ ರಾಜ್ಯ ಘಟಕದ ಪದಾಧಿಕಾರಿಗಳ ಪಟ್ಟಿ ಪ್ರಕಟಿಸಿದ್ದು, ಹಳೆ ಮೈಸೂರು ಭಾಗದಿಂದ ಸಂಸದ ಪ್ರತಾಪ ಸಿಂಹ, ವಿಧಾನ ಪರಿಷತ್ನ ಮಾಜಿ ಸದಸ್ಯ ಸಿದ್ದರಾಜು ಹಾಗೂ ಪಕ್ಷ ನಿಷ್ಠ ಎಂ.ರಾಜೇಂದ್ರ ಅವರಿಗೆ ಅವಕಾಶ ಸಿಕ್ಕಿದೆ.</p>.<p>ಯುವ ಮೋರ್ಚಾ ಅಧ್ಯಕ್ಷರಾಗಿದ್ದ ಸಂಸದ ಪ್ರತಾಪಸಿಂಹ, ಇದೀಗ ರಾಜ್ಯ ಉಪಾಧ್ಯಕ್ಷ. ಪಕ್ಷಕ್ಕೆ ಸಾಕಷ್ಟು ಕೊಡುಗೆ ನೀಡುವ ಜೊತೆಗೆ ಸಂಘಟನೆಯಲ್ಲೂ ಸಕ್ರಿಯರಾಗಿದ್ದ ಎಂ.ರಾಜೇಂದ್ರ ಸಹ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ವಿಧಾನ ಪರಿಷತ್ನ ಮಾಜಿ ಸದಸ್ಯ ಸಿದ್ದರಾಜು ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿದ್ದು, ಈ ನೇಮಕದ ಹಿಂದೆ ಯುವ ಶಕ್ತಿ ಹಾಗೂ ಜಾತಿ ಸಮೀಕರಣದ ಸೂತ್ರ ಬಳಸಲಾಗಿದೆ ಎಂಬ ವಿಶ್ಲೇಷಣೆ ಕೇಳಿ ಬಂದಿದೆ.</p>.<p>ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಬಿ.ವೈ.ವಿಜಯೇಂದ್ರ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದು, ಹಳೆ ಮೈಸೂರು ಪ್ರಾಂತ್ಯದಲ್ಲೂ ಪಕ್ಷ ಸಂಘಟನೆಯ ಹೊಣೆ ಹೊರಲಿದ್ದಾರೆ ಎನ್ನಲಾಗಿದೆ.</p>.<p>ಒಕ್ಕಲಿಗ, ನಾಯಕ ಹಾಗೂ ಧ್ವನಿ ಇಲ್ಲದ ವರ್ಗದವರನ್ನು ತನ್ನತ್ತ ಸೆಳೆಯಲಿಕ್ಕಾಗಿಯೇ ದೂರದೃಷ್ಟಿಯ ಆಲೋಚನೆಯಿಂದ ಕಮಲ ಪಾಳೆಯದಿಂದ ಈ ನೇಮಕ ನಡೆದಿದೆ ಎಂಬುದು ತಿಳಿದು ಬಂದಿದೆ. ಯಡಿಯೂರಪ್ಪ ಬೆನ್ನಿಗೆ ನಿಂತಿರುವ ಲಿಂಗಾಯತ ಸಮುದಾಯದ ಒಲವು ಉಳಿಸಿಕೊಳ್ಳಲಿಕ್ಕಾಗಿ ವಿಜಯೇಂದ್ರ ಸಹ ಈ ಭಾಗದ ಸಂಘಟನೆಯಲ್ಲಿ ಸಕ್ರಿಯರಾಗಲಿದ್ದಾರೆ ಎಂದು ಹೆಸರು ಬಹಿರಂಗಪಡಿಸಲಿಚ್ಚಿಸದ ಬಿಜೆಪಿಯ ಮುಖಂಡರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಪ್ರತಾಪ ಸಿಂಹ ಯುವ ಸಮುದಾಯದಲ್ಲಿ ತಮ್ಮದೇ ವರ್ಚಸ್ಸು ಹೊಂದಿದ್ದಾರೆ. ಮೂರು ದಶಕದ ಅವಧಿಯಲ್ಲಿ ಮೈಸೂರು ಲೋಕಸಭಾ ಕ್ಷೇತ್ರವನ್ನು ಸತತ ಎರಡನೇ ಬಾರಿಗೆ ಪ್ರತಿನಿಧಿಸಿದ ಹಿರಿಮೆ ಹೊಂದಿದ್ದಾರೆ. ವಿಜಯೇಂದ್ರ ಸಹ ಈ ಭಾಗದಲ್ಲಿನ ಎಲ್ಲ ವರ್ಗದವರ ಒಲವು ಗಳಿಸಿಕೊಂಡಿದ್ದು, ಯುವ ಶಕ್ತಿಯ ಸಮ್ಮಿಳಿತ, ಜಾತಿ ಸಮೀಕರಣದ ಸೂತ್ರದೊಂದಿಗೆ, ಮುಂದಿನ ಬಾರಿಯಾದರೂ ಹಂಗಿಲ್ಲದ ಸರ್ಕಾರ ರಚನೆಯ ಕಸರತ್ತಿಗೆ ವರಿಷ್ಠರು ಚಾಲನೆ ನೀಡಿದ್ದಾರೆ. ಇದಕ್ಕೆ ಈ ಭಾಗದಲ್ಲಿ ಹೆಚ್ಚಿನ ಶಾಸಕರು ಗೆಲ್ಲಲೇಬೇಕಿದೆ. ಸಂಪುಟ ವಿಸ್ತರಣೆ ಸಂದರ್ಭ ಕುರುಬ ಸಮುದಾಯದ, ಅಹಿಂದ ಮುಖಂಡ ಎಚ್.ವಿಶ್ವನಾಥ್ ಸಚಿವರಾಗುವುದು ಬಹುತೇಕ ಖಚಿತ. ಇದೂ ಸಹ ಪಕ್ಷ ಸಂಘಟನೆಗೆ ಪೂರಕವಾಗಲಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>