<p><strong>ಮೈಸೂರು: </strong>ಇಲ್ಲಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಶನಿವಾರ ಸೇರಿದ್ದವರ ಕಣ್ಣಾಲಿಗಳು ತೇವಗೊಂಡಿದ್ದವು. ‘ಹೀಗಾಗಬಾರದಿತ್ತು’ ಎಂದು ಅವರು ಆಡಿಕೊಳ್ಳುತ್ತಿದ್ದರು. ‘ಈ ಸಾವು ನ್ಯಾಯವೇ’ ಎಂಬ ಮಾತು ಅಲ್ಲಿ ಕೇಳಿ ಬರುತಿತ್ತು.</p>.<p>ಆನೆ ದಾಳಿಯಿಂದ ಮೃತಪಟ್ಟ ಹರೀಶ್ ಅವರ ಪಾರ್ಥೀವ ಶರೀರದ ದರ್ಶನಕ್ಕೆ ಮೃಗಾಲಯದ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಕಂಡು ಬಂದ ದೃಶ್ಯಗಳು ಎಲ್ಲರನ್ನೂ ಮರುಗುವಂತೆ ಮಾಡಿದವು.</p>.<p>ಹರೀಶ್ ಪತ್ನಿ ಸಂಗೀತಾ ತಮ್ಮ ಎರಡು ಚಿಕ್ಕ ಮಕ್ಕಳೊಂದಿಗೆ ರೋಧಿಸುತ್ತಿದ್ದರು. ಮತ್ತೊಂದು ಕಡೆ ಹರೀಶ್ ಅವರ ತಾಯಿ ಗೋಳಿಡುತ್ತಿದ್ದರು. ಮೃಗಾಲಯದ ಸಿಬ್ಬಂದಿ ಇವರನ್ನು ಸಮಾಧಾನಪಡಿಸಲು ಆಗದೇ ಪರಿತಪಿಸುತ್ತಿದ್ದರು.</p>.<p>ಸ್ಥಳಕ್ಕೆ ಬಂದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ₹ 10 ಲಕ್ಷ ಪರಿಹಾರದ ಚೆಕ್ ನೀಡಿದರು. ಆದರೆ, ಮೃತರ ಸಂಬಂಧಿಕರು ಅಂತ್ಯಸಂಸ್ಕಾರಕ್ಕೆ ಒಪ್ಪದೆ, ಪತ್ನಿ ಸಂಗೀತಾ ಅವರಿಗೆ ಅನುಕಂಪದ ಉದ್ಯೋಗ ನೀಡಬೇಕು ಎಂದು ಪಟ್ಟು ಹಿಡಿದರು. ಈ ವೇಳೆ ಇವರನ್ನು ಸಮಾಧಾನಪಡಿಸಲು ಅಧಿಕಾರಿಗಳು ಹರಸಾಹಸಪಟ್ಟರು.</p>.<p>‘ಭವಿಷ್ಯನಿಧಿ, ವಿಮೆ ಸೇರಿದಂತೆ ₹ 5 ಲಕ್ಷದಷ್ಟು ಹಣ ಮುಂದಿನ ದಿನಗಳಲ್ಲಿ ಸಿಗಲಿದೆ. ಉದ್ಯೋಗ ನೀಡುವುದು ನಮ್ಮ ಕೈಯಲ್ಲಿಲ್ಲ. ಸರ್ಕಾರಕ್ಕೆ ಈ ಕುರಿತು ಪ್ರಸ್ತಾವ ಸಲ್ಲಿಸಲಾಗುವುದು’ ಎಂದು ಭರವಸೆ ನೀಡಿದರು. ಬಳಿಕ ಸಂಬಂಧಿಕರು ಅಂತಿಮ ವಿಧಿವಿಧಾನಕ್ಕೆ ಒಪ್ಪಿಗೆ ನೀಡಿದರು. ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ.ರವಿ ಸಹ ಅಂತಿಮ ದರ್ಶನ ಪಡೆದರು.</p>.<p class="Briefhead"><strong>ಕುಟುಂಬಕ್ಕೆ ಆಧಾರವಾಗಿದ್ದ ಹರೀಶ್</strong><br />‘ಹರೀಶ್ ಅವರ ತಂದೆ, ತಾತ, ದೊಡ್ಡಪ್ಪ, ಚಿಕ್ಕಪ್ಪ ಮೃಗಾಲಯದಲ್ಲಿ ಕೆಲಸ ಮಾಡುತ್ತಿದ್ದವರೇ ಆಗಿದ್ದರು. ಹಲವು ವರ್ಷಗಳ ಹಿಂದೆಯೇ ತಂದೆ ನಿಧನರಾಗಿದ್ದರು. ಸರಸ್ವತಮ್ಮ ಅವರ ಒಬ್ಬರೇ ಪುತ್ರರಾದ ಹರೀಶ್ ಕುಟುಂಬಕ್ಕೆ ಆಧಾರವಾಗಿದ್ದರು. 4 ವರ್ಷ ಮತ್ತು ಒಂದೂವರೆ ವರ್ಷದ ಮಗು ಹೊಂದಿರುವ ಪತ್ನಿ ಸಂಗೀತಾ ಅವರು ಗೃಹಿಣಿ. ಇವರಿಗೆ ಸ್ವಂತ ಜಮೀನೂ ಇಲ್ಲ. ಕುಟುಂಬಕ್ಕೆ ದಿಕ್ಕೇ ತೋಚದಾಗಿದೆ’ ಎಂದು ಲಲಿತಾದ್ರಿಪುರದ ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಇಲ್ಲಿನ ಚಾಮರಾಜೇಂದ್ರ ಮೃಗಾಲಯದಲ್ಲಿ ಶನಿವಾರ ಸೇರಿದ್ದವರ ಕಣ್ಣಾಲಿಗಳು ತೇವಗೊಂಡಿದ್ದವು. ‘ಹೀಗಾಗಬಾರದಿತ್ತು’ ಎಂದು ಅವರು ಆಡಿಕೊಳ್ಳುತ್ತಿದ್ದರು. ‘ಈ ಸಾವು ನ್ಯಾಯವೇ’ ಎಂಬ ಮಾತು ಅಲ್ಲಿ ಕೇಳಿ ಬರುತಿತ್ತು.</p>.<p>ಆನೆ ದಾಳಿಯಿಂದ ಮೃತಪಟ್ಟ ಹರೀಶ್ ಅವರ ಪಾರ್ಥೀವ ಶರೀರದ ದರ್ಶನಕ್ಕೆ ಮೃಗಾಲಯದ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಕಂಡು ಬಂದ ದೃಶ್ಯಗಳು ಎಲ್ಲರನ್ನೂ ಮರುಗುವಂತೆ ಮಾಡಿದವು.</p>.<p>ಹರೀಶ್ ಪತ್ನಿ ಸಂಗೀತಾ ತಮ್ಮ ಎರಡು ಚಿಕ್ಕ ಮಕ್ಕಳೊಂದಿಗೆ ರೋಧಿಸುತ್ತಿದ್ದರು. ಮತ್ತೊಂದು ಕಡೆ ಹರೀಶ್ ಅವರ ತಾಯಿ ಗೋಳಿಡುತ್ತಿದ್ದರು. ಮೃಗಾಲಯದ ಸಿಬ್ಬಂದಿ ಇವರನ್ನು ಸಮಾಧಾನಪಡಿಸಲು ಆಗದೇ ಪರಿತಪಿಸುತ್ತಿದ್ದರು.</p>.<p>ಸ್ಥಳಕ್ಕೆ ಬಂದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ₹ 10 ಲಕ್ಷ ಪರಿಹಾರದ ಚೆಕ್ ನೀಡಿದರು. ಆದರೆ, ಮೃತರ ಸಂಬಂಧಿಕರು ಅಂತ್ಯಸಂಸ್ಕಾರಕ್ಕೆ ಒಪ್ಪದೆ, ಪತ್ನಿ ಸಂಗೀತಾ ಅವರಿಗೆ ಅನುಕಂಪದ ಉದ್ಯೋಗ ನೀಡಬೇಕು ಎಂದು ಪಟ್ಟು ಹಿಡಿದರು. ಈ ವೇಳೆ ಇವರನ್ನು ಸಮಾಧಾನಪಡಿಸಲು ಅಧಿಕಾರಿಗಳು ಹರಸಾಹಸಪಟ್ಟರು.</p>.<p>‘ಭವಿಷ್ಯನಿಧಿ, ವಿಮೆ ಸೇರಿದಂತೆ ₹ 5 ಲಕ್ಷದಷ್ಟು ಹಣ ಮುಂದಿನ ದಿನಗಳಲ್ಲಿ ಸಿಗಲಿದೆ. ಉದ್ಯೋಗ ನೀಡುವುದು ನಮ್ಮ ಕೈಯಲ್ಲಿಲ್ಲ. ಸರ್ಕಾರಕ್ಕೆ ಈ ಕುರಿತು ಪ್ರಸ್ತಾವ ಸಲ್ಲಿಸಲಾಗುವುದು’ ಎಂದು ಭರವಸೆ ನೀಡಿದರು. ಬಳಿಕ ಸಂಬಂಧಿಕರು ಅಂತಿಮ ವಿಧಿವಿಧಾನಕ್ಕೆ ಒಪ್ಪಿಗೆ ನೀಡಿದರು. ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ.ರವಿ ಸಹ ಅಂತಿಮ ದರ್ಶನ ಪಡೆದರು.</p>.<p class="Briefhead"><strong>ಕುಟುಂಬಕ್ಕೆ ಆಧಾರವಾಗಿದ್ದ ಹರೀಶ್</strong><br />‘ಹರೀಶ್ ಅವರ ತಂದೆ, ತಾತ, ದೊಡ್ಡಪ್ಪ, ಚಿಕ್ಕಪ್ಪ ಮೃಗಾಲಯದಲ್ಲಿ ಕೆಲಸ ಮಾಡುತ್ತಿದ್ದವರೇ ಆಗಿದ್ದರು. ಹಲವು ವರ್ಷಗಳ ಹಿಂದೆಯೇ ತಂದೆ ನಿಧನರಾಗಿದ್ದರು. ಸರಸ್ವತಮ್ಮ ಅವರ ಒಬ್ಬರೇ ಪುತ್ರರಾದ ಹರೀಶ್ ಕುಟುಂಬಕ್ಕೆ ಆಧಾರವಾಗಿದ್ದರು. 4 ವರ್ಷ ಮತ್ತು ಒಂದೂವರೆ ವರ್ಷದ ಮಗು ಹೊಂದಿರುವ ಪತ್ನಿ ಸಂಗೀತಾ ಅವರು ಗೃಹಿಣಿ. ಇವರಿಗೆ ಸ್ವಂತ ಜಮೀನೂ ಇಲ್ಲ. ಕುಟುಂಬಕ್ಕೆ ದಿಕ್ಕೇ ತೋಚದಾಗಿದೆ’ ಎಂದು ಲಲಿತಾದ್ರಿಪುರದ ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>