ಸಫಾರಿ: ನಾಗರಹೊಳೆ ರಾಷ್ಟ್ರೀಯ ಉದ್ಯಾನದ ವೀರನಹೊಸಹಳ್ಳಿ, ನಾಗರಹೊಳೆ, ದಮನಕಟ್ಟೆ, ಅಂತರಸಂತೆ ಸಫಾರಿ ಕೇಂದ್ರ ಆರಂಭಗೊಂಡಿದ್ದು, 35 ಜನರು ಸಫಾರಿ ಮಾಡಿದರು. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೆಳಿಗ್ಗೆ 11 ಜನರು, ಮಧ್ಯಾಹ್ನ 36 ಮಂದಿ ಸಫಾರಿಗೆ ತೆರಳಿ ವನ್ಯಜೀವಿಗಳನ್ನು ವೀಕ್ಷಿಸಿದರು. ರಂಗನತಿಟ್ಟು ಪಕ್ಷಿಧಾಮಕ್ಕೆ ಬೆರಳೆಣಿಕೆ ಪ್ರವಾಸಿಗರು ಭೇಟಿ ನೀಡಿದರು.